Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2ನೇ ಟೆಸ್ಟ್ ಧನಂಜಯ ದಾಳಿಗೆ ತತ್ತರಿಸಿದ...

2ನೇ ಟೆಸ್ಟ್ ಧನಂಜಯ ದಾಳಿಗೆ ತತ್ತರಿಸಿದ ಬಾಂಗ್ಲಾ

ಲಂಕೆಗೆ ಸರಣಿ ಜಯ

ವಾರ್ತಾಭಾರತಿವಾರ್ತಾಭಾರತಿ10 Feb 2018 11:41 PM IST
share
2ನೇ ಟೆಸ್ಟ್ ಧನಂಜಯ ದಾಳಿಗೆ ತತ್ತರಿಸಿದ ಬಾಂಗ್ಲಾ

ಢಾಕಾ, ಫೆ.10: ಬಾಂಗ್ಲಾ ವಿರುದ್ಧದ ಎರಡನೇ ಕ್ರಿಕೆಟ್ ಟೆಸ್ಟ್‌ನಲ್ಲಿ ಶ್ರೀಲಂಕಾ ತಂಡ 215ರನ್‌ಗಳ ಜಯ ಗಳಿಸಿದ್ದು, 2 ಟೆಸ್ಟ್‌ಗಳ ಸರಣಿಯನ್ನು 1-0 ಅಂತರದಲ್ಲಿ ವಶಪಡಿಸಿಕೊಂಡಿದೆ.

ಟೆಸ್ಟ್‌ನ ಮೂರನೇ ದಿನವಾಗಿರುವ ಶನಿವಾರ ಗೆಲುವಿಗೆ ಎರಡನೇ ಇನಿಂಗ್ಸ್‌ನಲ್ಲಿ 339 ರನ್‌ಗಳ ಗೆಲುವಿನ ಸವಾಲನ್ನು ಪಡೆದ ಬಾಂಗ್ಲಾದೇಶ ತಂಡ ಅಫ್ ಸ್ಪಿನ್ನರ್ ಅಖಿಲಾ ಧನಂಜಯ್(24ಕ್ಕೆ 5) ಮತ್ತು ರಂಗನ ಹೆರಾತ್(49ಕ್ಕೆ 4) ದಾಳಿಗೆ ಸಿಲುಕಿ29.3 ಓವರ್‌ಗಳಲ್ಲಿ 123ಗಳಿಗೆ ಆಲೌಟಾಗಿದೆ.

 ಬಾಂಗ್ಲಾ ತಂಡದ ಪರ ಮೊಮಿನುಲ್ ಹಕ್ (33) ತಂಡದ ಪರ ಗರಿಷ್ಠ ಸ್ಕೋರ್ ದಾಖಲಿಸಿದರು. ಹಕ್ ಅವರನ್ನು ಹೊರತುಪಡಿಸಿದರೆ ಮುಶ್ಫಿಕುರ್ರಹ್ಮಾನ್ (25),ಇಮ್ರುಲ್ ಕೈಸ್ (17), ವಿಕೆಟ್ ಕೀಪರ್ ಲಿಟ್ಟನ್ ದಾಸ್(12) ಎರಡಂಕೆಯ ಕೊಡುಗೆ ನೀಡಿದರು.

ಶ್ರೀಲಂಕಾ ಮೊದಲ ಇನಿಂಗ್ಸ್‌ನಲ್ಲಿ 222 ರನ್‌ಗಳಿಗೆ ಆಲೌಟಾಗಿತ್ತು. ಬಳಿಕ ಬಾಂಗ್ಲಾ ತಂಡವನ್ನು ಮೊದಲ ಇನಿಂಗ್ಸ್‌ನಲ್ಲಿ 110 ರನ್‌ಗಳಿಗೆ ನಿಯಂತ್ರಿಸಿ 112 ರನ್‌ಗಳ ಮುನ್ನಡೆ ಸಾಧಿಸಿತ್ತು. ಎರಡನೇ ಇನಿಂಗ್ಸ್‌ನಲ್ಲಿ ಶ್ರೀಲಂಕಾ ತಂಡ 73.5 ಓವರ್‌ಗಳಲ್ಲಿ 226 ರನ್‌ಗಳಿಗೆ ಆಲೌಟಾಗಿತ್ತು. ರೋಶನ್ ಡಿ ಸಿಲ್ವ ಔಟಾಗದೆ 70ರನ್ ಗಳಿಸಿದ್ದರು. 9ನೇ ವಿಕೆಟ್‌ಗೆ ಸುರಂಗ್ ಲಕ್ಮಲ್ ಅವರೊಂದಿಗೆ 48 ರನ್‌ಗಳ ಜೊತೆಯಾಟ ನೀಡಿ ತಂಡದ ಸ್ಕೋರ್‌ನ್ನು 200ರ ಗಡಿ ದಾಟಿಸಿದ್ದರು. ಎರಡನೇ ದಿನದಾಟದಂತ್ಯಕ್ಕೆ ಶ್ರೀಲಂಕಾ ತಂಡ 8 ವಿಕೆಟ್ ನಷ್ಟದಲ್ಲಿ 200 ರನ್ ಗಳಿಸಿ 312 ರನ್‌ಗಳ ಮುನ್ನಡೆ ಸಾಧಿಸಿತ್ತು. ಔಟಾಗದೆ 58 ರನ್ ಗಳಿಸಿದ್ದ ರೋಶನ್ ಡಿ ಸಿಲ್ವ ಮತ್ತು 7 ರನ್ ಗಳಿಸಿದ್ದ ಲಕ್ಮಲ್ ಬ್ಯಾಟಿಂಗ್ ಮುಂದುವರಿಸಿ 9ನೇ ವಿಕೆಟ್‌ಗೆ 46 ರನ್‌ಗಳ ಕೊಡುಗೆ ನೀಡಿದರು. 21 ರನ್ ಗಳಿಸಿದ್ದ ಲಕ್ಮಲ್‌ರನ್ನು ಪೆವಿಲಿಯನ್‌ಗೆ ಅಟ್ಟಿದ ತೈಜುಲ್ ಇಸ್ಲಾಂ ಇವರ ಜೊತೆಯಾಟವನ್ನು ಮುರಿದರು. ಅಂತಿಮವಾಗಿ ಶ್ರಿಲಂಕಾ ಎರಡನೇ ಇನಿಂಗ್ಸ್‌ನ್ನು 226 ರನ್‌ಗಳಿಗೆ ಕೊನೆಗೊಳಿಸಿತು.

ಡಿ ಸಿಲ್ವ ಮೊದಲ ಇನಿಂಗ್ಸ್‌ನಲ್ಲಿ 56 ರನ್ ಗಳಿಸಿದ್ದರು. ಎರಡನೇ ಇನಿಂಗ್ಸ್‌ನಲ್ಲೂ ಅರ್ಧಶತಕ ದಾಖಲಿಸಿದ್ದ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಚಿತ್ತಗಾಂಗ್‌ನಲ್ಲಿ ಮೊದಲ ಟೆಸ್ಟ್ ಡ್ರಾದಲ್ಲಿ ಕೊನೆಗೊಂಡಿತ್ತು. ಎರಡು ಟೆಸ್ಟ್‌ಗಳ ಸರಣಿಯನ್ನು 1-0 ಅಂತರದಲ್ಲಿ ಶ್ರೀಲಂಕಾ ಗೆದ್ದುಕೊಂಡಿದೆ. ಉಭಯ ತಂಡಗಳು ಫೆ.15ರಂದು ನಡೆಯಲಿರುವ ಎರಡು ಟ್ವೆಂಟಿ-20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X