Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಮತದಾರರ ಅಂತಿಮ ಪಟ್ಟಿ ಫೆ.28...

ಮೈಸೂರು: ಮತದಾರರ ಅಂತಿಮ ಪಟ್ಟಿ ಫೆ.28 ರಂದು ಪ್ರಕಟ: ಜಿಲ್ಲಾಧಿಕಾರಿ ಡಿ.ರಂದೀಪ್

ವಾರ್ತಾಭಾರತಿವಾರ್ತಾಭಾರತಿ12 Feb 2018 10:04 PM IST
share
ಮೈಸೂರು: ಮತದಾರರ ಅಂತಿಮ ಪಟ್ಟಿ ಫೆ.28 ರಂದು ಪ್ರಕಟ: ಜಿಲ್ಲಾಧಿಕಾರಿ ಡಿ.ರಂದೀಪ್

ಮೈಸೂರು,ಫೆ.12: ಜಿಲ್ಲೆಯಲ್ಲಿ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ ಅಂತಿಮ ಪಟ್ಟಿಯನ್ನು ಫೆಬ್ರವರಿ 28 ಕ್ಕೆ ಪ್ರಕಟಿಸಲಾಗುವುದು. ಮಾರ್ಚ್ 2 ರೊಳಗೆ ಅಂತಿಮ ಪಟ್ಟಿಯ ಪ್ರತಿಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ರಂದೀಪ್ ಡಿ. ಅವರು ತಿಳಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದ ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 2687 ಮತಗಟ್ಟೆಗಳಿಗೆ ಬೇಡಿಕೆ ಇರುವ ಕಡೆ 12 ಮತಗಟ್ಟೆಗಳನ್ನು ಹೊಸದಾಗಿ ಸೇರ್ಪಡೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಟ್ಟು 2699 ಮತಗಟ್ಟೆಗಳು ಸಿದ್ದಗೊಳ್ಳಲಿದೆ ಎಂದರು.

ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 23,69,987 ಮತದಾರರಿದ್ದು, ಹೊಸದಾಗಿ ಮತದಾರರ ಗುರುತಿನ ಚೀಟಿ ಪಡೆಯಲು 7,8,403 ಅರ್ಜಿ ಸಲ್ಲಿಸಿರುತ್ತಾರೆ. ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು 1,6,664 ಅರ್ಜಿ ಬಂದಿರುತ್ತದೆ. ತಿದ್ದುಪಡಿಗಾಗಿ 9,976 ಅರ್ಜಿಗಳು ಹಾಗೂ ಒಂದೇ ಮತಗಟ್ಟೆಯಲ್ಲಿ ವಿಳಾಸ ಸ್ಥಳಾಂತರ ಕೋರಿ 3,326 ಅರ್ಜಿ ವಿಶೇಷ ಮತದಾರರ ಪರಿಷ್ಕರಣೆ ಅವಧಿಯಲ್ಲಿ ಬಂದಿರುತ್ತದೆ ಎಂದರು.
  
ಮೈಸೂರು ಜಿಲ್ಲೆಯಲ್ಲಿ ಒಟ್ಟು 2,687 ಮತಗಟ್ಟೆಗಳಿದ್ದು, ಬೇಡಿಕೆಯ ಮೇರೆಗೆ 12 ಮತಗಟ್ಟೆಗಳನ್ನು ಹೆಚ್ಚಿನದಾಗಿ ಸೇರ್ಪಡಿಸಲಾಗಿದೆ. ಮೂಲಭೂತ ವ್ಯವಸ್ಥೆ ಇರದ ಜಿಲ್ಲೆಯಲ್ಲಿ 43 ಮತಗಟ್ಟೆಗಳನ್ನು ಸ್ಥಳಾಂತರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಇದರ ಪಟ್ಟಿಯನ್ನು ಎಲ್ಲಾ ರಾಜಕೀಯ ಪಕ್ಷಗಳು ಪಡೆದು ಪರಿಶೀಲಿಸಿಕೊಳ್ಳಬಹುದಾಗಿದೆ ಎಂದರು.

ರಾಜಕೀಯ ಪಕ್ಷಗಳು ತಮ್ಮ ಪಕ್ಷದಿಂದ ಬೂತ್ ಲೆವಲ್ ಅಸಿಸ್‍ಟೆಂಟ್‍ಗಳನ್ನು ನೇಮಕ ಮಾಡಿ ಪಟ್ಟಿಯನ್ನು ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿಗೆ ಸಲ್ಲಿಸುವುದು, ಬೂತ್ ಲೆವಲ್ ಅಸಿಸ್‍ಟೆಂಟ್ ನೇಮಕ ಮಾಡುವುದರಿಂದ ಬೂತ್ ಮಟ್ಟದಲ್ಲಿ ಯಾವುದಾದರೂ ತೊಂದರೆಗಳಿದ್ದಲ್ಲಿ ಅವುಗಳನ್ನು ಪರಿಹರಿಸಿಕೊಳ್ಳಬಹುದು. ತಾಲೂಕು ಮಟ್ಟದಲ್ಲೂ ಸಹ ಸಭೆ ನಡೆಸಿ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡುವಂತೆ ಈಗಾಗಲೇ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಮತಗಟ್ಟೆಗಳಿಗೆ ಅನುಗುಣವಾಗಿ ಬ್ಯಾಲೆಟ್, ಯೂನಿಟ್, ಕಂಟ್ರೋಲ್ ಯೂನಿಟ್ ಮತ್ತು ವಿ.ವಿ.ಪ್ಯಾಟ್‍ಗಳನ್ನು ಸರಬರಾಜು ಮಾಡಲಾಗುವುದು. 3,560 ಬ್ಯಾಲೆಟ್ ಯೂನಿಟ್  ಮತ್ತು 3,000 ಕಂಟ್ರೋಲ್ ಯೂನಿಟ್‍ಗಳನ್ನು ತಮಿಳುನಾಡಿನಿಂದ ಮೈಸೂರು ಜಿಲ್ಲೆಗೆ ಬರಲಿದೆ. ಇವುಗಳ ಪರಿಶೀಲನೆಯನ್ನು ರಾಜಕೀಯ ಪಕ್ಷಗಳ ಸಮ್ಮುಖದಲ್ಲಿ ನಡೆಸಲಾಗುವುದು. ಅವುಗಳು ಬರುವ ವೇಳೆ ಹಾಗೂ ದಿನಾಂಕವನ್ನು ತಿಳಿಸಲಾಗುವುದು ಎಂದರು.  ಚುನಾವಣೆಗೆ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಚುನಾವಣೆ ವೆಚ್ಚದ ವಿವರಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕಾಗಿರುತ್ತದೆ. ಅವುಗಳ ದರ ನಿಗಧಿ ಕುರಿತು ಈಗಾಗಲೇ ಕರಡು ಸಿದ್ಧಪಡಿಸಿದ್ದು, ರಾಜಕೀಯ ಪಕ್ಷದವರಿಗೆ ನೀಡಲಾಗುವುದು. ರಾಜಕೀಯ ಪಕ್ಷದವರು ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಮುಂದಿನ ಸಭೆಯಲ್ಲಿ ತಿಳಿಸಬೇಕು ಎಂದರು. 

ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ವಿಭಾಗದ ಅಧೀಕ್ಷಕ ರಾಮಪ್ರಸಾದ್, ರಾಜಕೀಯ ಪಕ್ಷಗಳ ಮುಖಂಡರುಗಳಾದ ಎಂ.ಸತೀಶ್, ಮಹೇಶ್ ಎಸ್.ಎಸ್ ಹಾಗೂ ಆರ್.ಎಸ್.ರಾಜಶೇಖರಮೂರ್ತಿ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X