Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕೀಯವಾಗಿ ನಾನು ಪ್ರಭಾವಿಯಾಗಿರುವುದು...

ರಾಜಕೀಯವಾಗಿ ನಾನು ಪ್ರಭಾವಿಯಾಗಿರುವುದು ದಲಿತರಿಂದ: ವೈ.ಎನ್ ರುದ್ರೇಶ್ ಗೌಡ

ವಾರ್ತಾಭಾರತಿವಾರ್ತಾಭಾರತಿ13 Feb 2018 10:56 PM IST
share
ರಾಜಕೀಯವಾಗಿ ನಾನು ಪ್ರಭಾವಿಯಾಗಿರುವುದು ದಲಿತರಿಂದ: ವೈ.ಎನ್ ರುದ್ರೇಶ್ ಗೌಡ

ಬೇಲೂರು,ಫೆ.13: ರಾಜಕೀಯವಾಗಿ ನಾನು ಪ್ರಭಾವಿಯಾಗಲು ದಲಿತರು ಪ್ರಮುಖ ಕಾರಣವಾಗಿದ್ದು, ನಾನು ಸ್ಪರ್ಧೆ ಮಾಡಿದಂತಹ ಪ್ರತಿಯೊಂದು ಚುನಾವಣೆಯಲ್ಲೂ ನನ್ನನ್ನು ಆಶೀರ್ವದಿಸುವಲ್ಲಿ ದಲಿತರು ಪ್ರಮುಖ ಪಾತ್ರ ವಹಿಸಿದ್ದು, ಇವರು ನೀಡಿರುವ ಮತಗಳೇ ನನ್ನ ಗೆಲುವಿಗೆ ನಿರ್ಣಾಯಕವಾಗಿದ್ದವು ಎಂದು ಬೇಲೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೈ.ಎನ್. ರುದ್ರೇಶ್ ಗೌಡ ತಿಳಿಸಿದರು.

ಅವರು ಬೇಲೂರಿನ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಬೇಲೂರು ಮತ್ತು ಹಳೇಬೀಡು – ಜಾಗವಲ್ ವ್ಯಾಪ್ತಿಗೆ ಒಳಪಡುವ ಪದಾಧಿಕಾರಿಗಳಿಗೆ, ಹೋಬಳಿ ಅಧ್ಯಕ್ಷರುಗಳಿಗೆ ಕಾರ್ಯಕಾರಿನ ಸಮಿತಿ ಸದಸ್ಯರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು.  

ದಲಿತರ ಹಿತವನ್ನು ಕಾಪಾಡುವತ್ತ ಕಾಳಜಿ ಕಾಳಜಿ ವಹಿಸಿದ್ದು, ಅವರ ಏಳಿಗೆಗೆ ಸ್ಪಂದಿಸಲು ಸದಾ ಬದ್ದನಾಗಿದ್ದೇನೆ ಎಂದರು. ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ಕಳಕಳಿಯಿದ್ದು ಬಡವರ, ನೊಂದವರ,ಅಹಿಂದ ವರ್ಗದವರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವನಿಯಾಗಿ ನಿಂತಿದ್ದಾರೆ. ಅವರ ಉತ್ತಮ ಬದುಕಿಗೆ ವಿನೂತನ ಯೋಜನೆಗಳನ್ನು ಜಾರಿಗೆ ತಂದು ಕಾರ್ಯಗತಗೊಳಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದು, ಅವರ ನಾಯಕತ್ವವನ್ನು ಬೆಂಬಲಿಸುವತ್ತ ರಾಜ್ಯದ ಜನತೆ ಪಕ್ಷಾತೀತವಾಗಿ, ಜ್ಯಾತ್ಯಾತೀತವಾಗಿ ಮುಂದಾಗಬೇಕಿದೆ ಎಂದು ಶಾಸಕರು ನುಡಿದರು. 

ರೈತರು ದೇಶದಲ್ಲಿ ಶೇ.70 ರಷ್ಟಿದು ಬಡವರಲ್ಲಿ ಬಡವರಿದ್ದಾರೆ. ಅವರ ಕ್ಷೇಮವೂ ಮುಖ್ಯವಾಗಿದ್ದು, ಅವರ ಅಭಿವೃದ್ದಿಗೆ ಕೈ ಜೋಡಿಸಬೇಕಾದುದು ಪ್ರಸ್ತುತ ಅಗತ್ಯ ಎಂದರು. ನನ್ನ ಸಹೋದರ ವೈ.ಎನ್.ಕೃಷ್ಣೇಗೌಡ ಜನರ ಒಡನಾಡಿಯಾಗಿ ಸ್ಪಂದಿಸುತ್ತಿದ್ದು, ಅವರಿಗೆ ಮುಂದಿನ ದಿನಗಳಲ್ಲಿ ರಾಜಕೀಯವಾಗಿ  ಆಶೀರ್ವಾದ ಮಾಡಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಹಾಸನ ಜಿಲ್ಲಾ ಕಾಂಗ್ರೆಸ್  ಅಧ್ಯಕ್ಷ ಜಾವಗಲ್ ಮಂಜುನಾಥ್ ಮಾತನಾಡಿ, ದಲಿತರು ಆರ್ಥಿಕವಾಗಿ ಸಬಲರಾಗಬೇಕೆಂಬ ದೃಷ್ಠಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಗುತ್ತಿಗೆ ಕಾಮಗಾರಿಗಳಲ್ಲಿ 50 ಲಕ್ಷ ರೂ ಒಳಗಿನ ಕಾಮಗಾರಿಯನ್ನು ಮಾಡಲು ಮೀಸಲಿರಿಸುವಂತಹ ವ್ಯವಸ್ಥೆಯನ್ನು ಜಾರಿಗೆ ತಂದು ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಈ ನಿಲುವು ದೇಶದಲ್ಲೆ ಪ್ರಥಮ ಎಂದು ನುಡಿದರು. ನಮಗೆ ಜಾತಿ ಮುಖ್ಯವಲ್ಲ ಪ್ರೀತಿ ಮುಖ್ಯ. ಭವಿಷ್ಯದ ನಾಯಕ ರಾಹುಲ್ ಗಾಂಧಿ ಆಗಿದ್ದು, ಇವರು ಪ್ರಧಾನ ಮಂತ್ರಿ ಆಗಬೇಕೆಂಬ ಹಂಬಲ ನಮ್ಮೆಲ್ಲರದ್ದಾಗಿದೆ. ಜನಸೇವೆಯಿಂದ ಮಾತ್ರವೇ ದೇವರನ್ನು ಕಾಣಲು ಸಾಧ್ಯ ಎಂದರು.

ಹಾಸನ ಜಿಲ್ಲಾ ಕಾಂಗ್ರೆಸ್ ಪ.ಜಾತಿ ಘಟಕದ ಜಿಲ್ಲಾಧ್ಯಕ್ಷ ಡಾ.ಮುನಿಸ್ವಾಮಿ ಮಾತನಾಡಿ, ಧಮನಿತರು, ಬಹುಜನರು, ಸ್ವತಂತ್ರವಾಗಿ ಬದುಕಲು ಕಾಂಗ್ರೆಸ್ ಪಕ್ಷ ಪೂರಕವಾಗಿ ಸ್ಪಂದಿಸುತ್ತಿದ್ದು, ಈ ಅಂಶವನ್ನು ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕಿದೆ. ದಲಿತರ ಸರ್ವತೋಮುಖ ಬೆಳವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಯೊಂದು ಹಂತದಲ್ಲಿಯೂ ಸ್ಪಂದಿಸುತ್ತಾ ಕಾಳಜಿ ವಹಿಸಿದ್ದು, ದಲಿತರು ಕಾಂಗ್ರೆಸ್ ಪಕ್ಷಕ್ಕೆ ಸದಾ ಋಣಿಯಾಗಿರಬೇಕಿದೆ ಎಂದರು.

ವೇದಿಕೆಯಲ್ಲಿ ಕೆ.ಪಿ.ಸಿ.ಸಿ. ಸದಸ್ಯ ಖಡಾಖಡಿ ಪೀರ್ ಸಾಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ಪೂರ್ಣೇಶ್, ಹಾಸನ ಜಿಲ್ಲಾ ಕಾಂಗ್ರೆಸ್ ಪ.ಜಾತಿ ಘಟಕದ ಪ್ರಧಾನ ಕಾರ್ಯದರ್ಶಿ ಹೆಚ್.ಟಿ.ಲಕ್ಷ್ಮಣ, ಉಪಾಧ್ಯಕ್ಷ ಕುಮಾರಸ್ವಾಮಿ, ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಸುರೇಶ್, ಕಾಂಗ್ರೆಸ್ ಮುಖಂಡರಾದ ವೈ.ಎನ್.ಕೃಷ್ಣೇಗೌಡ, ಶಿವರುದ್ರಪ್ಪ, ಬೇಲೂರು ಮತ್ತು ಹಳೇಬೀಡು-ಜಾವಗಲ್ ಬ್ಲಾಕ್ ಕಾಂಗ್ರೆಸ್ ಪ.ಜಾತಿ ಘಟಕದ ಅಧ್ಯಕ್ಷರುಗಳಾದ ಡಿ.ವಿ.ಕುಮಾರಸ್ವಾಮಿ, ಹೆಚ್.ಎಸ್.ರುದ್ರೇಶ್,ತಾ.ಪಂ.ಸದಸ್ಯ ಮಂಜುನಾಥ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗಂಗಮ್ಮ ಇತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X