Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕೈಗಾರಿಕಾ ಕ್ಷ್ರೇತ್ರದಲ್ಲಿ...

​ಕೈಗಾರಿಕಾ ಕ್ಷ್ರೇತ್ರದಲ್ಲಿ ಡಿಜಿಟಲೀಕರಣದಿಂದ ಉದ್ಯಮ ರಂಗದ ವಿಸ್ತರಣೆ: ಅಚಲ್ ಎಂ.ಕೃಷ್ಣ

ವಾರ್ತಾಭಾರತಿವಾರ್ತಾಭಾರತಿ12 Feb 2018 10:29 PM IST
share
​ಕೈಗಾರಿಕಾ ಕ್ಷ್ರೇತ್ರದಲ್ಲಿ ಡಿಜಿಟಲೀಕರಣದಿಂದ ಉದ್ಯಮ ರಂಗದ ವಿಸ್ತರಣೆ: ಅಚಲ್ ಎಂ.ಕೃಷ್ಣ

ಮಂಗಳೂರು, ಫೆ.12: ದೇಶದಲ್ಲಿ ಕೈಗಾರಿಕೆ 4.0 ತಾಂತ್ರಿಕತೆಯನ್ನೊಳಗೊಂಡ ಹೊಸ ಯೋಜನೆಯಿಂದ ಉದ್ಯಮ ರಂಗದ ವಿಸ್ತರಣೆಗೆ ಅವಕಾಶವಾಗಿದೆ ಎಂದು ಸ್ಮಾರ್ಟ್ ಕ್ಯಾಚ್ ನೆಟ್‌ವರ್ಕ್ ಪ್ರೈವೇಟ್ ಲಿ.ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಚಲ್ ಎಂ.ಕೃಷ್ಣ ತಿಳಿಸಿದ್ದಾರೆ.

ಮಂಗಳೂರು ಪ್ರೊಡಕ್ಟಿವ್ ಕೌನ್ಸಿಲ್ ವತಿಯಿಂದ ನಗರದ ಎಸ್‌ಡಿಎಂ ಕಾಲೇಜು ಸಭಾಂಗಣದಲ್ಲಿ ಇಂದು ಕೈಗಾರಿಕೆ 4.0 ಯೋಜನೆಯ ಅವಕಾಶಗಳ ಬಗ್ಗೆ ಉಪನ್ಯಾಸ ನೀಡಿದರು. ಇಂಡಸ್ಟಿ 4.0 ಯೋಜನೆ ಭಾರತದ ನಾಲ್ಕನೆ ಕ್ರಾಂತಿಕಾರಿ ಯೋಜನೆಯೆನ್ನಬಹುದು. ಇದರಿಂದ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದಂತಾಗುತ್ತದೆ. ಭಾರತದ ಪ್ರಧಾನಿಯ ಮೇಕ್ ಇನ್ ಇಂಡಿಯಾ ಯೋಜನೆಯ ಪ್ರಕಾರ ಡಿಜಿಟಲ್ ಇಂಡಿಯಾ ಕಾರ್ಯಕ್ರಮನಡೆಯುತ್ತಿದೆ. ಉದ್ಯಮ ಕ್ಷೇತ್ರದಲ್ಲಿ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಲು ಡಿಜಿಟಲ್ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುವ ಯೋಜನೆ ಇದಾಗಿದೆ. ಪ್ರಸಕ್ತ ದೇಶದಲ್ಲಿ ಈ ರೀತಿಯ ತಂತ್ರಜ್ಞಾನದಿಂದ ಮಾರುಕಟ್ಟೆ, ಉದ್ಯಮ ಕ್ಷೇತ್ರ ವಿಸ್ತರಣೆಯಾಗಿದೆ. ಗ್ರಾಹಕರು ಆ್ಯಪ್‌ಗಳ ಮೂಲಕ ನೇರವಾಗಿ ಕಂಪೆನಿಗಳ ಉತ್ಸನ್ನಗಳನ್ನು ಕಡಿಮೆ ಬೆಲೆಗೆ ಖರೀದಿಸುವಂತಾಗಿದೆ. ನಗರದಲ್ಲಿ ಅಂಗಡಿ ಮಳಿಗೆಗಳಲ್ಲಿ ಇರುವ ವಸ್ತುಗಳ ಬೆಲೆಯನ್ನು ಆನ್‌ಲೈನ್ ಮೂಲಕ ಖರೀದಿಸಿದಾಗ ಸಿಗಬಹುದಾದ ಲಾಭಾಂಶವನ್ನು ತುಲನೆ ಮಾಡಿ ಸಾಮಾಗ್ರಿಗಳನ್ನು ಖರಿದೀಸುತ್ತಿದ್ದಾರೆ. ಇದರಿಂದ ಕಂಪೆನಿಗಳು ನೇರ ಮಾರಾಟದ ಪ್ರಯೋಜನವನ್ನು ಪಡೆಯುತ್ತಾರೆ. ಗ್ರಾಹಕರು ತಮಗೆ ಬೇಕಾದ ವಸ್ತುಗಳನ್ನು ಸ್ಪರ್ಧಾತ್ಮಕ ದರದಲ್ಲಿ ಪಡೆಯಲು ಸಾಧ್ಯವಾಗುತ್ತಿದೆ. ಸಿಬಿಎಸ್‌ಸಿ ಶಾಲಾ ಪಠ್ಯಕ್ಕೆ ಪೂರಕವಾದ ಶೈಕ್ಷಣಿಕ ಸಾಮಗ್ರಿಗಳು, ಕೃಷಿ ಪರಿಕರಗಳು, ಗ್ರಾಹಕರಿಗೆ ಬೇಕಾಗುವ ಇತರ ಪರಿಕರಗಳು ಈ ರೀತಿಯ ಡಿಜಿಟಲೀಕರಣದ ಮೂಲಕ ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಕೈಗಾರಿಕಾ ರಂಗ ವಿಸ್ತಾರವಾಗಿ ಬೆಳೆಯಲು ಸಹಕಾರಿಯಾಗಿದೆ ಎಂದು ಅಚಲ್ ಕೃಷ್ಣ ತಿಳಿಸಿದ್ದಾರೆ.

ಸಮಾರಂಭದಲ್ಲಿ ಕರ್ಣಾಟಕ ಬ್ಯಾಂಕ್‌ನ ಎಜಿಎಂ ಶರತ್ ಚಂದ್ರ ಹೊಳ್ಳ ಉದ್ಘಾಟಿಸಿದರು. ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್‌ನ ಅಧ್ಯಕ್ಷ ರಾಮರಾವ್, ಕಾರ್ಯದರ್ಶಿ ಬಾಲಕೃಷ್ಣ ಸರಳಾಯ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X