Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಫ್ರಿಕದಲ್ಲಿ ಭಾರತದ ಕ್ರಿಕೆಟ್ ತಂಡಗಳ...

ಆಫ್ರಿಕದಲ್ಲಿ ಭಾರತದ ಕ್ರಿಕೆಟ್ ತಂಡಗಳ ಕಾಕತಾಳೀಯ ಗೆಲುವು...!

ಆಫ್ರಿಕ ತಂಡಗಳ ವಿರುದ್ಧ ಕೊಹ್ಲಿ ಪಡೆ 303 ರನ್, ಮಿಥಾಲಿ ಪಡೆ 302 ರನ್ ಸವಾಲು

ವಾರ್ತಾಭಾರತಿವಾರ್ತಾಭಾರತಿ8 Feb 2018 9:19 PM IST
share
ಆಫ್ರಿಕದಲ್ಲಿ ಭಾರತದ ಕ್ರಿಕೆಟ್ ತಂಡಗಳ ಕಾಕತಾಳೀಯ ಗೆಲುವು...!

ಹೊಸದಿಲ್ಲಿ, ಫೆ.8: ದಕ್ಷಿಣ ಆಫ್ರಿಕದಲ್ಲಿ ಏಕದಿನ ಸರಣಿಯನ್ನು ಆಡುತ್ತಿರುವ ಪುರುಷರ ತಂಡ ದಕ್ಷಿಣ ಆಫ್ರಿಕ ವಿರುದ್ಧದ ಪಂದ್ಯದಲ್ಲಿ 303ಮತ್ತು ಮಹಿಳೆಯರ ಕ್ರಿಕೆಟ್ ತಂಡ 302 ರನ್‌ಗಳನ್ನು ದಾಖಲಿಸಿ ಅಪೂರ್ವ ಸಾಧನೆಗೆ ಸಾಕ್ಷಿಯಾಗಿತ್ತು.

ಎರಡೂ ಪಂದ್ಯಗಳು ನಡೆದಿರುವುದು ದಕ್ಷಿಣ ಆಫ್ರಿಕದಲ್ಲಿ ಎನ್ನುವುದು ವಿಶೇಷ. ಆಫ್ರಿಕದ ಕೇಪ್‌ಟೌನ್‌ನ ನ್ಯೂಲಾಂಡ್‌ನಲ್ಲಿ ಬುಧವಾರ  ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 303 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ 160 ರನ್ ಮತ್ತು ಶಿಖರ್ ಧವನ್ 76 ರನ್‌ಗಳ ನೆರವಿನಲ್ಲಿ ಭಾರತ ಕಠಿಣ ಸವಾಲು ವಿಧಿಸಿತ್ತು.

  304 ರನ್‌ಗಳ ಕಠಿಣ ಸವಾಲನ್ನು ಪಡೆದ ದಕ್ಷಿಣ ಆಫ್ರಿಕ ತಂಡ ಕುಲ್‌ದೀಪ್ ಯಾದವ್(23ಕ್ಕೆ 4) ಮತ್ತು ಯಜುವೇಂದ್ರ ಚಹಾಲ್(46ಕ್ಕೆ 4) ದಾಳಿಗೆ ಸಿಲುಕಿ 40 ಓವರ್‌ಗಳಲ್ಲಿ 179 ರನ್‌ಗಳಿಗೆ ಆಲೌಟಾಗಿತ್ತು. ಭಾರತ 124ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಆರು ಪಂದ್ಯಗಳ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದೆ. ಇನ್ನೊಂದು ಪಂದ್ಯ ಜಯಿಸಿದರೆ ಭಾರತಕ್ಕೆ ಸರಣಿಯನ್ನು 4-0 ಅಂತರದಲ್ಲಿ ವಶಪಡಿಸಿಕೊಳ್ಳಲು ಸಾಧ್ಯ.

 ಕಿಂಬರ್ಲಿಯಲ್ಲಿ ನಡೆದ ಮಹಿಳೆಯರ ಏಕದಿನ ಪಂದ್ಯದಲ್ಲಿ ಭಾರತ ಸೃತಿ ಮಂಧಾನ ಶತಕ(135) , ಹರ್ಮನ್‌ಪ್ರೀತ್ ಕೌರ್(ಔಟಾಗದೆ 55) ಮತ್ತು ವೇದಾ ಕೃಷ್ಣಮೂರ್ತಿ (ಔಟಾಗದೆ 51) ನೆರವಿನಲ್ಲಿ ನಿಗದಿತ 50 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 302 ರನ್ ಗಳಿಸಿತ್ತು.

     ಗೆಲುವಿಗೆ 303 ರನ್‌ಗಳ ಸವಾಲು ಪಡೆದ ದ. ಆಫ್ರಿಕ ತಂಡ 30.5 ಓವರ್‌ಗಳಲ್ಲಿ ಪೂನಮ್ ಯಾದವ್(24ಕ್ಕೆ 4) ದಾಳಿಗೆ ತತ್ತರಿಸಿ 124 ರನ್‌ಗಳಿಗೆ ಆಲೌಟಾಗಿತ್ತು. ಭಾರತ 178 ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಆಡಲು ಬಾಕಿ ಇರುವಾಗಲೇ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.

  ಕೊಹ್ಲಿ ಪಡೆ ಈ ಪಂದ್ಯದಲ್ಲಿ ಮಿಥಾಲಿ ತಂಡಕ್ಕಿಂತ 1 ರನ್ ಹೆಚ್ಚು ಸಂಪಾದಿಸಿತ್ತು. ಕೊಹ್ಲಿ ಪಡೆ ಮರ್ಕರಮ್ ತಂಡವನ್ನು 179ರನ್‌ಗಳಿಗೆ ನಿಯಂತ್ರಿಸಿ 124 ರನ್‌ಗಳ ಗೆಲುವು ಸಾಧಿಸಿತ್ತು. ಇದೇ ವೇಳೆ ಮಹಿಳಾ ತಂಡ ಎದುರಾಳಿ ಡಿ ವ್ಯಾನ್ ನೀಕೆರ್ಕ್ ತಂಡವನ್ನು 124 ರನ್‌ಗಳಿಗೆ ನಿಯಂತ್ರಿಸಿ 178 ರನ್‌ಗಳ ಗೆಲುವು ದಾಖಲಿಸಿರುವುದು ವಿಶೇಷ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X