Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ : ಕ್ಷಯರೋಗ ಕೇಂದ್ರದ 15...

ಮಂಡ್ಯ : ಕ್ಷಯರೋಗ ಕೇಂದ್ರದ 15 ದ್ವಿಚಕ್ರವಾಹನ, ಕ್ಷ-ಕಿರಣಯಂತ್ರ ನಾಪತ್ತೆ

ತನಿಖೆಗೆ ಒತ್ತಾಯಿಸಿ ಇಲಾಖೆ ಮುಖ್ಯಸ್ಥರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ11 Feb 2018 10:23 PM IST
share

ಮಂಡ್ಯ, ಫೆ.11: ಜಿಲ್ಲಾ ಕ್ಷಯರೋಗ ಕೇಂದ್ರಕ್ಕೆ ಸರಕಾರದಿಂದ ಖರೀದಿಸಿದ್ದ 12 ರಿಂದ 15 ದ್ವಿಚಕ್ರವಾಹನ ಹಾಗೂ ಕ್ಷ-ಕಿರಣಯಂತ್ರದ ಬಿಡಿಭಾಗಗಳು ನಾಪತ್ತೆಯಾಗಿದ್ದು, ತನಿಖೆ ನಡೆಸುವಂತೆ ಆರ್ ಟಿ ಐ ಕಾರ್ಯಕರ್ತ ಕೆ.ಆರ್.ರವೀಂದ್ರ ಒತ್ತಾಯಿಸಿದ್ದಾರೆ.

ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಜಯ್‍ಸೇಠ್ ಅವರಿಗೆ ದೂರು ನೀಡಿರುವ ಅವರು, ದ್ವಿಚಕ್ರವಾಹನ ಮತ್ತು ಕ್ಷ-ಕಿರಣಯಂತ್ರದ ಬಿಡಿಭಾಗಗಳನ್ನು ಅಕ್ರಮವಾಗಿ ಮಾರಾಟ ಮಾಡಿರುವ ಸಾಧ್ಯತೆಯಿದೆ ಎಂದು ಆರೋಪಿಸಿದ್ದಾರೆ.

ಹಿಂದಿನ ಜಿಲ್ಲಾ ಕ್ಷಯರೋಗ ನಿಯಂತ್ರಾಣಾಧಿಕಾರಿಗಳು ಕ್ಷಯರೋಗ ಆರೋಗ್ಯ ಸಂದರ್ಶಕರಿಗೆಂದು 12 ರಿಂದ 15 ದ್ವಿಚಕ್ರವಾಹನ ಖರೀದಿಸಿದ್ದು, ಹರಾಜು ಪ್ರಕ್ರಿಯೆ ನಡೆಸದೆ ಅಕ್ರಮವಾಗಿ ಮಾರಾಟ ಮಾಡಿದ್ದು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜತೆಗೆ 10 ಲಕ್ಷ ರೂ. ಮೌಲ್ಯದ ಕ್ಷ-ಕಿರಣ ಯಂತ್ರವನ್ನೂ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರಕ್ಕೆ ಖರೀದಿಸಿ ತಂತ್ರಜ್ಞೆ ವಿ.ಎ.ಮಂಜುಳ ಅವರು 20 ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2005-06ನೆ ಸಾಲಿನಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭವಾದ ನಂತರ ಕ್ಷ-ಕಿರಣ ಸೌಲಭ್ಯ ಜಿಲ್ಲಾಸ್ಪತ್ರೆಯಲ್ಲೇ ದೊರೆಯುತ್ತಿದೆ. ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರವನ್ನೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಟ್ಟಡಕ್ಕೆ ವರ್ಗಾಯಿಸಿದ್ದು, ಈ ಕ್ಷ-ಕಿರಣ ಯಂತ್ರದ ಬೆಲೆಬಾಳುವ ಬಿಡಿಭಾಗಗಳನ್ನು ಅಕ್ರಮವಾಗಿ ಖಾಸಗಿ ನರ್ಸಿಂಗ್‍ಹೋಂಗೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಕ್ಷ-ಕಿರಣ ಯಂತ್ರ ಇಲ್ಲದಿದ್ದರೂ ಕಚೇರಿಯಲ್ಲೇ ಕಾಲಕಳೆಯುತ್ತಿರುವ ತಂತ್ರಜ್ಞೆ ಮಂಜುಳಾ ಅವರನ್ನು ಬೇರೆ ಕೆಲಸಕ್ಕೆ ನಿಯೋಜಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಡಾ.ಕೆ.ಮೋಹನ್ ವರ್ಗಾವಣೆಗೂ ಒತ್ತಾಯ:
ಕಳೆದ 20 ವರ್ಷದಿಂದ ಇಲ್ಲಿವರೆಗೂ ಸ್ವಂತ ಜಿಲ್ಲೆ ಮಂಡ್ಯದಲ್ಲೇ ಕರ್ತವ್ಯ ನಿರ್ವಹಿಸುತ್ತಿರುವ ಶಾಸಕ ಎನ್.ಚಲುವರಾಯಸ್ವಾಮಿ ಅವರ ಅಣ್ಣನ ಪುತ್ರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರನ್ನು ಬೇರೆಡೆ ವರ್ಗಾಯಿಸುವಂತೆ ರಾಜ್ಯ ಚುನಾವಣಾ ಆಯುಕ್ತರನ್ನು ರವೀಂದ್ರ ಒತ್ತಾಯಿಸಿದ್ದಾರೆ.

ಡಾ.ಮೋಹನ್ ವಿರುದ್ಧ ಭ್ರಷ್ಟಾಚಾರ ನಿಗ್ರಹದಳ, ಸರಕಾರದ ಮಟ್ಟದಲ್ಲಿ ಸಾಕಷ್ಟು ದೂರುಗಳು ಇವೆ. ಜಿಪಂ ಸಭೆಗಳಿಗೂ ಸದರಿ ಅಧಿಕಾರಿ ಗೈರಾಗಿರುವ ಬಗ್ಗೆ ದೂರುಗಳಿವೆ. ಆದರೂ ರಾಜಕೀಯ ಪ್ರಭಾವದಿಂದ ಸ್ವಂತ ಜಿಲ್ಲೆಯಲ್ಲೇ ಮುಂದುವರಿದಿದ್ದಾರೆ. ಚುನಾವಣೆಯಲ್ಲಿ ತಮ್ಮ ಕೆಳಗಿನ ಅಧಿಕಾರಿ, ಸಿಬ್ಬಂದಿ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿರುವುದರಿಂದ ಡಾ.ಮೋಹನ್ ಅವರನ್ನು ಮಂಡ್ಯ ಜಿಲ್ಲೆಯ ಹಾಸುಪಾಸಿನ ಜಿಲ್ಲೆ ಹೊರತುಪಡಿಸಿ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X