Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಾರ್ಲೆ-ಡೇವಿಡ್ಸನ್ ಬೈಕ್‌ಗೆ ಭಾರತದಲ್ಲಿ...

ಹಾರ್ಲೆ-ಡೇವಿಡ್ಸನ್ ಬೈಕ್‌ಗೆ ಭಾರತದಲ್ಲಿ 75 ಶೇ. ಆಮದು ಸುಂಕ: ಟ್ರಂಪ್ ಕಿಡಿ

ಸಮಾನ ಸುಂಕ ವ್ಯವಸ್ಥೆಗೆ ಪಟ್ಟು

ವಾರ್ತಾಭಾರತಿವಾರ್ತಾಭಾರತಿ14 Feb 2018 9:17 PM IST
share
ಹಾರ್ಲೆ-ಡೇವಿಡ್ಸನ್ ಬೈಕ್‌ಗೆ ಭಾರತದಲ್ಲಿ 75 ಶೇ. ಆಮದು ಸುಂಕ: ಟ್ರಂಪ್ ಕಿಡಿ

ವಾಶಿಂಗ್ಟನ್, ಫೆ. 14: ಹಾರ್ಲೆ-ಡೇವಿಡ್ಸನ್ ಮೋಟರ್‌ಸೈಕಲ್‌ಗಳ ಮೇಲೆ ಅಧಿಕ ಆಮದು ಸುಂಕವನ್ನು ವಿಧಿಸಿರುವುದಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಭಾರತವನ್ನು ಟೀಕಿಸಿದ್ದಾರೆ ಹಾಗೂ ಭಾರತದಿಂದ ಅಮೆರಿಕಕ್ಕೆ ಬರುವ ‘ಸಾವಿರ ಸಾವಿರ’ ಮೋಟರ್‌ಸೈಕಲ್‌ಗಳ ಮೇಲಿನ ಆಮದು ಸುಂಕವನ್ನು ಏರಿಸುವುದಾಗಿ ಬೆದರಿಸಿದ್ದಾರೆ.

ಉಕ್ಕು ಉದ್ಯಮದ ಬಗ್ಗೆ ಕಾಂಗ್ರೆಸ್ ಸದಸ್ಯರೊಂದಿಗೆ ನಡೆದ ಚರ್ಚೆಯ ವೇಳೆ ಮಾತನಾಡಿದ ಅವರು, ಆಮದು ಸುಂಕವನ್ನು 75 ಶೇಕಡದಿಂದ 50 ಶೇಕಡಕ್ಕೆ ಇಳಿಸಲು ಭಾರತ ಸರಕಾರ ಇತ್ತೀಚೆಗೆ ತೆಗೆದುಕೊಂಡ ನಿರ್ಧಾರ ಸಾಕಾಗುವುದಿಲ್ಲ ಎಂದರು. ಮೋಟರ್‌ಸೈಕಲ್‌ಗಳ ಆಮದಿನ ಮೇಲೆ ಅಮೆರಿಕ ‘ಶೂನ್ಯ ತೆರಿಗೆ’ ವಿಧಿಸುತ್ತಿದ್ದು, ಭಾರತದ ತೆರಿಗೆ ಮಟ್ಟವೂ ಇದಕ್ಕೆ ಸರಿಸಮಾನವಾಗಬೇಕು ಎಂದು ಟ್ರಂಪ್ ಅಭಿಪ್ರಾಯಪಟ್ಟರು.

‘‘ಹಾರ್ಲೆ-ಡೇವಿಡ್ಸನ್ ಮೋಟರ್‌ಸೈಕಲ್‌ಗಳನ್ನು ನೀವು ಭಾರತದಲ್ಲಿ ಮಾರಾಟ ಮಾಡಬೇಕಾದರೆ 50ರಿಂದ 75 ಶೇಕಡ ತೆರಿಗೆ ನೀಡಬೇಕು. ಆದರೆ, ಅವರು ಭಾರತದಿಂದ ಸಾವಿರಾರು ಮೋಟರ್‌ಸೈಕಲ್‌ಗಳನ್ನು ಅಮೆರಿಕಕ್ಕೆ ಮಾರಾಟ ಮಾಡುತ್ತಾರೆ. ಇದು ಹೆಚ್ಚಿನವರಿಗೆ ಗೊತ್ತಿಲ್ಲ. ಅದಕ್ಕೆ ತೆರಿಗೆ ಎಷ್ಟು ಗೊತ್ತೇ? ತೆರಿಗೆಯೇ ಇಲ್ಲ’’ ಎಂದು ಸಂಸದರು ಮತ್ತು ತನ್ನ ಸಂಪುಟ ಸಹೋದ್ಯೋಗಿಗಳನ್ನು ಉದ್ದೇಶಿಸಿ ಮಾನಾಡುತ್ತಾ ಟ್ರಂಪ್ ಹೇಳಿದರು.

‘ಅಮೆರಿಕದೊಂದಿಗಿನ ವ್ಯಾಪಾರ ಬಾಂಧವ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ’ ದೆಶಗಳ ಮೇಲೆ ‘ಸಮಾನ ತೆರಿಗೆ’ ವಿಧಿಸುವುದಾಗಿ ಟ್ರಂಪ್ ಮತ್ತೊಮ್ಮೆ ಘೋಷಿಸಿದ್ದಾರೆ.

ಭಾರತದ ‘ಗ್ರೇಟ್ ಜಂಟಲ್‌ಮನ್’ ಫೋನ್ ಮಾಡಿದ್ರು...!

ಈ ಸಂಬಂಧ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ತಾನು ನಡೆಸಿದ ಮಾತುಕತೆಯನ್ನೂ ಟ್ರಂಪ್ ಪರೋಕ್ಷವಾಗಿ ಪ್ರಸ್ತಾಪಿಸಿದರು.

‘‘ಭಾರತದಿಂದ ‘ಗ್ರೇಟ್ ಜಂಟಲ್‌ಮನ್’ ಒಬ್ಬರು ನನಗೆ ಕರೆ ಮಾಡಿ ಹೇಳಿದರು: ಮೋಟರ್‌ಸೈಕಲ್‌ಗಳ ಮೇಲಿನ ಸುಂಕವನ್ನು ನಾವು ಈಗಷ್ಟೇ ಕಡಿತಗೊಳಿಸಿದ್ದೇವೆ. 75 ಶೇಕಡ ಹಾಗೂ 100 ಶೇಕಡದಷ್ಟಿದ್ದ ಸುಂಕವನ್ನು ನಾವು 50 ಶೇಕಡಕ್ಕೆ ಇಳಿಸಿದ್ದೇವೆ’’ ಎಂದು ಟ್ರಂಪ್ ಹೇಳಿದರು.

 ಪ್ರಧಾನಿ ಮೋದಿಯೊಂದಿಗೆ ಕಳೆದ ವಾರ ನಡೆದ ಫೋನ್ ಸಂಭಾಷಣೆಯನ್ನು ಅವರು ಇಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ಅವರು ಹೇಗೆ ಪಾರಾದರು?

  ‘‘ಇಂಥ ಪ್ರಕರಣಗಳಲ್ಲಿ ಸಮಾನ ತೆರಿಗೆಗಳು ಬೇಕು ಎಂದು ನಾನು ಹೇಳುತ್ತೇನೆ. ನಾನು ಭಾರತವನ್ನು ದೂರುತ್ತಿಲ್ಲ. ಇದರಿಂದ ಪಾರಾಗಲು ಅವರಿಗೆ ಸಾಧ್ಯವಾಗಿರುವುದು ದೊಡ್ಡ ಸಂಗತಿಯೇ ಹೌದು. ಪಾರಾಗಲು ಅವರಿಗೆ ಜನರು ಯಾಕೆ ಅವಕಾಶ ಮಾಡಿಕೊಟ್ಟರು ಎಂದು ನನಗೆ ಗೊತ್ತಿಲ್ಲ. ಆದರೆ ಇಂಥ ಒಂದು ಪ್ರಕರಣ ನಡೆದಿರುವುದು ದುರದೃಷ್ಟಕರ. ಈಗ ನನಗನಿಸುತ್ತದೆ ಸಮಾನ ತೆರಿಗೆಯನ್ನು ನಾವು ಹೊಂದಬೇಕು ಎಂದು’’ ಎಂದು ಟ್ರಂಪ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X