Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ...

ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ12 Feb 2018 10:31 PM IST
share
ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ

ದಾವಣಗೆರೆ,ಫೆ.12: ರಾಜ್ಯಾದ್ಯಂತ ದೇವದಾಸಿ ಮಹಿಳೆಯರು, ಕುಟುಂಬ ಸದಸ್ಯರ ಗಣತಿ ಸೇರಿದಂತೆ 2018ರ ಬಜೆಟ್‍ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಜಿಲ್ಲಾ ಘಟಕ ಹಾಗೂ ದಲಿತ ಹಕ್ಕುಗಳ ಸಮಿತಿ, ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ, ರಾಜ್ಯ ಮಸಣ ಕಾರ್ಮಿಕರ ಸಂಘದ ಜಿಲ್ಲಾ ಘಟಕಗಳ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು. 

ಪಿ.ಬಿ. ರಸ್ತೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮ್ಮ ವಿವಿಧ ಘೋಷಣೆ ಕೂಗುತ್ತಾ ಸಾಗಿದ ಪ್ರತಿಭಟನಾಕಾರರು, ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಜಿಲ್ಲಾಡಳಿತದ ಮುಖಾಂತರ ಮುಖ್ಯಮಂತ್ರಿಗೆ ಮನವಿ ಅರ್ಪಿಸಿದರು. 

ಈ ಸಂದರ್ಭ ಮಾತನಾಡಿದ ಸಂಘಟನೆ ಮುಖಂಡ ಕೆ. ಲಕ್ಷ್ಮೀನಾರಾಯಣ ಭಟ್, ದೇವದಾಸಿ ಮಹಿಳೆಯರ ಮತ್ತವರ ಕುಟುಂಬ ಸದಸ್ಯರ ಗಣತಿ ರಾಜ್ಯಾದ್ಯಂತ ಕೈಗೊಳ್ಳಬೇಕು. ಹಿಂದೆ ಗಣತಿಯಲ್ಲಿ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಸೇರಿಸಬೇಕು. ದೇವದಾಸಿಯರ ಜೊತೆಗೆ ಕುಟುಂಬ ಸದಸ್ಯರ ಗಣತಿ ಆಗಬೇಕು. ಮಾಸಿಕ ಸಹಾಯಧನ 3 ಸಾವಿರ ರು.ಗೆ ಹೆಚ್ಚಿಸುವ ಜೊತೆಗೆ ದೇವದಾಸಿ ಮಹಿಳೆಯರು, ಕುಟುಂಬಗಳ ಪರಿತ್ಯಕ್ತ ಮಹಿಳೆಯರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. 

ದೇವದಾಸಿ ಮಹಿಳೆ, ಕುಟುಂಬಗಳ ಪುನರ್ವಸತಿಗಾಗಿ ಭೂಮಿ ಒದಗಿಸಲು ಬಜೆಟ್‍ನಲ್ಲಿ ಪ್ರತಿ ವರ್ಷ 5 ಸಾವಿರ ಕೋಟಿ ಮೀಸಲಿಡಬೇಕು. 10 ಸೆಂಟ್ಸ್ ಸ್ಥಳದಲ್ಲಿ 5 ಲಕ್ಷ ಮೌಲ್ಯದ ಮನೆ ಕಟ್ಟಿ ಕೊಡಬೇಕು. ದೇವದಾಸಿಯರು, ಕುಟುಂಬ ಸದಸ್ಯರ ಎಲ್ಲಾ ಸಾಲ ಮನ್ನಾ ಮಾಡಬೇಕು. ಉದ್ಯೋಗ ನಷ್ಟ ಪರಿಹಾರವಾಗಿ 25 ಸಾವಿರ ಪರಿಹಾರ ನೀಡಬೇಕು. ದೇವದಾಸಿಯರ ಮಕ್ಕಳಿಗೆ ವಿದ್ಯಾಭ್ಯಾಸ, ಉದ್ಯೋಗಕ್ಕಾಗಿ ನೆರವಾಗಬೇಕು. ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದ ಅವರು, ಪುನರ್ವಸತಿ ಯೋಜನಾಧಿಕಾರಿಗಳ ಭ್ರಷ್ಟಾಚಾರ ತಡೆಯುವ ಮೂಲಕ ದೇವದಾಸಿ ಮಹಿಳೆಯರು, ಕುಟುಂಬ ಸದಸ್ಯರಿಗೆ ಆಗುವ ಅನ್ಯಾಯ ತಪ್ಪಿಸಬೇಕು. ಉದ್ಯೋಗ ಖಾತರಿ ಕೆಲಸವನ್ನು ಕನಿಷ್ಟ 200 ದಿನಗಳ ಕಾಲ ಕಡ್ಡಾಯ ಒದಗಿಸಬೇಕು. ನಗರ ಪ್ರದೇಶಕ್ಕೂ ಖಾತರಿ ವಿಸ್ತರಿಸಬೇಕು. ಕನಿಷ್ಟ ಕೂಲಿ 600 ರು.ಗೆ ಹೆಚ್ಚಿಸಬೇಕು. ದಲಿತರ ಕೇರಿಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲು ಸಿಎಂ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. 

ಡಿಎಚ್‍ಎಸ್ ಸಂಚಾಲಕ ಭರಮಪ್ಪ ಮಾತನಾಡಿ, ದೇವದಾಸಿ ಮಹಿಳೆಯರು, ಕುಟುಂಬಕ್ಕೆ ಮನೆ, ನಿವೇಶನ, ವ್ಯವಸಾಯಕ್ಕೆ ಭೂಮಿ ನೀಡಬೇಕು. ಮಾಸಿಹ 3 ಸಾವಿರ ರು. ಮಾಸಿಕ ಪಿಂಚಣಿ ನೀಡಬೇಕು. ಮಸಣ ಕಾರ್ಮಿಕರಿಗೂ 3 ಸಾವಿರ ರು. ಪಿಂಚಣಿ ಘೋಷಿಸಬೇಕು. ಪರಿತ್ಯಕ್ತ ಮಹಿಳೆಯರು, ವಿಧವೆಯರಿಗೂ ಮಾಸಿಕ 3 ಸಾವಿರ ನೀಡಬೇಕು. ದೇವದಾಸಿ ಮಹಿಳೆಯರು, ದಲಿತರ ಮಕ್ಕಳ ವಿದ್ಯಾಭ್ಯಾಸಕ್ಕೆ, ಉದ್ಯೋಗಕ್ಕೆ ನೆರವಾಗಬೇಕು ಎಂದರು. ಈ ಎಲ್ಲಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಉಭಯ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಯಿತು. 

ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದ ಟಿ.ವಿ. ರೇಣುಕಮ್ಮ, ಈ. ಶ್ರೀನಿವಾಸ, ಎಚ್. ಅಣ್ಣಪ್ಪ ಸ್ವಾಮಿ, ಭರಮಪ್ಪ, ಎನ್. ಹಾಲೇಶ್, ಗಜೇಂದ್ರ, ರೇಣುಕಮ್ಮ, ಮುತ್ತಮ್ಮ, ಗಂಗಮ್ಮ ಮಲೆಬೆನ್ನೂರು, ರತ್ನಮ್ಮ, ಮಲ್ಲಮ್ಮ, ಹಾಲಮ್ಮ, ಸವಿತಾ, ಪರಶುರಾಮ, ನಾಗರಾಜ, ಡಿ.ರವಿ, ಜಗದೀಶ, ನಂದೀಶ, ಅಶೋಕ, ಚಂದ್ರಪ್ಪ, ಉಮೇಶ, ಚನ್ನಮ್ಮ, ಮೈಲಮ್ಮ, ಎಸ್. ಕೆಂಚಮ್ಮ, ಎಸ್.ರೇಣುಕಾ, ನಾಗವೇಣಿ, ಕೆಂಚಮ್ಮ, ಅಂಜಿನಮ್ಮ, ಶಾಂತಮ್ಮ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X