Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭೆಗೆ ವಿರಾಮ: ಅಧಿವೇಶನ ಮಾ.5ಕ್ಕೆ...

ಲೋಕಸಭೆಗೆ ವಿರಾಮ: ಅಧಿವೇಶನ ಮಾ.5ಕ್ಕೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ9 Feb 2018 10:30 PM IST
share
ಲೋಕಸಭೆಗೆ ವಿರಾಮ: ಅಧಿವೇಶನ ಮಾ.5ಕ್ಕೆ ಮುಂದೂಡಿಕೆ

ಹೊಸದಿಲ್ಲಿ, ಫೆ.9: ಆಂಧ್ರಪ್ರದೇಶಕ್ಕೆ ಹೆಚ್ಚಿನ ಬಜೆಟ್ ಅನುದಾನಕ್ಕೆ ಒತ್ತಾಯಿಸಿ ಆಂಧ್ರಪ್ರದೇಶದ ಸಂಸದರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿರುವಂತೆಯೇ ಲೋಕಸಭೆಯ ಅಧಿವೇಶನವನ್ನು ಒಂದು ತಿಂಗಳ ವಿರಾಮದ ಕಾರಣ ಮುಂಡೂಡಲಾಗಿದೆ.

 ಶುಕ್ರವಾರದ ಕಲಾಪದಲ್ಲಿ ಮಂಡಿಸಲು ಪಟ್ಟಿಯಾಗಿದ್ದ ಪೇಪರ್(ದಾಖಲೆ)ಗಳನ್ನು ಮಂಡಿಸಿದ ಸ್ಪೀಕರ್ ಸುಮಿತ್ರಾ ಮಹಾಜನ್ , ಮಾರ್ಚ್ 5ರಂದು ಸದನ ಮರುಸಮಾವೇಶಗೊಳ್ಳಲಿದೆ ಎಂದು ಪ್ರಕಟಿಸಿದರು.

 ಪ್ರಶ್ನೋತ್ತರ ಅವಧಿ ಆರಂಭವಾಗುತ್ತಿದ್ದಂತೆಯೇ ಸದನದಲ್ಲಿ ಗದ್ದಲದ ಕಾರಣ ಕಲಾಪವನ್ನು ಮುಂದೂಡಲಾಯಿತು. ಬಳಿಕ ಮರುಸಮಾವೇಶಗೊಂಡಾಗ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾದ ಟಿಡಿಪಿ(ತೆಲುಗುದೇಶಂ ಪಕ್ಷ) ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷಗಳ ಸುಮಾರು 15 ಸದಸ್ಯರು ಶೂನ್ಯವೇಳೆಯಲ್ಲಿ ಪ್ರತಿಭಟನೆ ಮುಂದುವರಿಸಿ ಸದನದ ಬಾವಿಗಿಳಿದು ಘೋಷಣೆ ಕೂಗಿದರು. ಇದೇ ವೇಳೆ ರಾಫೇಲ್ ಯುದ್ಧವಿಮಾನ ಒಪ್ಪಂದದ ಕುರಿತು ಸರಕಾರದ ಪ್ರತಿಕ್ರಿಯೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರೂ ಘೋಷಣೆ ಕೂಗತೊಡಗಿದಾಗ ಕಲಾಪವನ್ನು ಮುಂದೂಡಲಾಯಿತು. ಕಲಾಪ ಮುಂದೂಡಿದ ಬಳಿಕ ಸದನದಲ್ಲಿದ್ದ ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಜೊತೆ ಟಿಡಿಪಿ ಸದಸ್ಯರು ಮಾತುಕತೆ ನಡೆಸುತ್ತಿರುವುದು ಕಂಡು ಬಂದಿತು.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಬೇಕೆಂಬ ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಗುರುವಾರ ಟಿಡಿಪಿ ಸ್ಪಷ್ಟಪಡಿಸಿತ್ತು. ಕಳೆದ ಮಂಗಳವಾರ ಹೇಳಿಕೆ ನೀಡಿದ್ದ ವಿತ್ತಸಚಿವ ಅರುಣ್ ಜೇಟ್ಲಿ, ಆಂಧ್ರಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಕೇಂದ್ರ ಸರಕಾರ ಸಹಾನುಭೂತಿ ಹೊಂದಿದ್ದು , ವಿಶೇಷ ಪ್ಯಾಕೇಜ್ ನೀಡುವ ನಿರ್ಧಾರವನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದರು.

ಇದೀಗ ಬಜೆಟ್ ಅಧಿವೇಶನದ ಮೊದಲಾರ್ಧ ಅಂತ್ಯಗೊಂಡಿದ್ದು ವಿರಾಮದ ಬಳಿಕ ಮಾರ್ಚ್ 5ರಿಂದ ದ್ವಿತೀಯಾರ್ಧದ ಅಧಿವೇಶನ ಆರಂಭಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X