Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಳ್ಳು ಸುದ್ದಿ ಹರಡುವವರ ವಿರುದ್ಧ...

ಸುಳ್ಳು ಸುದ್ದಿ ಹರಡುವವರ ವಿರುದ್ಧ ಟ್ವೀಟ್ ಮಾಡಿದ್ದಕ್ಕೆ ಇಂಡಿಯಾ ಟುಡೇ ಸಮೂಹದ ಹಿರಿಯ ಸಂಪಾದಕಿ ಮನೆಗೆ

ಇಲ್ಲಿ ಸುಳ್ಳು ಸುದ್ದಿ ಹರಡುವ ನಿರೂಪಕರಿಗೆ ಬಹುಮಾನ !

ವಾರ್ತಾಭಾರತಿವಾರ್ತಾಭಾರತಿ13 Feb 2018 9:46 PM IST
share
ಸುಳ್ಳು ಸುದ್ದಿ ಹರಡುವವರ ವಿರುದ್ಧ ಟ್ವೀಟ್ ಮಾಡಿದ್ದಕ್ಕೆ ಇಂಡಿಯಾ ಟುಡೇ ಸಮೂಹದ ಹಿರಿಯ ಸಂಪಾದಕಿ ಮನೆಗೆ

ಹೊಸದಿಲ್ಲಿ, ಫೆ. 13 : ತನ್ನ ಟಿವಿ ನಿರೂಪಕರು ಹಸಿ ಸುಳ್ಳುಗಳನ್ನು ಹರಡುತ್ತಿರುವ ಆರೋಪ ಎದುರಿಸುತ್ತಿರುವ ಇಂಡಿಯಾ ಟುಡೇ ಗ್ರೂಪ್ ಇದೀಗ ತನ್ನ ಸಮೂಹದ ರಾಜಕೀಯ ಸಂಪಾದಕಿಯೊಬ್ಬರನ್ನು ಕೆಲಸದಿಂದ ತೆಗೆದು ಹಾಕಿದೆ. ಇದಕ್ಕೆ ಕಾರಣ ಆಕೆ ಸುಳ್ಳು ಸುದ್ದಿ ಹರಡಿದ್ದಾರೆ ಎಂದಲ್ಲ. ಬದಲಿಗೆ ಸುಳ್ಳು ಸುದ್ದಿ ಹಾಗು ದ್ವೇಷ ಹರಡುವವರನ್ನು ಹಾಗು ಅವರನ್ನು ಉದ್ಯೋಗಕ್ಕೆ ಇಟ್ಟವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಕ್ಕೆ !

ಇಂಡಿಯಾ ಟುಡೇ ಸಮೂಹದ ಲೇಖನ, ಅಭಿಪ್ರಾಯ, ಅಂಕಣಗಳ ವೆಬ್ ಸೈಟ್  ಡೈಲಿ ಓ (DailyO) ನ ರಾಜಕೀಯ ಸಂಪಾದಕಿ ಅಂಗಶುಕಂತಾ ಚಕ್ರವರ್ತಿ ಕೆಲಸ ಕಳಕೊಂಡವರು.

ಈಕೆ ಮಾಡಿದ ತಪ್ಪು - ಸುಳ್ಳು ಸುದ್ದಿ, ದ್ವೇಷ ಹರಡುವ ನಿರೂಪಕರು, ವರದಿಗಾರರು, ಸಂಪಾದಕರನ್ನು ಉದ್ಯೋಗಕ್ಕೆ ಇಟ್ಟುಕೊಂಡಿರುವವರ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕು ಹಾಗು ಅಂತಹ ಮಾಧ್ಯಮಗಳನ್ನು ಜಾತ್ಯತೀತ ಉದ್ಯಮ ಸಂಸ್ಥೆಗಳು ಹಾಗು ರಾಜಕಾರಣಿಗಳು ಬಹಿಷ್ಕರಿಸ ಬೇಕು ಎಂದು ತನ್ನ ವೈಯಕ್ತಿಕ ಟ್ವಿಟರ್ ಖಾತೆಯಲ್ಲಿ ಬರೆದಿದ್ದು.

ಫೆಬ್ರವರಿ 4 ರಂದು ಅಂಗಶುಕಂತಾ ಈ ಟ್ವೀಟ್ ಮಾಡಿದ್ದರು. ಯಾವುದೇ ಸಂಸ್ಥೆಯ ಹೆಸರಿಲ್ಲದ ಈ ಟ್ವೀಟ್ ಇಂಡಿಯಾ ಟುಡೇ ಆಡಳಿತ ಮಂಡಳಿಯ ಕಣ್ಣು ಕೆಂಪಾಗಿಸಿದೆ. ಹಾಗಾಗಿ ಈ ಟ್ವೀಟ್ ಡಿಲೀಟ್ ಮಾಡುವಂತೆ ಸಂಸ್ಥೆಯ ಹಿರಿಯ ಸಂಪಾದಕರಿಂದ ಅಂಗಶುಕಂತಾಗೆ ಸಂದೇಶ ಬಂದಿದೆ. ಅದನ್ನವರು ಒಪ್ಪಿಲ್ಲ. ಕೊನೆಗೆ ಒಂದೋ ಟ್ವೀಟ್ ಡಿಲೀಟ್ ಮಾಡಿ, ಇಲ್ಲವೇ ರಾಜೀನಾಮೆ ಕೊಡಿ ಅಥವಾ ನಿಮ್ಮ ಒಪ್ಪಂದವನ್ನು ನಾವು ಕೊನೆಗೊಳಿಸುತ್ತೇವೆ ಎಂಬ ಆಯ್ಕೆಯನ್ನು ಅವರ ಮುಂದೆ ಇಡಲಾಗಿದೆ. ಇದಕ್ಕೆ ಬಗ್ಗದ ಅಂಗಶುಕಂತಾ ಈಗ ಕೆಲಸ ಕಳೆದುಕೊಂಡಿದ್ದಾರೆ. 



ಅಂಗಶುಕಂತಾ ಅವರು ಸಂಪಾದಕೀಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದರಿಂದ ಅವರ ಒಪ್ಪಂದವನ್ನು ಕೊನೆಗೊಳಿಸಲಾಗಿದೆ ಎಂದು ಸಂಸ್ಥೆಯ ಹಿರಿಯಧಿಕಾರಿಗಳು thewire.in ಗೆ ತಿಳಿಸಿದ್ದಾರೆ. 

ಈ ಹಿಂದೆ ಇಂಡಿಯಾ ಟುಡೇಯ ಹಿಂದಿ ಚಾನಲ್ ಆಜ್ ತಕ್ ನ  ನಿರೂಪಕ ರೋಹಿತ್ ಸರ್ದಾನ ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಮುಸ್ಲಿಮರು ಹಿಂದೂ ಯುವಕರನ್ನು ತ್ರಿವರ್ಣ ಧ್ವಜ ಹಾರಿಸಲು ಬಿಡಲಿಲ್ಲ ಎಂದು ಸುಳ್ಳು ಟ್ವೀಟ್ ಮಾಡಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದರು. ಹಾಗೆಯೆ ಇದೇ ಸಮೂಹದ ಮೇಲ್ ಟುಡೇ ಸಂಪಾದಕ ಅಭಿಜಿತ್ ಮಜುಂದಾರ್ ಅವರು ಕಾಸ್ ಗಂಜ್ ನಲ್ಲಿ ಮೃತಪಟ್ಟಿದ್ದು ಒಬ್ಬ ಹಿಂದೂ ಅಲ್ಲ, ಇಬ್ಬರು ಎಂದು ಸುಳ್ಳು ಹರಡಿ ವ್ಯಾಪಕ ಟೀಕೆ ಎದುರಿಸಿದ್ದರು. ಅದಕ್ಕೂ ಮೊದಲು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಪರೇಶ್ ಮೇಸ್ತ ಎಂಬ ಯುವಕನ ಸಾವಿನ ಬಗ್ಗೆ ಇಂಡಿಯಾ ಟುಡೇ ಸಮೂಹದ ಶಿವ್ ಅರೂರ್ ಎಂಬ ನಿರೂಪಕ ಸುಳ್ಳು ಸುದ್ದಿ ಹರಡಿದ್ದರು. ಅದಕ್ಕೆ ತೀವ್ರ ವಿರೋಧ ವ್ಯಕ್ತವಾದಾಗ ಸೂಕ್ತ ಸ್ಪಷ್ಟೀಕರಣ ನೀಡದೆ  ಜಾರಿಕೊಂಡಿದ್ದರು. 

ಮೇ 2017 ರಲ್ಲಿ ಭಾರತದ ಸೇನೆ ಪಾಕಿಸ್ತಾನದ  ನೆಲೆಗಳ ಮೇಲೆ ದಾಳಿ ನಡೆಸಿ ಹಲವು ಪಾಕ್ ಸೈನಿಕರನ್ನು ಕೊಂದಿವೆ ಎಂದು ವರದಿ ಮಾಡಿದ್ದ ಆಜ್ ತಕ್ ಅದು ಸುಳ್ಳು ಎಂದು ಗೊತ್ತಾಗಿ ಮುಖಭಂಗ ಎದುರಿಸಿತ್ತು. ನೋಟು ರದ್ದತಿಯಾದಾಗ ಹೊಸ ನೋಟಿನಲ್ಲಿ ಜಿಪಿಎಸ್ ಚಿಪ್ಪಿದೆ ಎಂದು ಆಜ್ ತಕ್ ನಿರೂಪಕರು ವಿವರಿಸುವ ವಿಡಿಯೋ ಈಗಲೂ ಚಾಲ್ತಿಯಲ್ಲಿದೆ.

भारत में रह कर पाकिस्तान का झंडा फहराने वालों को बचाने अनेक ‘बुद्धिजीवी’ मैदान में कूद आते हैं. कासगंज में तिरंगा फहराने पे मार दिए गए आदमी के लिए कोई आवाज़ नहीं?#BharatKeDushman

— Rohit Sardana (@sardanarohit) January 27, 2018

Contrary to rumours spread on social media, Rahul Upadhyay is alive. We have arrested 4 people for spreading false rumours : Sanjeev Gupta, IG Aligarh Range #KasganjClashes pic.twitter.com/dP6rxkfzDt

— ANI UP (@ANINewsUP) January 29, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X