Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರಿಗೆ ಆಗಮಿಸಿದ ಸ್ವಚ್ಛ ಸರ್ವೇಕ್ಷಣಾ...

ಮೈಸೂರಿಗೆ ಆಗಮಿಸಿದ ಸ್ವಚ್ಛ ಸರ್ವೇಕ್ಷಣಾ ತಂಡ

ವಾರ್ತಾಭಾರತಿವಾರ್ತಾಭಾರತಿ12 Feb 2018 10:14 PM IST
share
ಮೈಸೂರಿಗೆ ಆಗಮಿಸಿದ ಸ್ವಚ್ಛ ಸರ್ವೇಕ್ಷಣಾ ತಂಡ

ಮೈಸೂರು,ಫೆ.12: ಸತತ ಎರಡು ಬಾರಿ ಸ್ವಚ್ಛತಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮೈಸೂರಿಗೆ ಸ್ವಚ್ಛ ಸರ್ವೇಕ್ಷಣಾ ತಂಡ ಭೇಟಿ ನೀಡಿದೆ.

ಸೋಮವಾರ ಬೆಳಿಗ್ಗೆ ನಿಗದಿತ ಅವಧಿಯಲ್ಲಿ ಮೊದಲು ಮೈಸೂರು ಮಹಾನಗರಪಾಲಿಕೆಗೆ ತಂಡ ಆಗಮಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಇದಕ್ಕೆ 1400 ಅಂಕ ನಿಗದಿ ಮಾಡಲಾಗಿದೆ. ಇದೇ ವೇಳೆ ಪೌರಕಾರ್ಮಿಕರ ಹಾಜರಾತಿಗೆ ಸಂಬಂಧಿಸಿದಂತೆ ಜಾರಿಗೆ ತಂದಿರುವ ಬಯೋಮೆಟ್ರಿಕ್ ಪದ್ಧತಿ, ವಿವಿಧ ಕಾಮಗಾರಿಗಳ ಟೆಂಡರ್, ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ಎಲ್ಲವನ್ನೂ ಪರಿಶೀಲಿಸಿದೆ.

ಈ ಕುರಿತು ನಗರ ಪಾಲಿಕೆಯ ಆಯುಕ್ತ ಜಿ.ಜಗದೀಶ್ ಮಾತನಾಡಿ, ದೆಹಲಿಯಲ್ಲಿರುವ ಸ್ವಚ್ಛತಾ ತಂಡದ ನಿರ್ದೇಶನದ ಮೇರೆಗೆ ಸ್ಥಳ ಪರಿಶೀಲನೆಯನ್ನು ಮೂರು ದಿನಗಳ ಕಾಲ ಮಾಡಲಿದೆ, ನಗರದಲ್ಲಿ ಸ್ವಚ್ಛತೆಗೆ ಸಂಬಂಧಿಸಿದಂತೆ ಖುದ್ದು ವಾರ್ಡ್ ಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಿದೆ. ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿದೆ. ಸುಮಾರು ಒಂದು ಸಾವಿರ ಸಾರ್ವಜನಿಕರನ್ನು ಭೇಟಿಯಾಗಿ ಮಾಹಿತಿ ಸಂಗ್ರಹಿಸಲಿದೆ. ಅವರಿಗೆ ಆರು ಪ್ರಶ್ನೆಗಳನ್ನು ಕೇಳಲಿದೆ. ಈ ಬಾರಿಯ ಸ್ವಚ್ಛತಾ ಸಮೀಕ್ಷೆಯಲ್ಲಿ ಪಾಲಿಕೆಯಿಂದ ಮಾಹಿತಿ ಸಂಗ್ರಹ ಮತ್ತು ಸಂವಹನಕ್ಕೆ 1,400ಅಂಕ, ಸ್ಥಳ ಭೇಟಿಗೆ 1,200ಅಂಕ ನಿಗದಿ ಮಾಡಲಾಗಿದೆ. ಸ್ವಚ್ಛತಾ ಬಳಕೆ ಆಪ್ ಸೇರಿದಂತೆ ಸಾರ್ವಜನಿಕರ ಫೀಡ್ ಬ್ಯಾಕ್ ಗೆ 1,400ಅಂಕವನ್ನೂ ನಿಗದಿ ಮಾಡಲಾಗಿದೆ. ಸ್ವಚ್ಛತಾ ಆಪ್ ಬಳಕೆಗೆ ನಿಗದಿಯಾಗಿರುವ 400ಪೂರ್ಣ ಅಂಕವನ್ನು ಪಾಲಿಕೆ ಈಗಾಗಲೇ ಪಡೆದುಕೊಂಡಿದೆ ಎಂದರು. ತಂಡದಲ್ಲಿ ಸಮೀಕ್ಷಣಾಧಿಕಾರಿಗಳಾದ ಅಜಯ್, ಚೈತನ್ಯ, ಶೋಚ್ತಾ ಇದ್ದು, ಮೊಹಮ್ಮದ್ ಹಾಗೂ ಪೂಜಾ ತಂಡವನ್ನು ಸೇರಿಕೊಳ್ಳಲಿದ್ದಾರೆ.

2017ರ ಸಮೀಕ್ಷೆಯಲ್ಲಿ 500 ನಗರಗಳು ಮಾತ್ರ ಭಾಗವಹಿಸಿದ್ದು, ಈ ಬಾರಿ ಹೆಚ್ಚಿನ ನಗರ ಭಾಗವಹಿಸುವ ನಿರೀಕ್ಷೆಯಿದೆ. ಫೆ.15ರವರೆಗೂ ಮೈಸೂರಿನಲ್ಲಿ ಸಮೀಕ್ಷೆ ನಡೆಸಲಿದೆ. ಅದಕ್ಕಾಗಿ ಪಾಲಿಕೆ ಎಲ್ಲ ರೀತಿಯಿಂದಲೂ ಸಿದ್ಧತೆ ಮಾಡಿಕೊಂಡಿದೆ.

2018ರ ಸಮೀಕ್ಷೆ ಜ.4ರಿಂದ ದೇಶಾದ್ಯಂತ ಆರಂಭಗೊಂಡಿದ್ದು, 2018ರ ಸಮೀಕ್ಷೆಯಲ್ಲಿ 4,014ನಗರಪಾಲಿಕೆ, ಸ್ಥಳೀಯ ಸಂಸ್ಥೆಗಳು ಭಾಗವಹಿಸುತ್ತಿದೆ.  ಕಳೆದ ಬಾರಿ ಸ್ವಚ್ಛ ಸಮೀಕ್ಷೆಗೆ 2000 ಅಂಕ ನಿಗದಿ ಮಾಡಲಾಗಿತ್ತು. ಆದರೆ ಈ ಬಾರಿ 4000 ಅಂಕ ನಿಗದಿ ಮಾಡಲಾಗಿದೆ. ಈ ಬಾರಿಯೂ ಮೈಸೂರು ಸ್ವಚ್ಛನಗರಿ ಪಟ್ಟವನ್ನು ಅಲಂಕರಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X