Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ; ಮಕ್ಕಳ ಸಾವಿನ ಪ್ರಕರಣ : ತಲಾ 1...

ಮಂಡ್ಯ; ಮಕ್ಕಳ ಸಾವಿನ ಪ್ರಕರಣ : ತಲಾ 1 ಲಕ್ಷ ರೂ. ಪರಿಹಾರ ಘೋಷಣೆ

ಹೂತಿದ್ದ ಮಗುವಿನ ಶವಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ11 Feb 2018 8:51 PM IST
share
ಮಂಡ್ಯ; ಮಕ್ಕಳ ಸಾವಿನ ಪ್ರಕರಣ : ತಲಾ 1 ಲಕ್ಷ ರೂ. ಪರಿಹಾರ ಘೋಷಣೆ

ಮಂಡ್ಯ, ಫೆ.11: ಆರೋಗ್ಯ ಇಲಾಖೆ ನೀಡಿದ ಲಸಿಕೆಯಿಂದ ಸಾವನ್ನಪ್ಪಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶವಸಂಸ್ಕಾರ ನಡೆಸಿದ್ದ ಮಗುವನ್ನು ರವಿವಾರ ಹೊರತೆಗೆದು ಶವಪರೀಕ್ಷೆ ನಡೆಸಲಾಯಿತು.

ತಾಲೂಕಿನ ಗೋಪಾಲಪುರ ಉಪ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಫೆ.8 ರಂದು ನೀಡಲಾದ ಲಸಿಕೆಯಿಂದ ಎರಡು ತಿಂಗಳ ಭುವನ್ ಮತ್ತು ಪ್ರೀತಂ ಮೃತಪಟ್ಟು, 7 ಮಕ್ಕಳು ಅಸ್ವಸ್ಥರಾಗಿದ್ದರು.

ಲಸಿಕೆಯಿಂದಾಗಿಯೇ ತಮ್ಮ ಮಕ್ಕಳು ಸಾವನ್ನಪ್ಪಿದ್ದು, ಅಸ್ವಸ್ಥಗೊಂಡಿವೆ ಎಂದು ಆರೋಪಿಸಿ ಗ್ರಾಮಸ್ಥರು ಮತ್ತು ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಶನಿವಾರ ತಡರಾತ್ರಿವರೆಗೂ ಮಂಡ್ಯ ಜಿಲ್ಲಾಸ್ಪತ್ರೆ ಎದುರು ಧರಣಿ ನಡೆಸಿದ್ದರು.

ಸ್ಥಳಕ್ಕಾಗಮಿಸಿದ ಆರೋಗ್ಯ ಇಲಾಖೆ ನಿರ್ದೇಶಕರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ಮಕ್ಕಳ ಮರೋಣತ್ತರ ಪರೀಕ್ಷೆ ಹಾಗೂ ಲಸಿಕೆಯನ್ನು ಪರೀಕ್ಷೆಗಾಗಿ ಕಸೋಲಿಯ ಸಿಡಿಆರ್ ಲ್ ಪ್ರಯೋಗಾಲಯಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದ್ದರು.

ಮೃತಪಟ್ಟಿದ್ದ ಪ್ರೀತಂ ಶವಪರೀಕ್ಷೆಯನ್ನು ಶನಿವಾರ ಸಂಜೆಯೇ ನಡೆಸಲಾಗಿತ್ತು. ಅದರೆ, ಗ್ರಾಮದಲ್ಲೇ ಶವಸಂಸ್ಕಾರ ನಡೆಸಿದ್ದ ಭುವನ್ ಶವವನ್ನು ರವಿವಾರ ಹೊರತೆಗೆದು ಅಲ್ಲಿಯೇ ಶವಪರೀಕ್ಷೆ  ನಡೆಸಿ ಹೂಳಲಾಯಿತು.

ಮೇಲಾಧಿಕಾರಿಗಳ ಆದೇಶದಂತೆ ಮಗುವಿನ ಶವಪರೀಕ್ಷೆ  ನಡೆಸಿ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಎರಡು ವಾರದಲ್ಲಿ ವರದಿ ಬರಲಿದೆ. ತಹಶೀಲ್ದಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು ಎಂದು ಶವ ಪರೀಕ್ಷೆ ನಡೆಸಿದ ಡಾ.ಅಶ್ವಿನ್ ಸುದ್ದಿಗಾರರಿಗೆ ತಿಳಿಸಿದರು.

ಈ ನಡುವೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಆರೋಗ್ಯ ಇಲಾಖೆಯ ನಿರ್ದೇಶನಾಲಯ, ಫೆ.8 ರಂದು ಚಂದಗಿರಿದೊಡ್ಡಿಯ 9 ಮಕ್ಕಳಿಗೆ ಪೆಂಟಾವಲೆಂಟ್ ಮತ್ತು ಪೋಲಿಯೋ ಲಸಿಕೆಯನ್ನು ನೀಡಲಾಗಿತ್ತು. ನಂತರ, ಅಸ್ವಸ್ಥಗೊಂಡ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭುವನ್ ಮತ್ತು ಪ್ರೀತಂ ಮೃತಪಟ್ಟಿದ್ದಾರೆ ಎಂದಿದೆ.

ಲಸಿಕೆಯಿಂದ ಮಕ್ಕಳು ಸಾವನ್ನಪ್ಪಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಇಲಾಖೆ ನಿರ್ದೇಶಕರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಕ್ಕಳ ಮರಣೋತ್ತರ ಪರೀಕ್ಷೆ ಹಾಗೂ ಲಸಿಕೆಯನ್ನು ಹೆಚ್ಚಿನ ಪರೀಕ್ಷೆಗಾಗಿ ಕಸೋಲಿಯ ಸಿ.ಡಿ.ಆರ್.ಎಲ್ ಪ್ರಯೋಗಶಾಲೆಗೆ ಕಲುಹಿಸಲು ತೀರ್ಮಾನಿಲಾಗಿದೆ. ಮುಂಜಾಗ್ರತ ಕ್ರಮವಾಗಿ ಈ ಬ್ಯಾಚನ್ ಲಸಿಕೆಯನ್ನು ಮುಂದಿನ ಆದೇಶದವರೆಗೆ ಉಪಯೋಗಿಸದಿರಲು ತೀರ್ಮಾನಿಸಲಾಗಿದೆ. ರಾಜ್ಯದ ಬೇರೆಡೆ ಈ ರೀತಿಯ ಅಡ್ಡಪರಿಣಾಮ ಬೀರಿಲ್ಲ. ಆದ್ದರಿಂದ ಪೋಷಕರು ಆತಂಕಪಡಬೇಕಾಗಿಲ್ಲ ಎಂದು ಪ್ರಕಟಣೆ ತಿಳಿಸಿದೆ.

1 ಲಕ್ಷ ರೂ. ಪರಿಹಾರ: ಚಿಂದಗಿರಿದೊಡ್ಡಿಯ ಗ್ರಾಮದ ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣಹೊಂದಿರುವ ಮಕ್ಕಳ ಕುಟುಂಬದವರಿಗೆ ರಾಜ್ಯ ಸರಕಾರ ತಲಾ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಪತ್ರಿಆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶನಿವಾರ ತಡರಾತ್ರಿಯೇ ಪರಿಹಾರ ಘೋಷಣೆ ಹೊರಬೀಳುತ್ತದ್ದಂತೆ ಈ ಸಂಬಂಧದ ನಡೆಯುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X