Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಸಿಯೂಟ ನೌಕರರ ಧರಣಿಗೆ ಮಣಿದ ಸರಕಾರ:...

ಬಿಸಿಯೂಟ ನೌಕರರ ಧರಣಿಗೆ ಮಣಿದ ಸರಕಾರ: ಅನಿರ್ದಿಷ್ಟಾವಧಿ ಧರಣಿ ವಾಪಸ್

ವಾರ್ತಾಭಾರತಿವಾರ್ತಾಭಾರತಿ9 Feb 2018 10:05 PM IST
share
ಬಿಸಿಯೂಟ ನೌಕರರ ಧರಣಿಗೆ ಮಣಿದ ಸರಕಾರ: ಅನಿರ್ದಿಷ್ಟಾವಧಿ ಧರಣಿ ವಾಪಸ್

ಬೆಂಗಳೂರು, ಫೆ.9: ವೇತನ ಹೆಚ್ಚಳ, ಸಾಮಾಜಿಕ ಭದ್ರತೆ, ಉದ್ಯೋಗ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಎಐಟಿಯುಸಿ ಹಾಗೂ ಸಿಐಟಿಯು ನೇತೃತ್ವದಲ್ಲಿ ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ ಪ್ರತಿಭಟನಾಕಾರರೊಂದಿಗೆ ನಡೆದ ಸಂಧಾನ ಸಭೆಯಲ್ಲಿ, ಮುಂದಿನ ಬಜೆಟ್‌ನಲ್ಲಿ ಅನುದಾನ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರಿಂದ ಅನಿರ್ದಿಷ್ಟಾವಧಿ ಧರಣಿಯನ್ನು ಹಿಂಪಡೆಯಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಬಿಸಿಯೂಟ ನೌಕರರು ಚಳಿ-ಬಿಸಿಲನ್ನು ಲೆಕ್ಕಿಸದೇ ಮಕ್ಕಳ ಸಮೇತ ಬೀದಿಯಲ್ಲಿ ಧರಣಿ ನಡೆಸಿದರೂ, ಮೂರು ದಿನಗಳಿಂದ ಸರಕಾರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಅಲ್ಲದೆ, ಒಂದು ಬಾರಿ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಸರಕಾರದೊಂದಿಗೆ ಸಭೆ ನಡೆಸುವವರೆಗೂ ಧರಣಿ ಕೈ ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದರು.

ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ತನ್ವೀರ್ ಸೇಠ್ ಹಾಗೂ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಚಿತ್ರ ನಟರ ಬೆಂಬಲ: ಬಿಸಿಯೂಟ ನೌಕರರು ಭಿಕ್ಷೆ ಬೇಡುತ್ತಿಲ್ಲ, ಅವರು ಮಾಡುವ ಕೆಲಸಕ್ಕೆ ಸರಿಯಾದ ಕೂಲಿ ಕೊಡಿ ಎಂದು ಕೇಳುತ್ತಿದ್ದಾರೆ ಎಂದು ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದರು.

ಬಿಸಿಯೂಟ ನೌಕರರು ನ್ಯಾಯಯುತವಾದ ಬೇಡಿಕೆಗಳನ್ನಿಟ್ಟುಕೊಂಡು ಧರಣಿ ನಡೆಸುತ್ತಿದ್ದಾರೆ. ಅವರು ತಾವು ಮಾಡಿದ ಕೆಲಸಕ್ಕೆ ಆತ್ಮಗೌರವದಿಂದ ಜೀವನ ನಡೆಸಲು ಹಾಗೂ ಗೌರವಯುತವಾದ ಜೀವನಕ್ಕಾಗಿ ಬೇಕಾದ ಕನಿಷ್ಠ ವೇತನ ನೀಡಿ ಎಂದು ಬೇಡಿಕೆಯನ್ನಟ್ಟಿದ್ದಾರೆ. ಆದರೆ, ಆಳುವವರು ಅದನ್ನು ಈಡೇರಿಸದೇ, ಮೂರು-ನಾಲ್ಕು ದಿನಗಳಿಂದ ಬೀದಿಯಲ್ಲಿ ಮಲಗುವಂತೆ ಮಾಡಿರುವುದು ಖಂಡನೀಯ. ಸಾವಿರಾರು ನೌಕರರು ಬೆಂಗಳೂರಿನ ಬೀದಿಯಲ್ಲಿ ಮಲಗಿದ್ದಾರೆ. ಆದರೆ, ಅಧಿಕಾರದಲ್ಲಿರುವವರು ಎರಡು ನಿಮಿಷ ಬಂದು ಸಮಸ್ಯೆ ಕುರಿತು ಮಾತಾಡೋಕೆ ಸಮಯವಿಲ್ಲವಾ ಎಂದು ಬಹುಭಾಷಾ ನಟ ಪ್ರಕಾಶ್ ರೈ ಸರಕಾರವನ್ನು ಪ್ರಶ್ನಿಸಿದರು.

ನಮ್ಮ ದೇಶದಲ್ಲಿಂದು ನಮ್ಮ ಹಕ್ಕುಗಳಿಗಾಗಿ ನಾವೇ ಬೀದಿಗಿಳಿದು ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಮ್ಮಿಂದ ಮತ ಪಡೆದು ಹೋದವರು ನೆಮ್ಮದಿಯಾಗಿ ಜೀವನ ನಡೆಸುತ್ತಿದ್ದಾರೆ ಎಂದ ಅವರು, ನನ್ನ ದೇಶದ ಯುವಕರು ಕೆಲಸ ಕೊಡಿ, ರೈತರು ಬೆಳೆದ ಬೆಳೆಗೆ ಕನಿಷ್ಠ ಬೆಲೆ ಕೊಡಿ ಎಂದು ಬೀದಿಗಿಳಿದು ಚಳವಳಿ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸ. ರಾಜ್ಯದಲ್ಲಿ ಸಾವಿರಾರು ಬಿಸಿಯೂಟ ನೌಕರರು ಶಾಲೆಯ ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುತ್ತಾರೆ. ಅವರ ಬೇಡಿಕೆ ಈಡೇರಿಸಲು ಇಷ್ಟು ದಿನ ಬೇಕಾಯಿತಾ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಮಕ್ಕಳ ಪರದಾಟ
'ರಾಜ್ಯದ ಎಲ್ಲ ಜಿಲ್ಲೆಗಳಿಂದ ಬಿಸಿಯೂಟ ನೌಕರರು ನಗರದಲ್ಲಿ ಧರಣಿ ಮುಂದುವರಿಸಿರುವುದರಿಂದ ರಾಜ್ಯಾದ್ಯಂತ ಮಕ್ಕಳಿಗೆ ಅಡುಗೆ ಬಡಿಸಲು ಯಾರೂ ಇಲ್ಲದೆ ಪರದಾಡುವಂತಾಗಿತ್ತು. ಬಹುತೇಕ ಶಾಲೆಗಳಲ್ಲಿ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮತ್ತು ಪೋಷಕರು ಊಟ ತಯಾರಿಸಿ ಮಕ್ಕಳಿಗೆ ನೀಡಿದ್ದಾರೆ ಹಾಗೂ ಹಲವು ಕಡೆಗಳಲ್ಲಿ ಮನೆಯಿಂದಲೇ ಮಕ್ಕಳಿಗೆ ಊಟದ ಡಬ್ಬಿಗಳನ್ನು ಕಳಿಸಿಕೊಟ್ಟಿದ್ದರು’

ಸಭೆಯ ಮುಖ್ಯಾಂಶಗಳು...
-ಕನಿಷ್ಠ ವೇತನ ನೀಡಲು ಸಾಧ್ಯವಿಲ್ಲ
-ಆರೋಗ್ಯ ವಿಮೆ ವಿಚಾರದಲ್ಲಿ ಯೂನಿವರ್ಸಲ್ ಹೆಲ್ತ್ ಸ್ಕೀಮ್‌ನಲ್ಲಿ ಅವಕಾಶ
-ಪಿಂಚಣಿಗೆ ಕಾರ್ಮಿಕ ಇಲಾಖೆಯೊಂದಿಗೆ ಮಾತುಕತೆ
-ಬಜೆಟ್ ಪೂರ್ವ ಘೋಷಣೆ ಮಾಡಲು ಸಾಧ್ಯವಿಲ್ಲ
-ಆರ್ಥಿಕ ಭರವಸೆ ಕೊಟ್ಟಿಲ್ಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X