Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಗಳೂರು ಅಥವಾ ಉಳ್ಳಾಲದಲ್ಲಿ ರಾಣಿ...

ಮಂಗಳೂರು ಅಥವಾ ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಪ್ರತಿಮೆ ನಿರ್ಮಾಣವಾಗಲಿ : ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ10 Feb 2018 9:24 PM IST
share
ಮಂಗಳೂರು ಅಥವಾ ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಪ್ರತಿಮೆ ನಿರ್ಮಾಣವಾಗಲಿ : ಎಚ್.ಡಿ.ದೇವೇಗೌಡ

ಮೈಸೂರು,ಫೆ.10:  ಪೋರ್ಚುಗೀಸರಿಗೆ ಸಡ್ಡು ಹೊಡೆದು ಸ್ವಾಭಿಮಾನದಿಂದ ಹೋರಾಟ ನಡೆಸಿದ ರಾಣಿ ಅಬ್ಬಕ್ಕಳ ಇತಿಹಾಸವನ್ನು ಮಲ್ಲಿಗೆ ನಗರಿಯಲ್ಲಿ ಪಸರಿಸುವುದಲ್ಲದೆ, ಕನ್ನಡ ನಾಡಿನ ಕರಾವಳಿ ತೀರದ ಸಂಸ್ಕೃತಿ, ಪರಂಪರೆ, ಕಲೆ, ಸಾಹಿತ್ಯದ ಸೊಬಗನ್ನು ಇತರರಿಗೆ ಪರಿಚಯಿಸುವ ಮಹೋನ್ನತ ಉದ್ದೇಶದಿಂದ ನಗರದಲ್ಲಿ ಆಯೋಜಿಸಿರುವ ರಾಣಿ ಅಬ್ಬಕ್ಕ ಸಾಂಸ್ಕೃತಿಕ ಉತ್ಸವಕ್ಕೆ ಶನಿವಾರ ಅದ್ಧೂರಿಯಾಗಿ ಆರಂಭವಾಯಿತು. 

ದಕ್ಷಿಣ ಕನ್ನಡ ಜಿಲ್ಲಾ ಸಂಘ, ಮೈಸೂರಿನಲ್ಲಿರುವ ಕರಾವಳಿ ಮೂಲದ ಸಂಸ್ಥೆಗಳ ಸಹಯೋಗದಲ್ಲಿ, ಮಂಗಳೂರಿನ ಉಳ್ಳಾಲದ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಸಹಕಾರದೊಂದಿಗೆ ಆಯೋಜಿಸಿರುವ ಎರಡು ದಿನಗಳ ರಾಣಿ ಅಬ್ಬಕ್ಕ ಸಾಂಸ್ಕೃತಿಕ ಉತ್ಸವಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಬೃಹತ್ ಮಂಟದ ಪರಶುರಾಮ ವೇದಿಕೆಯಲ್ಲಿ ಮಾಜಿ ಪ್ರಧಾನಿ, ಜಾತ್ಯತೀತ ಜನತಾದಳ ವರಿಷ್ಠ ಎಚ್.ಡಿ.ದೇವೇಗೌಡ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ನಾವು ಅಧಿಕಾರದಲ್ಲಿದ್ದಾಗ ಕೂಡ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕನನ್ನು ಮರೆತಿದ್ದೆವು. ಸ್ವಾತಂತ್ರ್ಯ ಹೋರಾಟಗಾರರಾದ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಸ್ಮರಿಸುವಂತೆಯೇ ಅಬ್ಬಕ್ಕನನ್ನು ನೆನಪು ಮಾಡಿಕೊಳ್ಳಬೇಕಾಗಿದೆ. ಇಲ್ಲದಿದ್ದರೆ ಅವರು ಇತಿಹಾಸದಿಂದಲೇ ಮರೆತು ಹೋಗುತ್ತಾರೆ ಎಂದು ಎಚ್ಚರಿಸಿದರು. 

ಮಂಗಳೂರು ಅಥವಾ ಉಳ್ಲಾಲದಲ್ಲಿ ರಾಣಿ ಅಬ್ಬಕ್ಕ ಪ್ರತಿಮೆಯನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದರು.

ಮಂಗಳೂರಿನಲ್ಲಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸ್ಥಾಪಿಸಿರುವ ಡಾ.ಆಶಾಲತಾ ಎಸ್.ಸುವರ್ಣ ಮತ್ತು ತುಕಾರಾಮ ಪೂಜಾರಿ ದಂಪತಿಗೆ ದೇವೇಗೌಡ ಮತ್ತಿತರ ಗಣ್ಯರು ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಿದರು.

ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವರಾದ ಡಾ.ಗೀತಾ ಮಹದೇವಪ್ರಸಾದ್ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಹಾರ, ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಮಾತನಾಡಿದರು. 

ರಾಣಿ ಅಬ್ಬಕ್ಕ ಸಾಂಸ್ಕೃತಿಕ ಉತ್ಸವ ಸಮಿತಿ ಅಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಿಂದೆ ಶಾಲಾಪಠ್ಯದಲ್ಲಿ ರಾಣಿ ಅಬ್ಬಕ್ಕ ಚರಿತ್ರೆ ಕುರಿತ ಪಾಠ ಇತ್ತು. ಇತ್ತೀಚೆಗೆ ಅದನ್ನು ಕೈಬಿಡಲಾಗಿದೆ. ಮತ್ತೆ ಅದನ್ನು ಪಠ್ಯಕ್ಕೆ ಸೇರಿಸಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು. ಉಳ್ಳಾಲದ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಸ್ವಾಗತಿಸಿದರು. ರಘುಲೀಲಾ ಸಂಗೀತ ಶಾಲೆ ತಂಡದವರು ನಾಡಗೀತೆ ಹಾಡಿದರು. ಅರುಣ್ ಉಳ್ಳಾಲ್ ನಿರೂಪಿಸಿದರು.

ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮೈಸೂರು ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ದಕ್ಷಿಣ ಕನ್ನಡ ಜಿಲ್ಲಾ ಸಂಘದ ಅಧ್ಯಕ್ಷ ವಿ.ಶ್ರೀನಿವಾಸ ರಾವ್, ಭಾಸ್ಕರ್, ಧನಲಕ್ಷ್ಮಿ, ಕೃಷ್ಣಕುಮಾರ್, ರವಿಶಾಸ್ತ್ರಿ, ಅಬ್ದುಲ್, ಮಹೇಶ್ ಕಾಮತ್,  ಪ್ರೊ.ಕೆ.ರಾಮಮೂರ್ತಿ ರಾವ್, ಅಮಿತ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಪಿ.ಎನ್.ಕುಂದರ್, ಎನ್.ವಿ.ಹೆಗ್ಡೆ, ಡಿ.ಚಂದ್ರಶೇಖರ್, ಸುಧೀರ್ ಶೆಟ್ಟಿ, ಜನಾರ್ಧನ್ ಬೆಮೆಲ್, ಎ.ಎಸ್.ಬಿ.ಭಂಡಾರಿ, ರತ್ನರಾಜ್, ಜಯಚಂದ್ರ, ಅನಂತಗೌಡ, ಎಂ.ಕೆ.ಪುರಾಣಿಕ್ ಸೇರಿದಂತೆ ಮಂಗಳೂರು, ಉಡುಪಿ ಜಿಲ್ಲೆಗಳ ಜನರು ಕೂಡ ಪಾಲ್ಗೊಂಡಿದ್ದರು.

ಶನಿವಾರ ಉತ್ಸವದಲ್ಲಿ ಕರಾವಳಿ ಜಿಲ್ಲೆಗಳ ಪರಂಪರೆ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ತುಳುನಾಡ ಸಂಸ್ಕೃತಿ ಸಮೂಹ ನೃತ್ಯ, 'ಕರ್ನಾಟಕದ ವೀರರಾಣಿಯರು' ಕುರಿತ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X