Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಲಿನ್ಯ ನಿಯಂತ್ರಣಕ್ಕೆ ಸರಕಾರದೊಂದಿಗೆ...

ಮಾಲಿನ್ಯ ನಿಯಂತ್ರಣಕ್ಕೆ ಸರಕಾರದೊಂದಿಗೆ ಕೈಜೋಡಿಸಿ: ಸಾರಿಗೆ ಸಚಿವ ಎಚ್.ಎಂ.ರೇವಣ್ಣ

‘ವಿರಳ ಸಂಚಾರ ದಿನ’ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 Feb 2018 6:34 PM IST
share
ಮಾಲಿನ್ಯ ನಿಯಂತ್ರಣಕ್ಕೆ ಸರಕಾರದೊಂದಿಗೆ ಕೈಜೋಡಿಸಿ: ಸಾರಿಗೆ ಸಚಿವ ಎಚ್.ಎಂ.ರೇವಣ್ಣ

ಬೆಂಗಳೂರು, ಫೆ. 11: ಸಾರ್ವಜನಿಕರು ತನ್ನ ಸ್ವಂತ ವಾಹನಗಳನ್ನು ನಿಲ್ಲಿಸಿ ಸಮೂಹ ಸಾರಿಗೆ ವಾಹನಗಳನ್ನು ಬಳಸುವ ಮೂಲಕ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ರಾಜ್ಯ ಸರಕಾರದೊಂದಿಗೆ ಕೈಜೋಡಿಸಬೇಕೆಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಮನವಿ ಮಾಡಿದ್ದಾರೆ.

ರವಿವಾರ ವಿಧಾನಸೌಧದ ಮುಂಭಾಗದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ, ಸಂಚಾರ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ‘ವಿರಳ ಸಂಚಾರ ದಿನ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ತಿಂಗಳ 2ನೆ ರವಿವಾರ ಸಂಚಾರ ದಿನವನ್ನಾಗಿ ಆಚರಣೆ ಮಾಡಲಾಗುವುದು ಎಂದು ಪ್ರಕಟಿಸಿದರು.

ವಾಯು ಮಾಲಿನ್ಯ, ಶಬ್ಧ ಮಾಲಿನ್ಯ ನಿಯಂತ್ರಣ, ಪರಿಸರ ಸಂರಕ್ಷಣೆ ಹಾಗೂ ಇಂಧನ ಉಳಿತಾಯಕ್ಕಾಗಿ ಸಾರ್ವಜನಿಕರ ಸಹಕಾರದೊಂದಿಗೆ ವಿರಳ ಸಂಚಾರ ದಿನ ಆಚರಣೆ ಮಾಡಲಾಗುತ್ತಿದೆ ಎಂದ ಅವರು, ದಿಲ್ಲಿಯಂತೆ ಬೆಂಗಳೂರು ನಗರದಲ್ಲಿ ಸಮಸ್ಯೆ ಸೃಷ್ಟಿಯಾಗಬಾರದೆಂದು ಮುನ್ನಚ್ಚರಿಕೆಯಾಗಿ ಈ ಕ್ರಮ ಕೈಕೊಳ್ಳಲಾಗಿದೆ ಎಂದರು.

52ಲಕ್ಷ ಸ್ವಂತ ವಾಹನಗಳು: ಬೆಂಗಳೂರು ನಗರದಲ್ಲಿ ಈಗಾಗಲೇ 82 ಲಕ್ಷ ವಾಹನಗಳು ಸಂಚರಿಸುತ್ತಿದ್ದು, ಆ ಪೈಕಿ 52 ಲಕ್ಷ ಸ್ವಂತ ವಾಹನಗಳಾಗಿವೆ. ಇದರಿಂದ ಸಂಚಾರ ದಟ್ಟಣೆ ಮತ್ತು ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದರ ನಿಯಂತ್ರಣಕ್ಕೆ ಸಮೂಹ ಸಾರಿಗೆ ಬಳಕೆಯನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.
ಸಮೂಹ ಸಾರಿಗೆ ವಾಹನಗಳಲ್ಲಿ ಸಂಚರಿಸುಲು ಅವಕಾಶ ಕಲ್ಪಿಸಲು ನಗರ ಸಾರಿಗೆ ಬಸ್ ದರವನ್ನು ವಿರಳ ಸಂಚಾರ ದಿನ ರಿಯಾಯಿತಿ ನೀಡಲಾಗಿದೆ ಎಂದ ಅವರು, ‘ವಿರಳ ಸಂಚಾರ ದಿನ’ ಆಚರಣೆಯಲ್ಲಿ ಬದಲಾವಣೆಗಳು ಅಗತ್ಯವಿದ್ದಲ್ಲಿ ಚರ್ಚೆ ಸಿದ್ಧ ಎಂದು ಹೇಳಿದರು.

ವಿರಳ ಸಂಚಾರ ದಿನದಂದು ಹೆಚ್ಚು-ಹೆಚ್ಚು ನಗರ ಸಾರಿಗೆ ಬಸ್‌ಗಳು, ಮೆಟ್ರೋ, ಸಂಚರಿಸಲಿವೆ. ಸಾರ್ವಜನಿಕರು ವಿದ್ಯುತ್ ಚಾಲಿತ ವಾಹನಗಳು ಹಾಗೂ ಸೈಕಲ್‌ಗಳನ್ನು ಬಳಸಬೇಕು. ಅಲ್ಲದೆ, ಕಡಿಮೆ ಅಂತರದ ಸ್ಥಳಗಳಿಗೆ ಸಾರ್ವಜನಿಕರೇ ನಡೆದೆ ಹೋಗುವುದನ್ನು ರೂಢಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್ ಮಾತನಾಡಿ, ದೇಶದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ‘ವಿರಳ ಸಂಚಾರ ದಿನ’ಕ್ಕೆ ಚಾಲನೆ ನೀಡಲಾಗಿದೆ. ವಿದ್ಯುತ್ ಚಾಲಿತ ನಗರ ಸಂಚಾರ ಬಸ್‌ಗಳ ಖರೀದಿಸಲು ಉದ್ದೇಶಿಸಿದ್ದು, ಶೀಘ್ರದಲ್ಲೆ ಆ ಬಸ್‌ಗಳು ಸಂಚರಿಸಲಿವೆ. ಮಾಲಿನ್ಯ ನಿಯಂತ್ರಣಕ್ಕೆ ಬಜೆಟ್‌ನಲ್ಲಿ ಆದ್ಯತೆ ನೀಡಲು ಸಿಎಂಗೆ ಮನವಿ ಮಾಡಲಾಗಿದೆ ಎಂದರು.

ವಿರಳ ಸಂಚಾರ ದಿನಾಚರಣೆ ಮೂಲಕ ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಸರಕಾರ ಮುಂದಾಗಿರುವುದು ಸ್ವಾಗತಾರ್ಹ. ಸಾರ್ವಜನಿಕರು ಸಂಚಾರಕ್ಕಾಗಿ ಸಮೂಹ ಸಾರಿಗೆ ವಾಹನಗಳನ್ನು ಬಳಸಲು ಪ್ರೋತಾಹಿಸಲಾಗುವುದು ಎಂದು ಓಲಾ ಕಂಪೆನಿ ಪ್ರಧಾನ ವ್ಯವಸ್ಥಾಪಕ ವಿಷ್ಣು ಬೊಮ್ಮರೆಡ್ಡಿ ತಿಳಿಸಿದರು.

ವಿರಳ ಸಂಚಾರ ದಿನದ ಅಂಗವಾಗಿ ವಿಧಾನಸೌಧದಿಂದ ವಿದ್ಯುತ್ ಚಾಲಿತ ಕಾರುಗಳು ಹಾಗೂ ಸೈಕಲ್ ಜಾಥಾ ಏರ್ಪಡಿಸಲಾಗಿತ್ತು. ವಿಧಾನಸೌಧ, ಕೆ.ಆರ್.ವೃತ್ತ, ಮೈಸೂರು ಬ್ಯಾಂಕ್ ವೃತ್ತ, ನೃಪತುಂಗ ರಸ್ತೆ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ಜಾಥಾ ಮುಕ್ತಾಯಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ನಟಿ ರೂಪಿಕಾ, ಅನೂಪ್ ರೇವಣ್ಣ, ಮೇಯರ್ ಸಂಪತ್ ರಾಜ್, ವಿಧಾನ ಪರಿಷತ್ ಸದಸ್ಯ ರಮೇಶ್, ಮಾಜಿ ಮೇಯರ್ ಹುಚ್ಚಪ್ಪ, ಭೈರವ ಸಿದ್ದರಾಜು, ಸಾರಿಗೆ ಇಲಾಖೆ ಕಾರ್ಯದರ್ಶಿ ಬಸವರಾಜು, ಆಯುಕ್ತ ದಯಾನಂದ ಹಾಜರಿದ್ದರು.

‘ಮಾಲಿನ್ಯ ನಿಯಂತ್ರಣಕ್ಕೆ ಬಜೆಟ್‌ನಲ್ಲಿ 300 ಕೋಟಿ ರೂ.ಮೀಸಲಿಡಲಾಗುವುದು. ಮಾಲಿನ್ಯ ನಿಯಂತ್ರಣ ಕೊಠಡಿಗಳನ್ನು ನಿರ್ಮಿಸಿ, ವಾಹನಗಳಿಂದ ಆಗುವ ಮಾಲಿನ್ಯದ ಪ್ರಮಾಣವನು ಗುರುತಿಸಲು ಪರೀಕ್ಷೆ ನಡೆಸಲಾಗುವುದು. ಮೆಟ್ರೋ ನಿಲ್ದಾಣಗಳಲ್ಲಿ ವಿದ್ಯುತ್ ಚಾಲಿತ ಬೈಕ್ ವ್ಯವಸ್ಥೆಯನ್ನು ಕೈಗೊಳ್ಳಲಾಗುವುದು’
-ಸಂಪತ್‌ರಾಜ್, ಬಿಬಿಎಂಪಿ ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X