Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಪ್ರಾಣಾಯಾಮ ಪ್ರಕಾಶಿಕಾ-ಯೋಗದೆಡೆಗೆ ಬೆಳಕು

ಪ್ರಾಣಾಯಾಮ ಪ್ರಕಾಶಿಕಾ-ಯೋಗದೆಡೆಗೆ ಬೆಳಕು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ11 Feb 2018 12:12 AM IST
share
ಪ್ರಾಣಾಯಾಮ ಪ್ರಕಾಶಿಕಾ-ಯೋಗದೆಡೆಗೆ ಬೆಳಕು

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಚರ್ಚೆಯಲ್ಲಿರುವುದು ಯೋಗ. ಇಂದು ಯೋಗ ಎನ್ನುವುದು ಒಂದು ಉದ್ಯಮ ರೂಪವನ್ನು ಪಡೆಯುತ್ತಿದೆ. ಎಲ್ಲರೂ ಯೋಗವನ್ನು ಕಲಿಸಲು ಆತುರರಾಗಿದ್ದಾರೆ. ಯೋಗದ ಬಗ್ಗೆ ಪ್ರಾಥಮಿಕ ಮಾಹಿತಿಗಳಷ್ಟೇ ಉಳ್ಳವರು ಯೋಗ ಶಿಕ್ಷಕರಾಗುತ್ತಿದ್ದಾರೆ. ವ್ಯಾಯಾಮಗಳನ್ನೇ ಯೋಗ ಎಂದು ತಿಳಿದುಕೊಂಡವರೂ ಇದ್ದಾರೆ. ಒಟ್ಟಿಲ್ಲಿ ಆಧುನಿಕ ಒತ್ತಡಗಳು ಮನುಷ್ಯರನ್ನು ರೋಗಿಗಳನ್ನಾಗಿಸುವ ಹೊತ್ತಿನಲ್ಲೇ ಯೋಗದ ಹೆಸರಿನಲ್ಲಿ ಮೋಸ ಮಾಡುವವರೂ ಹೆಚ್ಚುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಯೋಗದ ಕುರಿತಂತೆ ನಿಜವಾದ ತಿಳುವಳಿಕೆಯನ್ನು ಹೊಂದಿದ ಯೋಗಿಗಳಿದ್ದಾರೆ. ಯೋಗಗಳನ್ನು ಅತಿ ವೈಭವೀಕರಿಸದೆ ಅದರ ಇತಿ ಮಿತಿಗಳಲ್ಲಿ ಪ್ರಯೋಜನಗಳನ್ನು ಹೇಳಿಕೊಡುವ ಅಗತ್ಯ ಇಂದು ಹೆಚ್ಚಿದೆ. ಈ ನಿಟ್ಟಿನಲ್ಲಿ ಯೋಗದಲ್ಲಿ ಅತೀ ಮುಖ್ಯವಾಗಿರುವ ‘ಪ್ರಾಣಾಯಾಮ’ದ ಬಗ್ಗೆ ಯೋಗರತ್ನ ಡಾ. ಎಸ್. ಎನ್. ಓಂಕಾರ್ ಅವರು ‘ಪ್ರಾಣಾಯಾಮ ಪ್ರಕಾಶಿಕಾ’ ಕೃತಿಯಲ್ಲಿ ಬರೆದಿದ್ದಾರೆ. ಇದನ್ನು ನವಕರ್ನಾಟಕ ಪ್ರಕಾಶನ ಹೊರತಂದಿದೆ. ಕೃತಿಯಲ್ಲಿ ಮೂರು ವಿಭಾಗಗಳಿವೆ. ಮೊದಲ ಭಾಗದಲ್ಲಿ ಪ್ರಾಣ ಮತ್ತು ಪ್ರಾಣಾಯಾಮದ ಜೊತೆಗಿರುವ ಸಂಬಂಧಗಳು ಮತ್ತು ಆಸನಗಳ ಬಗ್ಗೆ ವಿವರಗಳಿವೆ. ಉಸಿರಾಡುವುದು ಎಂದರೆ ಏನು ಎನ್ನುವ ಬಗ್ಗೆಯೂ ಕುತೂಹಲಕರ ಮಾಹಿತಿಗಳಿವೆ. ಗಾಳಿಯನ್ನು ಎಳೆದು ಹೊರ ಬಿಡುವುದಷ್ಟೇ ಉಸಿರಾಟವಲ್ಲ. ಅದರಾಚೆಗೂ ಅದು ದೇಹದೊಂದಿಗೆ ಸಂಬಂಧವನ್ನು ಹೊಂದಿದೆ ಎನ್ನುವುದನ್ನು ಈ ಭಾಗದಲ್ಲಿ ಅರಿತು ಕೊಳ್ಳಬಹುದು. ಎರಡನೆ ಭಾಗದಲ್ಲಿ ಬಂಧಗಳ ಸಹಿತ ಉಸಿರಾಟದ ಕ್ರಮಗಳನ್ನು ವಿವರಿಸಲಾಗಿದೆ. ಅಂಗುಲಿ ನಿಯಂತ್ರಿತ ನಾಡಿಶೋಧನಾ ಪ್ರಾಣಾಯಾಮ ಕ್ರಮಗಳು, ಕುಂಭಕ ಹಾಗೂ ಬಂಧ ಸಹಿತ ನಾಡಿ ಶೋಧನ ಪ್ರಾಣಾಯಾಮದ ಕ್ರಮಗಳು ಇತ್ಯಾದಿಗಳ ವಿವರಗಳಿವೆ. ಮೂರನೇ ಭಾಗದಲ್ಲಿ ಉಸಿರಾಟ ಮತ್ತು ಧ್ಯಾನದ ಕುರಿತ ವಿವರಗಳಿವೆ.
  ಯೋಗ ಶಾಸ್ತ್ರದಲ್ಲಿ ದೈಹಿಕ, ಮಾನಸಿಕ, ಭಾವನಾತ್ಮಕ ಆರೋಗ್ಯದ ದೃಷ್ಟಿಯಿಂದಷ್ಟೇ ಅಲ್ಲದೆ, ಆಧ್ಯಾತ್ಮಿಕ ಉನ್ನತಿಯ ದೃಷ್ಟಿಯಿಂದಲೂ ಸಹ ಪ್ರಾಣಾಯಾಮಕ್ಕೆ ವಿಶಿಷ್ಟ ಸ್ಥಾನವಿದೆ. ಈ ನಿಟ್ಟಿನಲ್ಲಿ ಈ ಪುಸ್ತಕವು ಪ್ರಾಣಾಯಾಮದ ಪ್ರಾಥಮಿಕ ವಿಧಾನಗಳಷ್ಟೇ ಅಲ್ಲದೆ ಅದರ ಮುಂದುವರಿದ ವಿಧಾನಗಳಿಗೂ ಕೈ ಪಿಡಿಯಾಗಿದೆ. ಇಲ್ಲಿ ಪ್ರಾಣಾಯಾಮದ ಹಿನ್ನೆಲೆಯನ್ನು, ಪ್ರಯೋಜನವನ್ನು ವಿವರಿಸಿರುವುದೇ ಅಲ್ಲದೆ ಅದನ್ನು ಕಲಿಯುವ ಬಗೆ ಹೇಗೆಂಬ ವಿವರಗಳನ್ನೂ ಅವರು ಚಿತ್ರ ಸಹಿತ 24 ಅಧ್ಯಾಯಗಳಲ್ಲಿ ಚರ್ಚಿಸಿದ್ದಾರೆ. ಅಧ್ಯಯನ ಮತ್ತು ಸ್ವಂತ ಅನುಭವದ ನೆಲೆಯಲ್ಲಿ ರೂಪುಗೊಂಡಿರುವ ಕೃತಿ ಇದಾಗಿರುವುದರಿಂದ, ಇಲ್ಲಿರುವ ಮಾಹಿತಿಗಳನ್ನು ಗಂಭೀರವಾಗಿ ತೆಗೆದುಕೊಳ್ಳಬಹುದು. ಪ್ರಾಣಾಯಾಮದ ಕುರಿತಾಗಿ ಇರುವ ಪುಸ್ತಕಗಳಲ್ಲಿ ‘ಪ್ರಾಣಾಯಾಮ ಪ್ರಕಾಶಿಕಾ’ ಅತ್ಯುತ್ತಮ ಸೇರ್ಪಡೆ ಎನ್ನುವುದರಲ್ಲಿ ಎರಡು ಮಾತಿಲ್ಲ. 292 ಪುಟಗಳ ಈ ಕೃತಿಯ ಮುಖಬೆಲೆ 250 ರೂಪಾಯಿ.



share
-ಕಾರುಣ್ಯಾ
-ಕಾರುಣ್ಯಾ
Next Story
X