Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಠಮಾನ್ಯಗಳ ಮೇಲೆ ಸರಕಾರದ ಕಣ್ಣೇಕೆ:...

ಮಠಮಾನ್ಯಗಳ ಮೇಲೆ ಸರಕಾರದ ಕಣ್ಣೇಕೆ: ಜಗದೀಶ್ ಶೆಟ್ಟರ್

ವಾರ್ತಾಭಾರತಿವಾರ್ತಾಭಾರತಿ8 Feb 2018 8:47 PM IST
share
ಮಠಮಾನ್ಯಗಳ ಮೇಲೆ ಸರಕಾರದ ಕಣ್ಣೇಕೆ: ಜಗದೀಶ್ ಶೆಟ್ಟರ್

ಬೆಂಗಳೂರು, ಫೆ.8: ರಾಜ್ಯ ಸರಕಾರವು ಮಠಗಳು, ಮಠಗಳಿಗೆ ಸೇರಿದ ದೇವಸ್ಥಾನಗಳು, ಮಠಗಳ ನಿಯಂತ್ರಗಳಿಗೆ ಒಳಪಟ್ಟ ಧಾರ್ಮಿಕ ಸಂಸ್ಥೆಗಳನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆಯಡಿಯಲ್ಲಿ ತರುವ ಸಂಬಂಧ ಮುಜುರಾಯಿ ಇಲಾಖೆ ಆಯುಕ್ತರು ಜ.29ರಂದು ಹೊರಡಿಸಿದ್ದ ಸುತ್ತೋಲೆಗೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರಕಾರವು ಹಿಂದೂ ದೇವಸ್ಥಾನ ಹಾಗೂ ಮಠಮಾನ್ಯಗಳ ಮೇಲೆ ಯಾಕೆ ಕಣ್ಣು ಹಾಕಿದೆ ಎಂಬುದು ಗೊತ್ತಾಗುತ್ತಿಲ್ಲ ಎಂದರು.

ಒಂದು ವರ್ಗದ ತುಷ್ಟೀಕರಣಕ್ಕಾಗಿ ಇಂತಹ ಪ್ರಯತ್ನಗಳನ್ನು ಸರಕಾರ ಮಾಡುವುದು ಬೇಡ. ಇದರಿಂದಾಗಿ, ಸಮಾಜದಲ್ಲಿನ ವ್ಯವಸ್ಥೆಯೆ ಹಾಳಾಗುತ್ತದೆ. ಮುಜರಾಯಿ ಇಲಾಖೆಯಿಂದ ಹೊರಡಿಸಲಾಗುವ ಸುತ್ತೋಲೆ ಬಗ್ಗೆ ಮುಖ್ಯಮಂತ್ರಿ ಹಾಗೂ ಮುಜರಾಯಿ ಸಚಿವರ ಗಮನಕ್ಕೆ ಬರುವುದಿಲ್ಲವೇ? ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಅದನ್ನು ಹಿಂಪಡೆಯಲಾಗಿದೆ ಎಂದು ಅವರು ಟೀಕಿಸಿದರು.

ರಾಜ್ಯದಲ್ಲಿ ಚುನಾವಣೆಯ ವಾತಾವರಣ ಬಂದಿದೆ. ಈ ಸರಕಾರದ ಅವಧಿಯಲ್ಲಿ 80 ಸಾವಿರ ಕೋಟಿ ರೂ.ಗಳು ಖರ್ಚಾಗದೆ ಹಾಗೆಯೇ ಉಳಿದಿದೆ. ಅಧಿಕಾರಿಗಳು ಸಚಿವರ ಮಾತನ್ನೇ ಕೇಳುತ್ತಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ನಿಮ್ಮ ಮಾತುಗಳಿಗೆ ಮಾನ್ಯತೆಯೆ ಇಲ್ಲದಂತಾಗುತ್ತದೆ ಎಂದು ಶೆಟ್ಟರ್ ಟೀಕಿಸಿದರು.

ಸಚಿವರ ಗೈರು: ಹಿರಿಯ ಸಚಿವರಾದ ಕಾಗೋಡು ತಿಮ್ಮಪ್ಪ ಇಷ್ಟು ವಯಸ್ಸಾಗಿದ್ದರೂ ಸದನದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಕ್ರಿಯಾಶೀಲರಾಗಿರುತ್ತಾರೆ. ಇತರ ಸಚಿವರಿಗೆ ಜವಾಬ್ದಾರಿಯಿಲ್ಲವೇ ಎಂದು ಅವರು ಪ್ರಶ್ನಿಸಿದರು.

ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಸಲ್ಲಿಸಲು ಈ ಸದನ ಯಾಕೆ ಬೇಕು ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಜೆಡಿಎಸ್ ಶಾಸಕ ವೈಎಸ್‌ವಿ ದತ್ತ, ಈ ಸರಕಾರ ಐದು ವರ್ಷಗಳನ್ನು ಪೂರೈಸುತ್ತಿದೆ. ಇಲ್ಲಿ ಕೇವಲ ರಾಜ್ಯಪಾಲರ ಭಾಷಣಕ್ಕೆ ವಂದನಾರ್ಪಣಾ ಸಲ್ಲಿಸುವುದಷ್ಟೇ ಅಲ್ಲ, ಸರಕಾರಕ್ಕೂ ವಂದನೆ ಸಲ್ಲಿಸುವ ಸಮಯ ಬಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಪೀಕರ್ ಪೀಠದಲ್ಲಿ ಆಸೀನರಾಗಿದ್ದ ಉಪ ಸಭಾಧ್ಯಕ್ಷ ಶಿವಶಂಕರೆಡ್ಡಿ, ರಾಜ್ಯ ಸರಕಾರದ ಮುಖ್ಯಸಚೇತಕ ಅಶೋಕ್‌ಪಟ್ಟಣ್‌ರನ್ನು ಸಂಬಂಧಪಟ್ಟ ಸಚಿವರನ್ನು ಸದನಕ್ಕೆ ಕರೆಸುವಂತೆ ಸೂಚಿಸಿದರು.

ಜಗದೀಶ್ ಶೆಟ್ಟರ್ ಮಾತು ಆರಂಭಿಸಿದಾಗ ಸದನದಲ್ಲಿ ಸಚಿವರಾದ ಕಾಗೋಡು ತಿಮ್ಮಪ್ಪ, ರಾಮಲಿಂಗಾರೆಡ್ಡಿ, ಡಾ.ಗೀತಾ ಮಹದೇವಪ್ರಸಾದ್ ಹೊರತುಪಡಿಸಿ ಬೇರೆ ಯಾರೂ ಇಲ್ಲದೆ ಇದ್ದದ್ದನ್ನು ಗಮನಿಸಿ ಜಗದೀಶ್ ಶೆಟ್ಟರ್ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X