Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಗರ್‌ಹುಕುಂ: ಶೀಘ್ರದಲ್ಲೇ ಹಕ್ಕು ಪತ್ರ-...

ಬಗರ್‌ಹುಕುಂ: ಶೀಘ್ರದಲ್ಲೇ ಹಕ್ಕು ಪತ್ರ- ಸಚಿವ ಕಾಗೋಡು

ಸುರತ್ಕಲ್ ನಲ್ಲಿ ಹಕ್ಕುಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ14 Feb 2018 9:36 PM IST
share
ಬಗರ್‌ಹುಕುಂ: ಶೀಘ್ರದಲ್ಲೇ ಹಕ್ಕು ಪತ್ರ- ಸಚಿವ ಕಾಗೋಡು

ಮಂಗಳೂರು, ಫೆ. 14: ಬಗರ್‌ಹುಕುಂ ಜಮೀನಿನಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ನೀಡಲು ಕಾನೂನು ತೊಡಕನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದ್ದಾರೆ.

ಸುರತ್ಕಲ್ ಜಂಕ್ಷನ್‌ನಲ್ಲಿ ಬುಧವಾರ ಸರಕಾರಿ ಜಮೀನಿನಲ್ಲಿ ವಾಸವಾಗಿರುವವರಿಗೆ 94ಸಿಸಿ ಅಡಿಯಲ್ಲಿ ಜಾಗದ ಹಕ್ಕುಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.

ಬಗರ್‌ಹುಕುಂ ಜಮೀನಿನಲ್ಲಿ ವಾಸವಾಗಿರುವ ಕುಟುಂಬಗಳಿಗೆ ಜಾಗ ಸಕ್ರಮಗೊಳಿಸಲು ತೊಡಕಿದೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸಮಸ್ಯೆ ಯನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ. ಈ ವಿಷಯದಲ್ಲಿ ಯಾರಿಗೂ ಅಂಜಿಕೆ ಬೇಡ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಉತ್ತಮ, ಪಾರದರ್ಶಕ ಆಡಳಿತ ನೀಡಬೇಕು ಎನ್ನುವುದು ಮುಖ್ಯಮಂತ್ರಿಯ ಆದೇಶವಾಗಿದೆ. ಅದನ್ನು ಅಧಿಕಾರಿಗಳು ಪಾಲನೆ ಮಾಡಬೇಕು. ಸಾರ್ವಜನಿಕರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕು ಎಂದರು.

ಹಣ ಕೇಳಿದರೆ ದೂರು ನೀಡಿ

ಗದ ಹಕ್ಕುಪತ್ರ ನೀಡಲು ಅಥವಾ ಇನ್ನಿತರ ಸರಕಾರಿ ಕೆಲಸಗಳಿಗೆ ಅಧಿಕಾರಿಗಳು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಡಬಾರದು. ಒಂದು ವೇಳೆ ಅಧಿಕಾರಿಗಳು ಹಣ ಪಡೆಯುವುದು ಗೊತ್ತಾದರೆ ಅಂಥವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳುವುದಾಗಿ ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರಲ್ಲದೆ, ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟರೆ ಸಾರ್ವಜನಿಕರು ಕೂಡಲೇ ಜಿಲ್ಲಾಧಿಕಾರಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಬೇಕೆಂದರು.

ರಾಜ್ಯದಲ್ಲಿ ಆಡಳಿತ ನಡೆಸಿದ್ದ ಬಿಜೆಪಿ ಸರಕಾರ ಖಜಾನೆಯನ್ನು ಲೂಟಿ ಹೊಡೆದಿದ್ದು ಮಾತ್ರವಲ್ಲ. ಸರ್ಕಾರಿ ಜಮೀನಿನಲ್ಲಿ ವಾಸವಾಗಿರುವವರಿಗೆ 1.3 ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮ ತಂದಿದ್ದರು. ಇದರಿಂದ ಜನರನ್ನು ರಕ್ಷಿಸಲು ಇಡೀ ರಾಜ್ಯ ಪ್ರವಾಸ ಮಾಡಿದ್ದೇನೆ. ಏಕರೂಪದ ಕಾನೂನು ತಂದು ಎಲ್ಲರಿಗೂ ಅನುಕೂಲ ಮಾಡಿದ್ದೇವೆ. ಅದರ ಫಲವಾಗಿ ಇಂದು ಸರಕಾರಿ ಜಮೀನಿನಲ್ಲಿ ವಾಸ ಮಾಡಿರುವವರು ಹಕ್ಕುಪತ್ರ ಪಡೆಯುತ್ತಿದ್ದಾರೆ. ಶಾಸಕ ಮೊಯ್ದಿನ್ ಬಾವರ ಸಹಿತ ಎಲ್ಲ ಶಾಸಕರೂ ಪ್ರಾಮಾಣಿಕತೆಯಿಂದ ಜನರಿಗೆ ಈ ಸೌಲಭ್ಯ ಒದಗಿಸುತ್ತಿದ್ದಾರೆ ಎಂದು ಕಾಗೋಡು ತಿಮ್ಮಪ್ಪ ಹೇಳಿದರು.

ವಾರದೊಳಗೆ ಎಲ್ಲರಿಗೆ ಹಕ್ಕುಪತ್ರ: ಶಾಸಕ ಬಾವ

ಶಾಸಕ ಮೊಯ್ದಿನ್ ಬಾವ ಮಾತನಾಡಿ, ಒಂದು ವಾರದೊಳಗೆ ಕ್ಷೇತ್ರದ ಎಲ್ಲರಿಗೂ ಸರಕಾರಿ ಜಮೀನಿನಲ್ಲಿ ವಾಸವಾಗಿರುವವರಿಗೆ ಹಕ್ಕು ಪತ್ರವನ್ನು ವಿತರಿಸುವುದಾಗಿ ಹೇಳಿದರು.

ಸುರತ್ಕಲ್ ಮತ್ತು ಗುರುಪುರ ಹೋಬಳಿಯ ಎಲ್ಲ 8,900 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು. ಇನ್ನೊಂದು ವಾರದೊಳಗೆ ಆಯಾ ಪ್ರದೇಶಗಳಿಗೆ ತೆರಳಿ ಹಕ್ಕು ಪತ್ರ ವಿತರಿಸುವುದಾಗಿ ಅವರು ಹೇಳಿದರು.

ಬಗರ್‌ಹುಕುಂ, ಅರಣ್ಯ ಪ್ರದೇಶ, ಸಿಆರ್‌ಝಡ್ ವ್ಯಾಪ್ತಿಯೊಳಗೆ ಮನೆ ಕಟ್ಟಿ ವಾಸಿಸುತ್ತಿರುವ ಇನ್ನೂ ಸಾವಿರಾರು ಕುಟುಂಬಗಳಿದ್ದು, ಅವರಿಗೂ ಜಾಗದ ಹಕ್ಕುಪತ್ರ ನೀಡುವಂತಾಗಬೇಕು ಎಂದು ಶಾಸಕರು ಇದೇ ಸಂದರ್ಭದಲ್ಲಿ ಸಚಿವರಲ್ಲಿ ಮನವಿ ಮಾಡಿದರು.

ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಕಾರ್ಪೊರೇಟರ್‌ಗಳಾದ ಪ್ರತಿಭಾ ಕುಳಾಯಿ, ಬಶೀರ್ ಅಹ್ಮದ್, ಮೂಡ ಸದಸ್ಯ ಕೇಶವ ಸನಿಲ್, ತಾ.ಪಂ. ಸದಸ್ಯೆ ವಜ್ರಾಕ್ಷಿ ಶೆಟ್ಟಿ, ತಹಶೀಲ್ದಾರ್, ಕುಮಾರ್ ಮೆಂಡನ್, ಕಂದಾಯ ನಿರೀಕ್ಷಕ ನವೀನ್, ಅಬ್ದುಲ್ ಜಲೀಲ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X