Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂವಿಧಾನದ ಮೇಲೆ ಭಾರೀ ಪ್ರಹಾರಕ್ಕೆ...

ಸಂವಿಧಾನದ ಮೇಲೆ ಭಾರೀ ಪ್ರಹಾರಕ್ಕೆ ಬಿಜೆಪಿ ಯೋಜನೆ: ಶಶಿ ತರೂರ್

ವಾರ್ತಾಭಾರತಿವಾರ್ತಾಭಾರತಿ8 Feb 2018 10:31 PM IST
share
ಸಂವಿಧಾನದ ಮೇಲೆ ಭಾರೀ ಪ್ರಹಾರಕ್ಕೆ ಬಿಜೆಪಿ ಯೋಜನೆ: ಶಶಿ ತರೂರ್

ಹೊಸದಿಲ್ಲಿ, ಫೆ.8: ಸಂಸತ್ತಿನ ಉಭಯ ಸದನಗಳಲ್ಲೂ ಬಹುಮತ ದೊರೆತರೆ ಸಂವಿಧಾನದ ಮೇಲೆ ಭಾರೀ ಪ್ರಹಾರ ನಡೆಸಲು ಬಿಜೆಪಿ ಯೋಜನೆ ಹಾಕಿಕೊಂಡಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

 ಕಾಶ್ಮೀರದ 370ನೇ ಪರಿಚ್ಛೇದ, ಜಾತ್ಯಾತೀತತೆ ಮುಂತಾದ ಸಂವಿಧಾನದ ವಿಷಯಗಳ ಮೇಲೆ ಬಿಜೆಪಿ ನಡೆಸುತ್ತಿರುವ ಆಕ್ರಮಣ ಹಿಂದೂ ರಾಷ್ಟ್ರ ನಿರ್ಮಿಸುವ ಪ್ರಯತ್ನದ ಒಂದು ಅಂಗವಾಗಿದೆ ಎಂದು ತರೂರ್ ಅಭಿಪ್ರಾಯಪಟ್ಟಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ‘ಹಿಂದುತ್ವದ ಆಕ್ರಮಣ’ವನ್ನು ಎದುರಿಸಲು ಕಾಂಗ್ರೆಸ್ ಹಾಗೂ ಇತರ ಸಮಾನಮನಸ್ಕ ಪಕ್ಷಗಳು ಒಗ್ಗೂಡುವ ಅಗತ್ಯವಿದೆ. ಅಗತ್ಯಬಿದ್ದರೆ ಚುನಾವಣೋತ್ತರ ಮೈತ್ರಿಯಲ್ಲಿ ಎಡಪಕ್ಷಗಳೂ ಕೈಜೋಡಿಸಬೇಕು ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಕೇರಳದ ಸಂಸದ ತರೂರ್ ಹೇಳಿದರು.

   ಈ ಹಿಂದೆ ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರದ ಅವಧಿಯಲ್ಲಿ ಸಂವಿಧಾನ ಪುನರ್ ಪರಿಶೀಲನಾ ಸಮಿತಿಯನ್ನು ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶ ಎನ್.ವೆಂಕಟಾಚಲಪತಿ ನೇತೃತ್ವದಲ್ಲಿ ರಚಿಸಿರುವುದನ್ನು ನೆನಪಿಸಿದ ತರೂರ್, ಆದರೆ ಹಿಂದೂ ರಾಷ್ಟ್ರನಿರ್ಮಾಣದ ಯೋಜನೆಗೆ ಇದು ನೆರವಾಗಲಿಲ್ಲ ಎಂದರು. ಆದರೆ ಈಗ ಆರೆಸ್ಸೆಸ್ ಸಿದ್ಧಾಂತವಾದಿ ಕೆ.ಎನ್.ಗೋವಿಂದಾಚಾರ್ಯರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಸಮಾಜವಾದ, ಜಾತ್ಯಾತೀತವಾದ ಎಲ್ಲವೂ ಕೊನೆಗೊಳ್ಳಬೇಕು ಎಂದು ಗೋವಿಂದಾಚಾರ್ಯ ಹೇಳಿರುವುದಾಗಿಯೂ ವರದಿಯಾಗಿದೆ. ಆದರೆ ಸಂಸತ್ತಿನ ಎರಡೂ ಸದನದಲ್ಲಿ ಬಹುಮತದ ಕೊರತೆ ಇರುವ ಕಾರಣ ತಮ್ಮ ಪ್ರಥಮಾವಧಿಯಲ್ಲೇ ಇಂತಹ ಒಂದು ಗಂಡಾಂತರಕಾರಿ ಕ್ರಮಕ್ಕೆ ಸರಕಾರ ಮುಂದಾಗಲು ಬಯಸುತ್ತಿಲ್ಲ . ಬಹುತೇಕ ಎಲ್ಲಾ ಪಕ್ಷಗಳೂ ಬಿಜೆಪಿಯ ಧೋರಣೆಯನ್ನು ಒಪ್ಪದ ಕಾರಣ ಬಿಜೆಪಿಗೆ ಮೂರನೇ ಎರಡರಷ್ಟು ಬಹುಮತ ದೊರೆತಿಲ್ಲ ಎಂದು ತರೂರ್ ಹೇಳಿದ್ದಾರೆ.

 ಒಮ್ಮೆ ಮೂರನೇ ಎರಡರಷ್ಟು ಬಹುಮತ ದೊರೆತರೆ ಸಂವಿಧಾನದ ಮೇಲೆ ಭಾರೀ ಪ್ರಹಾರಕ್ಕೆ ಅವರು ಸಿದ್ಧರಾಗಿದ್ದಾರೆ . ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಥರೂರ್ ಹೇಳಿದ್ದಾರೆ. ಜನಸಂಘದ ಮುಖಂಡ ದೀನ್‌ದಯಾಳ್ ಉಪಾಧ್ಯಾಯರ ಸಿದ್ಧಾಂತವನ್ನು ಆಡಳಿತ ಪಕ್ಷ ಅನುಸರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದೇ ದೀನದಯಾಳ್ ಉಪಾಧ್ಯಾಯರು ಸಂವಿಧಾನವು ಆಮದಾಗಿರುವ ಸಿದ್ಧಾಂತವನ್ನು ಹೊಂದಿರುವ ಕಾರಣ ಅದನ್ನು ಹರಿದು ಕಸದ ಬುಟ್ಟಿಗೆ ಎಸೆಯಬೇಕು ಎಂದು ಹೇಳಿಕೆ ನೀಡಿದ್ದರು ಎಂದೂ ತರೂರ್ ಹೇಳಿದರು.

  ಸಾರ್ವಜನಿಕವಾಗಿ ನಮ್ಮ ಧಾರ್ಮಿಕ ನಂಬಿಕೆಯನ್ನು ಪ್ರದರ್ಶಿಸದೆ, ಖಾಸಗಿಯಾಗಿ ಪ್ರಾರ್ಥನೆ ಸಲ್ಲಿಸಬಹುದು. ಆದರೆ ಬಿಜೆಪಿಯವರು ಹಾಗಲ್ಲ, ದೇವಸ್ಥಾನಕ್ಕೆ ಹೋಗುತ್ತಾರೆ. ಬಳಿಕ ನೋಡಿ ನಾವು ಕೂಡಾ ನಿಮ್ಮಂತೆಯೇ ಹಿಂದೂಗಳಾಗಿದ್ದು , ದೇವರಿಲ್ಲ ಎನ್ನುವ ಜಾತ್ಯಾತೀತವಾದಿಗಳ ಬದಲು ನಮಗೆ ಮತ ನೀಡಿ ಎಂದು ಮತದಾರರ ಮೇಲೆ ಪ್ರಭಾವ ಬೀರುತ್ತಾರೆ. ರಾಹುಲ್ ಗಾಂಧಿ ಗುಜರಾತ್‌ನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ - ಅವರು (ಬಿಜೆಪಿಯವರು) ದೇವಸ್ಥಾನಕ್ಕೆ ಹೋಗಿದ್ದಾರೆ. ನಾವು ಕೂಡಾ ಹೋಗಿದ್ದೇವೆ. ಇದರಲ್ಲೇನೂ ವಿಶೇಷವಿಲ್ಲ ಎಂದಿದ್ದರು.

ಅಂತಿಮವಾಗಿ ಈಗ ಗೋಚರಕ್ಕೆ ಬಂದಿರುವ ವಿಷಯವೆಂದರೆ ಐದು ವರ್ಷದ ಹಿಂದೆ ಕೇಂದ್ರ ಸರಕಾರ ನೀಡಿದ್ದ ಭರವಸೆಗಳಲ್ಲಿ ಯಾವುದೂ ಈಡೇರಿಲ್ಲ ಎಂದು ತರೂರ್ ಹೇಳಿದರು.

ಚುನಾವಣೆಯ ಬಳಿಕ ಎಡಪಕ್ಷಗಳ ಜೊತೆ ಖಂಡಿತಾ ಮೈತ್ರಿ ಮಾಡಿಕೊಳ್ಳಲಾಗುವುದು. ಚುನಾವಣೆಗೂ ಮೊದಲು ಕಾಂಗ್ರೆಸ್ ಜೊತೆ ಮೈತ್ರಿಗೆ ಅವರು ಒಪ್ಪದ ಕಾರಣ ಚುನಾವಣೋತ್ತರ ಮೈತ್ರಿಗೆ ಅವಕಾಶವಿದೆ ಎಂದು ಥರೂರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X