Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೇ ನಿಲ್ದಾಣದ ಟಾಯ್ಲೆಟ್‌ಗಳ ಬಳಕೆ...

ರೈಲ್ವೇ ನಿಲ್ದಾಣದ ಟಾಯ್ಲೆಟ್‌ಗಳ ಬಳಕೆ ಶುಲ್ಕ ಕಡಿತಕ್ಕೆ ಪ್ರಸ್ತಾಹ

ವಾರ್ತಾಭಾರತಿವಾರ್ತಾಭಾರತಿ12 Feb 2018 11:40 PM IST
share
ರೈಲ್ವೇ ನಿಲ್ದಾಣದ ಟಾಯ್ಲೆಟ್‌ಗಳ ಬಳಕೆ ಶುಲ್ಕ ಕಡಿತಕ್ಕೆ ಪ್ರಸ್ತಾಹ

ಹೊಸದಿಲ್ಲಿ, ಫೆ.12: ರೈಲ್ವೇ ನಿಲ್ದಾಣಗಳಲ್ಲಿರುವ ಪಾವತಿಸಿ ಬಳಸುವ ಟಾಯ್ಲೆಟ್‌ಗಳ ಶುಲ್ಕವನ್ನು ಕಡಿಮೆಗೊಳಿಸುವಂತೆ ಹಾಗೂ ಕೆಲವು ಸಣ್ಣ ರೈಲು ನಿಲ್ದಾಣಗಳಲ್ಲಿ ಇವು ಸಂಪೂರ್ಣ ಉಚಿತವಾಗಿರಲು ಕ್ರಮ ಕೈಗೊಳ್ಳುವಂತೆ ರೈಲ್ವೇ ಮಂಡಳಿ ಪ್ರಸ್ತಾವನೆ ಸಲ್ಲಿಸಿದೆ.

   ಈಗ ಇವನ್ನು ಬಳಸುವಾಗ ಪಾವತಿಸಬೇಕಾದ ಶುಲ್ಕವನ್ನು ಟಾಯ್ಲೆಟ್‌ಗಳನ್ನು ನಿರ್ಮಿಸುವ ಗುತ್ತಿಗೆದಾರ ನಿರ್ಧರಿಸಲು ಅವಕಾಶವಿದೆ. ಹೊಸ ಯೋಜನೆಯ ಪ್ರಕಾರ, ಟಾಯ್ಲೆಟ್‌ಗಳಿಗೆ ಪಾವತಿಸಬೇಕಾದ ಶುಲ್ಕವನ್ನು, ಅಥವಾ ಉಚಿತವಾಗಿ ಬಳಸಲು ಅವಕಾಶ ನೀಡುವ ಕುರಿತು ರೈಲ್ವೇಯ ಡಿವಿಷನಲ್ ಮ್ಯಾನೇಜರ್ ತೀರ್ಮಾನಿಸುತ್ತಾರೆ ಎಂದು ಫೆ.7ರಂದು ರೈಲ್ವೇ ಮಂಡಳಿ ಎಲ್ಲಾ ವಲಯ ಕಚೇರಿಗಳಿಗೂ ಪತ್ರ ಬರೆದಿದೆ.

  ಸ್ವಚ್ಛ ಭಾರತ ಅಭಿಯಾನಕ್ಕೆ ಅಗತ್ಯವಿರುವಷ್ಟು ಟಾಯ್ಲೆಟ್‌ಗಳು ರಚನೆಯಾಗಿಲ್ಲ ಹಾಗೂ ಕೆಲವು ಸಣ್ಣ ರೈಲು ನಿಲ್ದಾಣಗಳಲ್ಲಿ ಜನರು ಪಾವತಿಸಿ ಬಳಸುವ ಟಾಯ್ಲೆಟ್‌ಗಳ ಸೇವೆ ಪಡೆಯಲು ಮುಂದಾಗದೆ ಬಯಲು ಶೌಚವನ್ನು ಅವಲಂಬಿಸಿದ್ದಾರೆ. ಆದ್ದರಿಂದ ಹೊಸ ಯೋಜನೆಯನ್ನು ಪ್ರಸ್ತಾವಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಪಾವತಿಸಿ ಬಳಸುವ ವ್ಯವಸ್ಥೆ ವಾಣಿಜ್ಯಿಕವಾಗಿ ಕಾರ್ಯಸಾಧ್ಯವೇ ಎಂಬುದನ್ನು ಡಿವಿಷನಲ್ ಮ್ಯಾನೇಜರ್ ತೀರ್ಮಾನಿಸುತ್ತಾರೆ. ಅಲ್ಲದೆ ಸ್ವಚ್ಛ ಭಾರತ ಅಭಿಯಾನದಡಿ ತಮ್ಮ ಪ್ರದೇಶದಲ್ಲಿ ನಿರ್ಮಿಸಬೇಕಿರುವ ಟಾಯ್ಲೆಟ್‌ಗಳೆಷ್ಟು ಎಂಬುದನ್ನೂ ಇವರು ನಿರ್ಧರಿಸಬೇಕು. ಇವನ್ನು ಕಡಿಮೆ ವೆಚ್ಚದಲ್ಲಿ ಅಥವಾ ಸಂಪೂರ್ಣ ಉಚಿತವಾಗಿ ಸರಕಾರೇತರ ಸಂಸ್ಥೆಗಳ ಅಥವಾ ಸ್ವಸಹಾಯ ಸಂಘಗಳ ಮೂಲಕ ನಿರ್ಮಿಸಬಹುದು. ಈ ನಿಟ್ಟಿನಲ್ಲಿ ಡಿವಿಷನಲ್ ಮ್ಯಾನೇಜರ್ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಾವತಿಸಿ ಬಳಸುವ ಶೌಚಾಲಯದ ದರಪಟ್ಟಿ ಆಯಾ ಪ್ರದೇಶವನ್ನು ಅವಲಂಬಿಸಿರುತ್ತದೆ. 2012ರ ಮಾರ್ಗದರ್ಶಿ ಸೂತ್ರದ ಪ್ರಕಾರ ಶೌಚಗೃಹ ಬಳಸಿದರೆ 2 ರೂ. ಶುಲ್ಕ, ಮೂತ್ರ ಮಾಡಿದರೆ ಶುಲ್ಕವಿಲ್ಲ, ಬಾತ್‌ರೂಂ ಉಪಯೋಗಿಸಿದರೆ 5 ರೂ. ಶುಲ್ಕ ವಿಧಿಸಲಾಗುತ್ತದೆ.

ಆದರೆ ಬಹುತೇಕ ರೈಲ್ವೇ ನಿಲ್ದಾಣಗಳ ಟಾಯ್ಲೆಟ್‌ಗಳಲ್ಲಿ ಮೂತ್ರ ಮಾಡಿದರೆ 2 ರೂ, ಸ್ನಾನಕ್ಕೆ 15ರೂ.ನಿಂದ 20 ರೂ. ಶುಲ್ಕ ವಿಧಿಸಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X