Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಅವನತಿಯತ್ತ ಕಾಡುಪಾಪ

ಅವನತಿಯತ್ತ ಕಾಡುಪಾಪ

ಶಂಕರಪ್ಪ .ಕೆ.ಪಿಶಂಕರಪ್ಪ .ಕೆ.ಪಿ10 Feb 2018 6:27 PM IST
share
ಅವನತಿಯತ್ತ ಕಾಡುಪಾಪ

ಆದಿವಾಸಿಗಳು ಕಾಡುಪಾಪದ ದೇಹದಲ್ಲಿ ಔಷಧೀಯ, ಅತಿಮಾನುಷ ಶಕ್ತಿ ಇದೆ ಎಂದು ನಂಬಿದ್ದಾರೆ. ಈ ನಂಬಿಕೆಯೇ ಇವುಗಳ ಸಂತತಿ ಕ್ಷೀಣಿಸಲು ಕಾರಣವಾಗಿದೆ. ಆವಾಸ ನಾಶವೂ ಕೂಡ ಇವುಗಳ ಅವನತಿಗೆ ಇನ್ನೊಂದು ಕಾರಣ.

ಕತ್ತಲೆಯಲ್ಲಿ ತಿರುಗಾಡುವ ಇವುಗಳ ಬದುಕೇ ಕತ್ತಲಾಗಿರುವ ಹೊತ್ತಿನಲ್ಲಿ. ಇಷ್ಟೊಂದು ಕಾಡುಪಾಪಗಳು ಒಟ್ಟಿಗೆ ಕಾಣಸಿಗುವುದು ಬಲು ಅಪರೂಪ. ಸಂಜೆಯ ವೇಳೆ ರೆಂಬೆಯಿಂದ ರೆಂಬೆಗೆ ಜಿಗಿಯುತ್ತ ವಿನೋದದಿಂದ ಆಟವಾಡುವ ಇವುಗಳನ್ನು ನೋಡುವುದೇ ಒಂದು ಆನಂದ. ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿಯ ಜರ್ನಲ್‌ನಲ್ಲಿ ಪ್ರಕಟಗೊಂಡ ತುಂಬ ಹಳೆಯದಾದ ಒಂದು ಅಪರೂಪದ ಛಾಯಾಚಿತ್ರ ಇದು. ಈ ಪುಟಾಣಿ ವಾನರವೂ ಕೂಡ ಜೀವವಿಕಾಸದಲ್ಲಿ ನಮಗೆ ಸಂಬಂಧಿ ಎಂಬುದು ಸೋಜಿಗ! ಇವು ಭೂಮಿಯಿಂದಲೇ ಶಾಶ್ವತವಾಗಿ ಕಣ್ಮರೆಯಾಗುತ್ತಿವೆಯಲ್ಲ ಎಂಬ ಮರುಕ.

ಬೆಳೆಯುತ್ತಿರುವ ಬೆಂಗಳೂರು ನಗರ ದಿನೇ ದಿನೇ ತನ್ನ ಸ್ವರೂಪವನ್ನು ಕಳೆದುಕೊಂಡು ಕಾಂಕ್ರಿಟ್ ಕಾಡಾಗುತ್ತಿದೆ ಎಂಬ ಆತಂಕ ಇಲ್ಲೇ ವಾಸವಿರುವ ಮೂಲ ಬೆಂಗಳೂರಿಗರ ಚಿಂತೆ. ಅಭಿವೃದ್ಧಿಯ ನೆಪದಲ್ಲಿ ಮೂಲ ಸೌಕರ್ಯಗಳನ್ನು ಉನ್ನತೀಕರಿಸುವ ಭರದಲ್ಲಿ ನಾವು ಈಗಾಗಲೇ ನಗರದ ಹಸಿರು ಹೊದಿಕೆಯನ್ನು ಕಳೆದುಕೊಂಡಿದ್ದೇವೆ. ಈಗಲೂ ಅಲ್ಲಲ್ಲಿ ಅಳಿದುಳಿದಿರುವ ಹಸಿರು ತಾಣಗಳಲ್ಲಿ ಕಾಗೆ, ಓತಿಕ್ಯಾತ, ಪಾರಿವಾಳ ಇವೇ ಮೊದಲಾದ ಜೀವಿಗಳು ಕಾಣಸಿಗುತ್ತವೆ. ನಗರೀಕರಣಗೊಂಡ ಈ ಸಿಲಿಕಾನ್ ಸಿಟಿಯಲ್ಲಿಯೂ ಅಲ್ಲಲ್ಲಿ ಉಳಿದಿರುವ ಹಸಿರುತಾಣಗಳಲ್ಲಿ ಈ ಕಾಡುಪಾಪಗಳು ಇನ್ನೂ ಉಸಿರಾಡಿಕೊಂಡಿವೆ ಎನ್ನುವುದೇ ಒಂದು ಸೋಜಿಗ!

‘‘ದಶಕಗಳ ಹಿಂದೆ ಹಳೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಕಾಡುಪಾಪಗಳು ಕಾಣಸಿಗುತ್ತಿದ್ದವು. ನಗರದ ಸುತ್ತಲಿನ ಹಳ್ಳಿಗಳಲ್ಲೂ ಹೇರಳವಾಗಿ ಕಾಣಸಿಗುತ್ತಿದ್ದವು. ಹಳ್ಳಿಯ ಜನರು ಇವುಗಳನ್ನು ಹಿಡಿದು ತಂದು ನಗರದ ಮಾರುಕಟ್ಟೆಯಲ್ಲಿ ಮಾರುತ್ತಿದ್ದರು’’ ಎಂಬ ಕಥೆಗಳನ್ನೂ 1960 ರಿಂದ 1990 ರ ಬೆಂಗಳೂರಿನ ಜನ ಹೇಳುತ್ತಾರೆ. ಈಗ ಇವುಗಳ ಸಂಖ್ಯೆ ಅತೀ ವಿರಳವಾಗಿದೆ. ಕಾರಣ ಬೃಹದಾಕಾರವಾಗಿ ಬೆಳೆದಿದ್ದ ದೊಡ್ಡ ದೊಡ್ಡ ಮರಗಳನ್ನೆಲ್ಲಾ ನಗರೀಕರಣ ನುಂಗಿ ಹಾಕಿದೆ. ಈ ಮರಗಳ ಮೇಲ್ಛಾವಣಿಯಲ್ಲಿ ಬದುಕಿದ್ದ ಕಾಡುಪಾಪಗಳು ತಮ್ಮ ನೆಲೆ ಕಳೆದುಕೊಂಡು ಪಾದಚಾರಿ ರಸ್ತೆಯಲ್ಲಿ ಸಿಕ್ಕಿವೆ. ಕೆಲವು ಸಲ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಚಕ್ರಕ್ಕೆ ಸಿಲುಕಿ ಸತ್ತಿರುವ ಸುದ್ದಿಗಳೂ ಇತ್ತೀಚೆಗೆ ವರದಿಯಾಗಿವೆ.

ದಕ್ಷಿಣ ಭಾರತ ಮತ್ತು ಶ್ರೀಲಂಕಾದಲ್ಲಿ ಮಾತ್ರ ಕಾಣಸಿಗುವ ಕೋತಿ ಜಾತಿಯ ಕಾಡುಪಾಪ, ಜೀವವಿಕಾಸ ವಾದದಲ್ಲಿ ಬರುವ ಮೊದಲ ಮಾನವರ ಪೂರ್ವಜರು.! ಕಾಡುಪಾಪಗಳು. ಇದು ಕೋತಿ ಜಾತಿಯಲ್ಲೇ ಅತಿ ಚಿಕ್ಕ ವಾನರ. ಕಾಡುಪಾಪ ರಾತ್ರಿ ವೇಳೆ ಒಂಟಿಯಾಗಿ ಕಾಣಸಿಗುವ ನಿಶಾಚರಿ. ಸಾಮಾನ್ಯವಾಗಿ ಇವು ಬೇವು, ಅಕೇಶಿಯಾ, ನೀಲಗಿರಿ, ಜಟ್ರೋಪ ಮರಗಳಲ್ಲಿ ಆಶ್ರಯ ಪಡೆದಿರುತ್ತವೆ. ತುಂಬಾ ನಾಚಿಕೆ ಸ್ವಭಾವದ ಈ ಪ್ರಾಣಿ ಮಾನವರನ್ನು ಕಂಡರೆ ಅಡಗಿಕೊಳ್ಳುತ್ತದೆೆ.

ಭಾರತದಲ್ಲಿ ಪಶ್ವಿಮಘಟ್ಟ ಹಾಗೂ ಪೂರ್ವಘಟ್ಟಗಳಲ್ಲಿ ಕಾಣಸಿಗುವ ಇದರ ಜೀವನಕ್ರಮದ ಬಗ್ಗೆ ಇನ್ನೂ ನಾವು ತಿಳಿಯಬೇಕಿದೆ. ಇವು ಗಾತ್ರದಲ್ಲಿ ಚಿಕ್ಕವು, ಇದರ ಕೈ-ಕಾಲುಗಳು ಪೆನ್ಸಿಲ್‌ನಷ್ಟು ಸಣ್ಣ. ಆರರಿಂದ ಹತ್ತು ಇಂಚು ಉದ್ದವಿರುವ ಈ ಕೋತಿ ಜಾತಿಯ ಜೀವಿಗೆ ಒಂದು ಸೆಂ.ಮೀ. ಉದ್ದದ ಬಾಲವಿದೆ! ತಲೆಯ ಮೇಲೆ ಎದ್ದು ಕಾಣುವ ಬೂದು ಬಣ್ಣದ ದೊಡ್ಡ ಕಣ್ಣುಗಳಿವೆ. ಮುಖದ ಮೇಲಿನ ಉದ್ದ ಮೂಗಿನ ತುದಿ ಹೃದಯಾಕಾರವಾಗಿದೆ. ತಲೆಯ ಮೇಲೆ ಎಂಟಾಣೆ ಗಾತ್ರದ ದುಂಡನೆಯ ಕಿವಿಗಳಿವೆ. ತಿಳಿ ಬೂದು ಕೆಂಪಿನ ಮೈಬಣ್ಣ. ಕೈಕಾಲಿನ ಮೇಲಿನ ರೋಮಗಳು ಚಿಕ್ಕವಾಗಿದ್ದು, ಬೆರಳುಗಳಲ್ಲಿ ಮಾನವರಿಗೆ ಇರುವಂತೆ ಉಗುರುಗಳಿವೆ. ಇದು ಮರದ ಮೇಲೆ ವಾಸಿಸುವ ಪ್ರಾಣಿ. ಇದು ತನ್ನ ಜೀವಿತಾವಧಿಯ ಬಹು ಭಾಗವನ್ನು ಮರದ ಮೇಲೆಯೇ ಕಳೆಯುತ್ತದೆ. ಇದರ ನಡಿಗೆ ಬಹು ನಿಧಾನ. ಆದರೆ ರೆಂಬೆಯಿಂದ ರೆಂಬೆಗೆ ಕರಾರುವಾಕ್ಕಾಗಿ ನಡೆಯುತ್ತದೆ. ಸಾಮಾನ್ಯವಾಗಿ ಗುಂಪು ಗುಂಪಾಗಿ ಬೇಟೆಯಾಡುತ್ತವೆ. ಜೋಡಿ ಕಾಡುಪಾಪಗಳು ತಮ್ಮ ಆಹಾರವನ್ನು ತಮ್ಮ ಮರಿಗಳೊಂದಿಗೆ ಹಂಚಿಕೊಂಡು ತಿನ್ನುತ್ತವೆ. ಮರದ ಪೊಟರೆಯಲ್ಲಿ ‘ವಿ’ ಆಕಾರದ ಕೊಂಬೆಗಳ ನಡುವೆ ಗುಂಪಾಗಿ ಮಲಗುತ್ತವೆ.

ಸೂರ್ಯೋದಯ ಮತ್ತು ಸೂರ್ಯಾಸ್ತಗಳಲ್ಲಿ ಹೆಚ್ಚು ಕ್ರಿಯಾಶೀಲವಾಗಿರುವ ಇವು ಕೊಂಬೆಗಳ ಮೇಲೆ ಆಟವಾಡುತ್ತ ವಿನೋದದಿಂದ ಕಚ್ಚಾಡುತ್ತಾ ತುಂಬಾ ಚಟುವಟಿಕೆಯಿಂದ ಇರುತ್ತವೆ. ಪ್ರತೀ ವರ್ಷ ಎಪ್ರಿಲ್-ಮೇ ಮತ್ತು ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಗರ್ಭಧರಿಸುತ್ತವೆ. ಗರ್ಭಧಾರಣೆಯಾದ 166-169 ದಿನಕ್ಕೆ ಒಂದು ಅಥವಾ ಎರಡು ಮರಿಗೆ ಜನ್ಮ ನೀಡುತ್ತವೆ. ತಾಯಿ ತನ್ನ ಮರಿಗಳನ್ನು ಕೆಲವು ವಾರದವರೆಗೂ ತನ್ನ ಬಳಿಯೇ ಇಟ್ಟುಕೊಂಡಿರುತ್ತದೆ. ಮರಿಗಳು ತಮ್ಮ ತಾಯಿಯನ್ನು ತಮ್ಮ ಕೈಕಾಲುಗಳಿಂದ ತಬ್ಬಿರುತ್ತವೆ. ಕೆಲವು ವಾರದ ನಂತರ ಮರಿಗಳನ್ನು ಸುರಕ್ಷಿತವಾದ ಕೊಂಬೆಯ ಮೇಲೆ ಕುಳ್ಳಿರಿಸಿ ತಾಯಿ ಬೇಟೆಗೆ ಹೋಗುತ್ತದೆ. ಮರಿಗಳು ಮೊದ ಮೊದಲು ಬಹಳ ನಿಧಾನವಾಗಿ ಚಲಿಸುತ್ತಾ ನಂತರ ಕಾಲ ಕಳೆದಂತೆ ಇವುಗಳ ಚಲನೆ ತೀವ್ರವಾಗುತ್ತದೆ. ಇವು 12-15 ವರ್ಷ ಜೀವಿಸಬಲ್ಲವು.

ಇವು ಕೀಟಹಾರಿ ಜೀವಿ. ಆದರೆ ಕೆಲವು ಬಾರಿ ಚಿಗುರೆಲೆ, ಹೂ, ಕಡ್ಡಿಗಳನ್ನೂ ತಿನ್ನುತ್ತವೆ. ಸಾಂದರ್ಭಿಕ ವಾಗಿ ಮರದ ಮೇಲಿನ ಹಕ್ಕಿಗೂಡುಗಳ ಮೇಲೆ ದಾಳಿ ಮಾಡಿ ಅಲ್ಲಿನ ಮೊಟ್ಟೆ ಮರಿಗಳನ್ನು ನುಂಗಿ ಗುಳುಂ ಮಾಡುತ್ತವೆ. ಅತೀ ಕೆಟ್ಟ ವಾಸನೆ ಬೀರುವ ಕೀಟಗಳನ್ನೂ ಬಿಡದೆ ಭಕ್ಷಿಸುತ್ತವೆ, ಅಲ್ಲದೆ ತಮ್ಮ ಮೂತ್ರದಿಂದ ಕೈಕಾಲು ಮುಖ ತೊಳೆದುಕೊಂಡು ಮೂತ್ರಸ್ನಾನ ಮಾಡುತ್ತವೆ. ಈ ಸ್ವಭಾವ ಅವುಗಳನ್ನು ವಿಷಕಾರಿ ಕೀಟಗಳು ಕಚ್ಚದ ಹಾಗೆ ತಡೆಯಲು ಮಾಡಿಕೊಂಡ ಉಪಾಯವಿರಬಹುದು.

ಆದಿವಾಸಿಗಳು ಕಾಡುಪಾಪದ ದೇಹದಲ್ಲಿ ಔಷಧೀಯ, ಅತಿಮಾನುಷ ಶಕ್ತಿ ಇದೆ ಎಂದು ನಂಬಿ ದ್ದಾರೆ. ಈ ನಂಬಿಕೆಯೇ ಇವುಗಳ ಸಂತತಿ ಕ್ಷೀಣಿಸಲು ಕಾರಣವಾಗಿದೆ. ಆವಾಸ ನಾಶವೂ ಕೂಡ ಇವುಗಳ ಅವನತಿಗೆ ಇನ್ನೊಂದು ಕಾರಣ.

ನಮ್ಮ ರಾಜ್ಯದಲ್ಲಿ ಇರುವ ಕಾಡುಪಾಪಗಳ ಸಂಖ್ಯೆ ಎಷ್ಟು? ಈ ಪ್ರಶ್ನೆಗೆ ಜೀವ ವಿಜ್ಞಾನಿಗಳ ಬಳಿಯೇ ಉತ್ತರವಿಲ್ಲ! ಇಷ್ಟು ಚಿಕ್ಕ ಗಾತ್ರದ ನಿಶಾಚರಿ ಜೀವಿಯನ್ನು ಹುಡುಕಿ ಗುರುತಿಸಿ ರಾತ್ರಿಯ ಕತ್ತಲೆ ಯಲ್ಲಿ ನಿಖರವಾಗಿ ಲೆಕ್ಕ ಹಾಕುವುದಾದರೂ ಹೇಗೆ? ಇತ್ತೀಚಿನವರೆಗೂ ಈ ಪುಟಾಣಿ ಜೀವಿಯ ಬಗ್ಗೆ ನಾವು ತಲೆಕೆಡಿಸಿಕೊಂಡಿದ್ದೇ ಕಮ್ಮಿ. ಭಾರತ ಸರಕಾರದ ಸಂರಕ್ಷಿತ ಜೀವಿಗಳ ಪಟ್ಟಿಯಲ್ಲಿ ಕಾಡುಪಾಪ ಇದೆಯಾದರೂ ಈ ಕಾನೂನಿನ ಪರಿಣಾಮ ಮಾತ್ರ ಅಳತೆಗೂ ಸಿಗುತ್ತಿಲ್ಲ.

share
ಶಂಕರಪ್ಪ .ಕೆ.ಪಿ
ಶಂಕರಪ್ಪ .ಕೆ.ಪಿ
Next Story
X