Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ...

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಹಸ್ತಾಂತರ

ದ.ಕ. ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಖತಾರ್, ಹಿದಾಯ ಫೌಡೇಶನ್ ಮಂಗಳೂರು ಸಹಯೋಗದಲ್ಲಿ

ವಾರ್ತಾಭಾರತಿವಾರ್ತಾಭಾರತಿ12 Feb 2018 10:44 PM IST
share
ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ  ಡಯಾಲಿಸಿಸ್ ಯಂತ್ರ ಹಸ್ತಾಂತರ

ಬೆಳ್ತಂಗಡಿ, ಫೆ. 12: ಸಂಘ ಸಂಸ್ಥೆಗಳು ಬಡವರಿಗೆ ನೆರವಾಗುವ ಕಾರ್ಯವನ್ನು ಮಾಡಿದಾಗ ದೇವರ ಆಶಿರ್ವಾದ ಇರುತ್ತದೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಹಸ್ತಾಂತರಿಸಲಾಗಿರುವ ಡಯಾಲಿಸಿಸ್ ಯಂತ್ರದ ಮೂಲಕ ಹಲವರು ಬಡ ರೋಗಿಗಳ ಜೀವ ಉಳಿಸುವ ಕಾರ್ಯವನ್ನು ಮಾಡುವಂತಾಗಲಿ ಎಂದು ಬೆಳ್ತಂಗಡಿ ಶಾಸಕ ಕೆ ವಸಂತ ಬಂಗೇರ ಹೇಳಿದರು.

 ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ದಕ್ಷಿಣ ಕನ್ನಡ ಮುಸ್ಲೀಂ ವೆಲ್ಫೇರ್ ಅಸೋಸಿಯೇಶನ್ ಖತಾರ್, ಅವರು ಹಿದಾಯ ಫೌಡೇಶನ್ ಮಂಗಳೂರು ಇದರ ಸಹಯೋಗದೊಂದಿಗೆ ಸುಮಾರು ಏಳು ಲಕ್ಷ ವೆಚ್ಚದಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ನೀಡಿರುವ ಡಯಾಲಿಸಿಸ್ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕರು ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾಗಿರುವ ತುರ್ತು ನಿಗಾ ಘಟಕ, ಹಾಗೂ ಆಧುನಿಕ ಎಕ್ಸ್‌ರೇ ಘಟಕದ ಉದ್ಘಾಟನೆಯನ್ನು ನೆರವೇರಿಸಿದರು.

ಬೆಳ್ತಂಗಡಿ ಪ್ರದೇಶದಲ್ಲಿ ಸುಮಾರು 50 ಕ್ಕೂ ಹೆಚ್ಚು ಡಯಾಲಿಸಿಸ್ ಅಗತ್ಯವಿರುವ ರೋಗಿಗಳಿದ್ದು ಸರಕಾರದಿಂದ ಒದಗಿಸಲಾಗಿರುವ ಎರಡು ಯಂತ್ರ ಗಳಿಂದ ಎಲ್ಲರಿಗೂ ಸೇವೆ ಒದಗಿಸಲು ಸಾಧ್ಯವಾಗುತ್ತಿರಲಿಲ್ಲ ಆ ಕಾರಣದಿಂದಾಗಿ ರೋಗಿಗಳಿಗೆ ತೊಂದರೆಯಾಗುತ್ತಿತ್ತು ಇದೀಗ ಮೂರನೆಯ ಯಂತ್ರವೂ ಬಂದಿದೆ ಅದೂ ಕಡಿಮೆಯಾಗುವುದಾಗಿ ವೈದ್ಯರು ತಿಳಿಸಿದ್ದಾರೆ. ಸಂಸ್ಥೆಯವರು ಇನ್ನೊಂದು ಡಯಾಲಿಸಿಸ್ ಯಂತ್ರವನ್ನು ಒದಗಿಸುವ ಮನಸ್ಸು ಮಾಡಬೇಕು ಎಂದು ವಿನಂತಿಸಿದರು. ಹಾಗೂ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಮಂಜೂರಾಗಿರುವ ರೂ 20 ಲಕ್ಷ ಅನುದಾನವನ್ನು ಅವರು ಹಸ್ತಾಂತರಿಸಿದರು. ಇದರಿಂದ ಅಗತ್ಯ ಕಾಮಗಾರಿ ಹಾಗೂ ಯಂತ್ರೋಪಕರಣಗಳ ಖರೀದಿ ನಡೆಸುವಂತೆ ಸೂಚಿಸಿದರು.

ಹಿದಾಯ ಫೌಂಡೇಶನ್‌ನ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ, ಮಾತನಾಡಿ ವಿದೇಶದಲ್ಲಿ ದುಡಿಯುತ್ತಿರುವ ಕರಾವಳಿಯ ಜನರ ಸಹಕಾರದೊಂದಿಗೆ ಇಂತಹ ಸೇವಾ ಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಅಗತ್ಯವಿರುವ ರಕ್ತ ಪರೀಕ್ಷಾ ಯಂತ್ರವನ್ನು ಒದಗಿಸುವುದಾಗಿ ಭರವಸೆ ನೀಡಿದರು, ಹಾಗೂ ಶಾಸಕರ ಬೇಡಿಕೆಯಂತೆ ಮತ್ತೊಂದು ಡಯಾಲಿಸಿಸ್ ಘಟಕವನ್ನು ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ರೋಗಗಳು ಬರುವ ಮೊದಲೇ ಅದರ ಬಗ್ಗೆ ತಿಳಿದುಕೊಂಡು ಅದು ಬರದಂತೆ ತಡೆಯುವ ನಿಟ್ಟಿನಲ್ಲಿ ಮಾಹಿತಿ ಕಾರ್ಯಾಗಾರವನ್ನು ಸಂಸ್ಥೆ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದ.ಕ ಜಿಲ್ಲಾ ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ಕೆ ಸಾಹುಲ್ ಹಮೀದ್ ಮಾತನಾಡಿ ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರವನ್ನು ಅತ್ಯಂತ ಉತ್ತಮ ರೀತಿಯಲ್ಲಿ ಅಭಿವೃದ್ದಿ ಪಡಿಸಲಾಗಿದ್ದು ಖಾಸಗಿ ಆಸ್ಪತ್ರೆಗಳಿಗೂ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ವೇದಿಕೆಯಲ್ಲಿ ದ.ಕ ಮುಸ್ಲೀಂ ವೆಲ್ಫೇರ್ ಎಸೋಸಿಯೇಶನ್ ಖತಾರ್ ಇದರ ಮಾಜಿ ಅಧ್ಯಕ್ಷ ಬಿ ಮಹಮ್ಮದ್ ಕುಂಞಿ ಖತ್ತಾರ್, ಹಿದಾಯ ಫೌಂಡೇಶನ್‌ನ ಆಡಳಿತಾಧಿಕಾರಿ ಅಬೀದ್ ಅಸ್ಗರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ತಾಲೂಕು ಆರೋಗ್ಯಾಧಿಕಾರಿ ಡಾ ಕಲಾಮಧು, ಬೆಳ್ತಂಗಡಿ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿ ಡಾ. ಆದಂ, ಹಾಗೂ ಇತರರು ಉಪಸ್ಥಿತರಿದ್ದರು.

ಅಬ್ದುಲ್ ರಝಾಕ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಜಂಇಯ್ಯತುಲ್ ಫಲಾಹ್ ತಾಲೂಕು ಅಧ್ಯಕ್ಷ ಕಾಸೀಂ ಮಲ್ಲಿಗೆ ಮನೆ ವಂದಿಸಿದರು. ಸುಭಾಷಿಣಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹಿದಾಯ ಫೌಂಡೇಶನ್ ಹಾಗೂ ಜಂಇಯ್ಯತುಲ್ ಫಲಾಹ್, ದ.ಕ ಮುಸ್ಲೀಂ ವೆಲ್ಫೇರ್ ಎಸೋಸಿಯೇಶನ್ ಖತಾರ್ ಇದರ ಮುಖಂಡರುಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X