Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. “ಎಮ್ಮೆ ಕದಿಯಬೇಡಿ ಎಂದದ್ದಕ್ಕೆ ಮಾವನನ್ನು...

“ಎಮ್ಮೆ ಕದಿಯಬೇಡಿ ಎಂದದ್ದಕ್ಕೆ ಮಾವನನ್ನು ಕೊಂದು ನೇತಾಡಿಸಿದರು”

ನಿರಾಶ್ರಿತರ ಶಿಬಿರದಲ್ಲಿ ಭಯಾನಕ ಅನುಭವ ಬಿಚ್ಚಿಟ್ಟ ರೊಹಿಂಗ್ಯನ್ನರು

ವಾರ್ತಾಭಾರತಿವಾರ್ತಾಭಾರತಿ8 Feb 2018 10:53 PM IST
share
“ಎಮ್ಮೆ ಕದಿಯಬೇಡಿ ಎಂದದ್ದಕ್ಕೆ ಮಾವನನ್ನು ಕೊಂದು ನೇತಾಡಿಸಿದರು”

ನಯಪಾರಾ ನಿರಾಶ್ರಿತ ಶಿಬಿರ (ಕಾಕ್ಸ್‌ಬಝಾರ್, ಬಾಂಗ್ಲಾದೇಶ), ಫೆ. 8: ಬಾಂಗ್ಲಾದೇಶದ ಕಾಕ್ಸ್‌ಬಝಾರ್‌ನಲ್ಲಿರುವ ನಯಪಾರಾ ನಿರಾಶ್ರಿತ ಶಿಬಿರದಲ್ಲಿ ವಾಸಿಸುತ್ತಿರುವ ರೊಹಿಂಗ್ಯಾ ನಿರಾಶ್ರಿತರು ಸಾಕಷ್ಟು ಭಯಾನಕ ಅನುಭವಗಳ ಸರಮಾಲೆಯನ್ನೇ ಹೊಂದಿದ್ದಾರೆ.

ಈ ಶಿಬಿರಕ್ಕೆ ಇತ್ತೀಚೆಗೆ ಭೇಟಿ ನೀಡಿದ ‘ಅಸೋಸಿಯೇಟಡ್ ಪ್ರೆಸ್’ ಸುದ್ದಿ ಸಂಸ್ಥೆಯೊಂದಿಗೆ ಅಲ್ಲಿನ ನಿವಾಸಿಗಳು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಮ್ಯಾನ್ಮಾರ್‌ನಲ್ಲಿದ್ದಾಗ ಅಲ್ಲಿನ ಸರಕಾರ ತನ್ನ ಕುಟುಂಬ ಹಸಿದಿರುವಂತೆ ಮಾಡಿತ್ತು ಎಂದು ಶಿಬಿರದ ನಿವಾಸಿ ಅಬ್ದುಲ್ ಗೋನಿ ಹೇಳುತ್ತಾರೆ.

 ‘‘ನಾನು ಸೌದೆ ಮಾರಿ ಕುಟುಂಬವನ್ನು ಸಾಕುತ್ತಿದ್ದೆ. ಮೂರು ಗಂಟೆ ನಡೆದು ಕಾಡಿಗೆ ಹೋಗಿ ಸೌದೆ ತರುತ್ತಿದ್ದೆ’’ ಎಂದು ಅವರು ಹೇಳಿದರು.

‘‘ಮೊದಲು, ರೊಹಿಂಗ್ಯಾ ಮುಸ್ಲಿಮರು ಕಾಡಿಗೆ ಹೋಗದಂತೆ ಸೈನಿಕರು ತಡೆದರು. ಬಳಿಕ ನೆರೆಯ ಬೌದ್ಧರು ಮತ್ತು 7 ಸೈನಿಕರು ನನ್ನಲ್ಲಿದ್ದ ಒಂದೇ ಒಂದು ದನವನ್ನು ಕಸಿದುಕೊಂಡರು. ಆ ದನವನ್ನು ಭತ್ತದ ಗದ್ದೆಗಳಿಗೆ ಗೊಬ್ಬರಕ್ಕಾಗಿ ಬಾಡಿಗೆಗೆ ನೀಡಿದ್ದೆ.’’

 ‘‘ನಂತರ ಅವರು ತನ್ನ ಎಮ್ಮೆಗಳ ಕಳ್ಳತನವನ್ನು ವಿರೋಧಿಸಿದ ನನ್ನ ಮಾವನನ್ನು ಕೊಂದು ತಂತಿಯಲ್ಲಿ ನೇತಾಡಿಸಿದರು.’’

ಅಕ್ರಮವಾಗಿ ಮೀನುಗಾರಿಕೆ ನಡೆಸಿರುವುದಕ್ಕಾಗಿ ಅವರು ರೊಹಿಂಗ್ಯಾ ಮುಸ್ಲಿಮರನ್ನು ಕೊಂದರು. ಅವರ ಶವಗಳು ಸ್ಥಳೀಯ ನದಿಯಲ್ಲಿ ಹರಿಯುತ್ತಿದ್ದಾಗ, ಇಲ್ಲಿಂದ ಹೊರಡದಿದ್ದರೆ ತನ್ನ ಕುಟುಂಬ ಸದಸ್ಯರೂ ಹೀಗೆ ಸಾಯುತ್ತಾರೆ ಎಂದು ಗೋನಿ ಭಾವಿಸಿದರು.

ಕೆಲವು ದಿನಗಳಲ್ಲಿ ಅವರು ಬಾಳೆ ಗಿಡದ ದಿಂಡನ್ನೇ ಆಹಾರವಾಗಿ ಉಪಯೋಗಿಸಬೇಕಾಗುತ್ತಿತ್ತು. ಅತ್ಯಂತ ಕೆಟ್ಟ ದಿನಗಳಲ್ಲಿ ಮಕ್ಕಳು ಸೇರಿದಂತೆ ಇಡೀ ಕುಟುಂಬ ಉಪವಾಸವೇ ಇರಬೇಕಾಗುತ್ತಿತ್ತು.

‘‘ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿತ್ತು. ನಮ್ಮ ಮೇಲೆ ಒತ್ತಡ ಹೆಚ್ಚುತ್ತಿತ್ತು. ‘ಇದು ನಿಮ್ಮ ನೆಲವಲ್ಲ.. ನಾವು ನಿಮ್ಮನ್ನು ಉಪವಾಸ ಕೆಡವುತ್ತೇವೆ’ ಎಂದು ಅವರು ಹೇಳುತ್ತಿದ್ದರು’’ ಎಂದು 25 ವರ್ಷದ ಗೋನಿ ಹೇಳುತ್ತಾರೆ.

ವ್ಯವಸ್ಥಿತ ದಮನ ಕಾರ್ಯಾಚರಣೆ

 ‘‘ಮ್ಯಾನ್ಮಾರ್‌ನ ರಖೈನ್ ರಾಜ್ಯದ ಪಶ್ಚಿಮ ಭಾಗದಲ್ಲಿ ಸೈನಿಕರು ಮೊದಲು ಹತ್ಯಾಕಾಂಡ ಮತ್ತು ಅತ್ಯಾಚಾರ ನಡೆಸಿದರು. ಬಳಿಕ ರೊಹಿಂಗ್ಯಾರು ಹೆಚ್ಚಾಗಿ ವಾಸಿಸುತ್ತಿದ್ದ ಗ್ರಾಮಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದರು’’ ಎಂದು ಅಬ್ದುಲ್ ಗೋನಿ ಹೇಳುತ್ತಾರೆ.

ಆಗಸ್ಟ್ 25ರಂದು ರೊಹಿಂಗ್ಯಾ ಬಂಡುಕೋರರು ಸೇನೆ ಮತ್ತು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದ ಬಳಿಕ, ಪ್ರತೀಕಾರವಾಗಿ ಸೇನೆ ರೊಹಿಂಗ್ಯಾ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಿತು. ಸೇನಾ ದಮನ ಕಾರ್ಯಾಚರಣೆಗೆ ಬೆದರಿ ಈವರೆಗೆ ಸುಮಾರು 7 ಲಕ್ಷ ರೊಹಿಂಗ್ಯಾ ನಿರಾಶ್ರಿತರು ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ.

ಈಗ ಆಹಾರ ಪೂರೈಕೆಯನ್ನು ರೊಹಿಂಗ್ಯಾ ವಿರುದ್ಧ ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಗೋನಿ ಆರೋಪಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X