Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಒಮನ್ ಭೇಟಿಯಿಂದ ಉಭಯ ದೇಶಗಳ ಬಾಂಧವ್ಯ...

ಒಮನ್ ಭೇಟಿಯಿಂದ ಉಭಯ ದೇಶಗಳ ಬಾಂಧವ್ಯ ವೃದ್ಧಿ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ12 Feb 2018 10:29 PM IST
share
ಒಮನ್ ಭೇಟಿಯಿಂದ ಉಭಯ ದೇಶಗಳ ಬಾಂಧವ್ಯ ವೃದ್ಧಿ: ಪ್ರಧಾನಿ ಮೋದಿ

ಮಸ್ಕತ್, ಫೆ. 12: ಒಮನ್ ಭೇಟಿ ಮತ್ತು ಆ ದೇಶದ ನಾಯಕರೊಂದಿಗೆ ತಾನು ನಡೆಸಿದ ಮಾತುಕತೆಗಳು ದ್ವಿಪಕ್ಷೀಯ ಸಂಬಂಧಗಳ ಎಲ್ಲಾ ಕ್ಷೇತ್ರಗಳಿಗೆ ‘ಮಹತ್ವದ ವೇಗೋತ್ಕರ್ಷ’ ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.

‘‘ಈ ಒಮನ್ ಭೇಟಿಯು ಯಾವತ್ತೂ ನನ್ನ ನೆನಪಿನಲ್ಲಿರುತ್ತದೆ’’ ಎಂದು ಎರಡು ದಿನಗಳ ಭೇಟಿಯ ಮುಕ್ತಾಯಕ್ಕೆ ಮುನ್ನ ಸೋಮವಾರ ಅವರು ಟ್ವೀಟ್ ಮಾಡಿದ್ದಾರೆ.

ಈ ಭೇಟಿಯ ವೇಳೆ ಭಾರತ ಮತ್ತು ಒಮನ್ ದೇಶಗಳು 8 ಒಪ್ಪಂದಗಳಿಗೆ ಸಹಿ ಹಾಕಿದವು.

‘‘ಎರಡು ದೇಶಗಳ ಉದ್ಯಮಶೀಲ ಜನರ ನಡುವಿನ ಶತಮಾನಗಳ ಬಾಂಧವ್ಯವನ್ನು ಗಟ್ಟಿಗೊಳಿಸುವಲ್ಲಿ ಈ ಭೇಟಿ ನೆರವು ನೀಡಿದೆ ಹಾಗೂ ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿನ ನಮ್ಮ ಬಾಂಧವ್ಯವಕ್ಕೆ ಮತ್ತಷ್ಟು ಇಂಬು ನೀಡಿದೆ’’ ಎಂದು ಮೋದಿ ಹೇಳಿದರು.

‘‘ಧನ್ಯವಾದಗಳು ಸುಲ್ತಾನ್ ಕಾಬೂಸ್ ಬಿನ್ ಸೈದ್ ಅಲ್ ಸೈದ್ ನಿಮ್ಮ ಹಾರ್ದಿಕ ಆತಿಥ್ಯ ಮತ್ತು ಸ್ನೇಹಕ್ಕಾಗಿ. ಇದರಿಂದಾಗಿ ನನ್ನ ಈ ಒಮನ್ ಭೇಟಿಯು ನನ್ನ ಅತ್ಯಂತ ಸ್ಮರಣಾರ್ಹ ಭೇಟಿಗಳ ಪೈಕಿ ಒಂದಾಗಿದೆ’’ ಎಂದು ಪ್ರಧಾನಿ ನುಡಿದರು.

ಇದಕ್ಕೂ ಮೊದಲು ಅವರು ಫೆಲೆಸ್ತೀನ್ ಮತ್ತು ಯುಎಇಗೆ ಭೇಟಿ ನೀಡಿದ್ದರು.

8 ಒಪ್ಪಂದಗಳಿಗೆ ಸಹಿ

ತನ್ನ ಮೂರು ದೇಶಗಳ ಪ್ರವಾಸದ ಕೊನೆಯ ಹಂತವಾಗಿ ದುಬೈಯಿಂದ ಮಸ್ಕತ್‌ಗೆ ಆಗಮಿಸಿದ ಪ್ರಧಾನಿ ಮೋದಿ, ರವಿವಾರ ರಾತ್ರಿ ಒಮನ್ ದೊರೆ ಸುಲ್ತಾನ್ ಕಾಬೂಸ್ ಜೊತೆ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.

ಉಭಯ ದೇಶಗಳ ನಡುವಿನ ಹಾಲಿ ಸಹಕಾರದ ಬಗ್ಗೆ ಹಾಗೂ ಸಂಬಂಧಗಳನ್ನು ಇನ್ನಷ್ಟು ಬೆಳೆಸುವ ವಿಧಾನಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು ಎಂದು ಅಧಿಕೃತ ‘ಒಮನ್ ನ್ಯೂಸ್ ಏಜನ್ಸಿ’ ವರದಿ ಮಾಡಿದೆ.

‘‘ಸುಲ್ತಾನ್ ಕಾಬೂಸ್ ಜೊತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಿಯೋಗವು ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ವಿಸ್ತರಿಸುವ ಬಗ್ಗೆ ಮಾತುಕತೆ ನಡೆಸಿತು. ವ್ಯಾಪಾರ ಮತ್ತು ಹೂಡಿಕೆ, ಇಂಧನ, ರಕ್ಷಣೆ ಮತ್ತು ಭದ್ರತೆ, ಆಹಾರ ಭದ್ರತೆ ಮತ್ತು ಪ್ರಾದೇಶಿಕ ವಿಷಯಗಳಲ್ಲಿನ ಸಹಕಾರವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಮಾತುಕತೆಯಲ್ಲಿ ಒತ್ತು ನೀಡಲಾಯಿತು’’ ಎಂದು ಭಾರತೀಯ ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಮಾತುಕತೆಗಳ ಬಳಿಕ ಉಭಯ ದೇಶಗಳು 8 ಒಪ್ಪಂದಗಳಿಗೆ ಸಹಿ ಹಾಕಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X