Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೊಹ್ರಾಬುದ್ದೀನ್-ಕೌಸರ್-ಪ್ರಜಾಪತಿ ನಕಲಿ...

ಸೊಹ್ರಾಬುದ್ದೀನ್-ಕೌಸರ್-ಪ್ರಜಾಪತಿ ನಕಲಿ ಎನ್ ಕೌಂಟರ್: ಆರೋಪಿಗಳಿಗೆ ಆರಾಮ, ತನಿಖಾಧಿಕಾರಿ ವಿರುದ್ಧ ಕ್ರಿಮಿನಲ್ ಕೇಸ್!

ಹೀಗೂ ಉಂಟೇ?

ವಾರ್ತಾಭಾರತಿವಾರ್ತಾಭಾರತಿ11 Feb 2018 10:48 PM IST
share
ಸೊಹ್ರಾಬುದ್ದೀನ್-ಕೌಸರ್-ಪ್ರಜಾಪತಿ ನಕಲಿ ಎನ್ ಕೌಂಟರ್: ಆರೋಪಿಗಳಿಗೆ ಆರಾಮ, ತನಿಖಾಧಿಕಾರಿ ವಿರುದ್ಧ ಕ್ರಿಮಿನಲ್ ಕೇಸ್!

ಹೊಸದಿಲ್ಲಿ, ಫೆ.11: ಸೊಹ್ರಾಬುದ್ದೀನ್-ಕೌಸರ್ ಬಿ-ತುಲಸೀರಾಮ್ ಪ್ರಜಾಪತಿ ನಕಲಿ ಎನ್ ಕೌಂಟರ್ ಪ್ರಕರಣದ ಮಾಜಿ ತನಿಖಾಧಿಕಾರಿ ಸಂದೀಪ್ ತಾಮ್ಗಡ್ಗೆ ಕಳೆದ ಮೂರು ವರ್ಷಗಳಿಂದ ಹಲವು ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ. ಅದೂ ಕೂಡ ತಮ್ಮದೇ ಏಜೆನ್ಸಿಯಾದ ಸಿಬಿಐಯಿಂದ.

ಸುಳ್ಳು ಸಾಕ್ಷಿಗಳ ಮೂಲಕ ತನ್ನ ಮಾಜಿ ತನಿಖಾಧಿಕಾರಿಯನ್ನು ಸಿಲುಕಿಸಲು ಸಿಬಿಐ ಪ್ರಯತ್ನಿಸುತ್ತಿದೆ ಎನ್ನುವ ಆರೋಪಗಳೂ ಕೇಳಿ ಬರುತ್ತಿವೆ.

ಈ ಬಗ್ಗೆ thewire.in ವರದಿಯೊಂದನ್ನು ಪ್ರಕಟಿಸಿದ್ದು ಸೊಹ್ರಾಬುದ್ದೀನ್-ಕೌಸರ್-ಪ್ರಜಾಪತಿ ನಕಲಿ ಎನ್ ಕೌಂಟರ್ ಪ್ರಕರಣದ ಆರೋಪಿಗಳು ಆರಾಮವಾಗಿದ್ದು, ಪ್ರಕರಣದ ತನಿಖಾಧಿಕಾರಿಯೇ ಕ್ರಿಮಿನಲ್ ಕೇಸುಗಳನ್ನು ಎದುರಿಸುವಂತಾಗಿದ್ದು ವಿಪರ್ಯಾಸ ಎಂದಿದೆ.

ನಾಗಾಲ್ಯಾಂಡ್ ಕೇಡರ್‌ಗೆ ಸೇರಿದ 2001ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸಂದೀಪ್ ಪರಿಶಿಷ್ಟ ಜಾತಿಯವರಾಗಿದ್ದು, ಮಹಾರಾಷ್ಟ್ರದ ನಾಗ್ಪುರ್ ನವರು. ಸಂದೀಪ್ ತಾಮ್ಗಡ್ಗೆ 2011ರಿಂದ 2015ರ ವರೆಗೆ ಸಿಬಿಐಯಲ್ಲಿ ಹಲವು ಹುದ್ದೆಗಳನ್ನು ಹೊಂದಿದ್ದರು. ಇವುಗಳಲ್ಲಿ ಮುಂಬೈ ಸಿಬಿಐ ವಿಭಾಗದ ವಿಶೇಷ ಕ್ರೈಂ ಬ್ರಾಂಚ್‌ನ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಯೂ ಒಂದು. 2011ರಲ್ಲಿ ತಾಮ್ಗಡ್ಗೆ ಸೊಹ್ರಾಬುದ್ದೀನ್ ಮತ್ತು ಕೌಸರ್ ಬಿ ಹತ್ಯೆ ಮತ್ತು ಆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ತುಲಸಿರಾಮ್ ಪ್ರಜಾಪತಿಯ ಹತ್ಯೆಯ ಪ್ರಕರಣದ ತನಿಖೆ ನಡೆಸುತ್ತಿದ್ದರು. ಹತ್ಯೆಗೂ ಮೊದಲು ಕೌಸರ್ ಬಿ ಮೇಲೆ ಅತ್ಯಾಚಾರ ನಡೆದಿತ್ತು. ನಂತರ ಆಕೆಯ ದೇಹವನ್ನು ಸುಟ್ಟು ಬಿಸಾಡಲಾಗಿತ್ತು ಎಂದು ಸಿಬಿಐ ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು.

ಇಶ್ರಾತ್ ಜಹಾನ್ ಹತ್ಯೆ ಪ್ರಕರಣದ ತನಿಖೆಯನ್ನೂ ನಡೆಸುತ್ತಿದ್ದ ಸಂದೀಪ್ ತಾಮ್ಗಡ್ಗೆ ಆ ಸಂದರ್ಭ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಮತ್ತು ಅಮಿತ್ ಶಾಗೆ ಆಪ್ತರಾಗಿದ್ದ ಗುಜರಾತ್‌ನ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಆರೋಪಿಗಳೆಂದು ಹೆಸರಿಸಿ ಎರಡು ದೋಷಾರೋಪಪಟ್ಟಿಯನ್ನು ಸಲ್ಲಿಸಿದ್ದರು.

ಈ ಹತ್ಯೆಗಳಿಗೆ ಸಂಬಂಧಪಟ್ಟಂತೆ ಸಂದೀಪ್ ತಾಮ್ಗಡ್ಗೆ ಅಮಿತ್ ಶಾ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿದ್ದರು. 2012ರ ಜನವರಿಯಲ್ಲಿ ಪ್ರಜಾಪತಿ ಹತ್ಯೆಗೆ ಸಂಬಂಧಿಸಿದ ಹಾಗು 2013ರ ಅಕ್ಟೋಬರ್‌ನಲ್ಲಿ ಇಶ್ರಾತ್ ಜಹಾನ್ ಹತ್ಯೆಯಲ್ಲಿ ಶಾ ಪಾತ್ರವನ್ನು ಪ್ರಶ್ನಿಸಿ ವಿಚಾರಣೆ ನಡೆಸಲಾಗಿತ್ತು.

ಶಾ ಹಾಗೂ ಇತರರನ್ನು ವಿಚಾರಣೆ ನಡೆಸುವ ಜೊತೆಗೆ ತಾಮ್ಗಡ್ಗೆ, ನಡೆಯುತ್ತಿರುವ ತನಿಖೆಯ ಸ್ಥಿತಿಗತಿಯ ಬಗ್ಗೆ ಸರ್ವೋಚ್ಚ ನ್ಯಾಯಾಲಯಕ್ಕೆ ವರದಿ ಒಪ್ಪಿಸುತ್ತಿದ್ದರು. ಈ ಪ್ರಕರಣದ ತನಿಖೆಯ ವಿಚಾರಣೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ಪೀಠದಲ್ಲಿ ಯಾವ ನ್ಯಾಯಾಧೀಶರು ಕೂಡಾ ಸಂದೀಪ್ ತಾಮ್ಗಡ್ಗೆ ಕಾರ್ಯವೈಖರಿ ಬಗ್ಗೆ ಅತೃಪ್ತಿ ಹೊಂದಿರಲಿಲ್ಲ.

ಆದರೆ 2014ರ ಎಪ್ರಿಲ್‌ನಲ್ಲಿ ಸಿಬಿಐ ತಾಮ್ಗಡ್ಗೆಯನ್ನು ಗುಜರಾತ್ ಹತ್ಯಾ ಪ್ರಕರಣಗಳ ತನಿಖೆಯಿಂದ ಹಿಂಪಡೆದುಕೊಂಡಿತು. ಸದ್ಯ ಪ್ರಮುಖ ಸಿಬಿಐ ತನಿಖೆಗಳಲ್ಲಿ ಹೊಂದಾಣಿಕೆ ಮಾಡಿಕೊಂಡ ಕಾರಣಕ್ಕೆ ತನಿಖೆಯನ್ನು ಎದುರಿಸುತ್ತಿರುವ ರಂಜಿತ್ ಶಾರನ್ನು ಸಂದೀಪ್ ತಮ್ಗಡ್ಗೆಯಿಂದ ತೆರವಾದ ಸ್ಥಾನಕ್ಕೆ ನೇಮಿಸಲಾಗಿತ್ತು. ಸಂದೀಪ್ ತಾಮ್ಗಡ್ಗೆಯನ್ನು ತನಿಖೆಯಿಂದ ಹಿಂಪಡೆದ ಆರು ತಿಂಗಳಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಅಮಿತ್ ಶಾರನ್ನು ಪ್ರಕರಣದಿಂದ ದೋಷಮುಕ್ತಿಗೊಳಿಸಿತು. 2015 ಜುಲೈಯಲ್ಲಿ ಸಂದೀಪ್ ತಾಮ್ಗಡ್ಗೆಗೆ ಒದಗಿಸಲಾಗಿದ್ದ ಭದ್ರತಾ ರಕ್ಷಣೆಯನ್ನು ಹಿಂಪಡೆಯಲಾಯಿತು. 2015ರ ಅಕ್ಟೋಬರ್‌ನಲ್ಲಿ ಅವರನ್ನು ನಾಗಾಲ್ಯಾಂಡ್ ಕೆೀಡರ್‌ಗೆ ವಾಪಸ್ ಕಳುಹಿಸಲಾಯಿತು.

ಎರಡು ಸ್ವತಂತ್ರ ಸಾಕ್ಷಿಗಳು ನಾಗಪುರ ನ್ಯಾಯಾಲಯ ಮತ್ತು ಮಹಾರಾಷ್ಟ್ರ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ಸಂದೀಪ್ ತಾಮ್ಗಡ್ಗೆ ವಿರುದ್ಧ ಭಷ್ಟಾಚಾರ ಪ್ರಕರಣದಡಿ ದೂರು ದಾಖಲಿಸಲು ಸುಳ್ಳು ಹೇಳಿಕೆ ನೀಡುವಂತೆ ಸಿಬಿಐ ತಮ್ಮ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದ್ದಾರೆ.

ನಾಗಾಲ್ಯಾಂಡ್‌ಗೆ ಕಳುಹಿಸಲಾದ ನಂತರ ಸಿಬಿಐ ತಾಮ್ಗಡ್ಗೆ ನಾಗಪುರದ ಸಿಬಿಐ ವಿಭಾಗದಲ್ಲಿ ಎಸ್‌ಪಿ, ಎಸಿಬಿಯಾಗಿದ್ದ ವೇಳೆ ತನಿಖೆ ನಡೆಸಿದ್ದ ಎರಡು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಿಬಿಐ, ತಮ್ಗಡ್ಗೆ ವಿರುದ್ಧವೇ ತನಿಖೆಯನ್ನು ಆರಂಭಿಸಿದೆ. ಈ ಎರಡು ಪ್ರಕರಣಗಳಿಗೂ ಗುಜರಾತ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ ಈ ಪ್ರಕರಣಗಳ ಮೂಲಕ ಸಿಬಿಐ ಸಂದೀಪ್ ತಾಮ್ಗಡ್ಗೆಯನ್ನು ಸಿಲುಕಿಸಲು ಪ್ರಯತ್ನಿಸುತ್ತಿದೆ ಎಂಬುದಕ್ಕೆ ಸಾಕ್ಷಿಗಳು ಲಭ್ಯವಾಗಿದೆ ಎಂದು thewire.in ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X