Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಹಾಕಿಗೆ ಒಡಿಶಾ ಸರಕಾರ...

ಭಾರತದ ಹಾಕಿಗೆ ಒಡಿಶಾ ಸರಕಾರ ಪ್ರಾಯೋಜಕತ್ವ

ವಾರ್ತಾಭಾರತಿವಾರ್ತಾಭಾರತಿ15 Feb 2018 11:57 PM IST
share
ಭಾರತದ ಹಾಕಿಗೆ ಒಡಿಶಾ ಸರಕಾರ ಪ್ರಾಯೋಜಕತ್ವ

ಹೊಸದಿಲ್ಲಿ, ಫೆ.15: ಭಾರತೀಯ ಹಾಕಿ ತಂಡ ಇದೇ ಮೊದಲ ಬಾರಿ ಒಡಿಶಾ ರಾಜ್ಯ ಸರಕಾರವನ್ನು ತನ್ನ ನೂತನ ಪ್ರಾಯೋಜಕರನ್ನಾಗಿ ಪಡೆದುಕೊಂಡಿದೆ. ಮುಂದಿನ ಐದು ವರ್ಷಗಳ ಕಾಲ ಹಾಕಿಗೆ ಪ್ರಾಯೋಜಕತ್ವ ನೀಡಲು ನಿರ್ಧರಿಸಿರುವ ಒಡಿಶಾ ಸರಕಾರ ಈ ಮೂಲಕ ಹಾಕಿಗೆ ಬೆಂಬಲ ನೀಡಲಿದೆ.

 ಇಲ್ಲಿ ಗುರುವಾರ ನಡೆದ ಭವ್ಯ ಕಾರ್ಯಕ್ರಮವೊಂದರಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಈ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಭಾರತದ ಪುರುಷರ ಹಾಗೂ ಮಹಿಳಾ ತಂಡದ ಆಟಗಾರರು, ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್(ಎಫ್‌ಐಎಚ್) ಹಾಗೂ ಐಒಎ ಅಧ್ಯಕ್ಷ ನರೇಂದ್ರ ಬಾತ್ರಾ, ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಸಹಿತ ಹಲವು ಗಣ್ಯರು ಭಾಗವಹಿಸಿದ್ದರು.

ಪುರುಷ, ಮಹಿಳಾ ಹಾಕಿ ಆಟಗಾರರು ಧರಿಸಲಿರುವ ಹೊಸ ಜರ್ಸಿಗಳಲ್ಲಿ ಪ್ರದರ್ಶಿಸಲ್ಪಡಲಿರುವ ಒಡಿಶಾ ಸರಕಾರದ ಲಾಂಛನವನ್ನು ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಯಿತು.

 ರಾಜ್ಯ ಸರಕಾರ ಹಾಕಿಗೆ ಎಷ್ಟು ಹಣ ನೀಡಲಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ‘‘ಒಡಿಶಾದಲ್ಲಿ ಹಾಕಿ ಎನ್ನುವುದು ಕ್ರೀಡೆಗಿಂತ ಮಿಗಿಲಾಗಿದ್ದು, ಅದೊಂದು ಜೀವನದ ಹಾದಿಯಾಗಿದೆ. ಅತ್ಯಂತ ಮುಖ್ಯವಾಗಿ ನಮ್ಮ ಬುಡಕಟ್ಟು ವಲಯಗಳಲ್ಲಿ ಮಕ್ಕಳು ಹಾಕಿ ಸ್ಟಿಕ್ಸ್ ಗಳೊಂದಿಗೆ ನಡೆಯಲು ಕಲಿಯುತ್ತಾರೆ. ಭಾರತದ ಶ್ರೇಷ್ಠ ಹಾಕಿ ಪ್ರತಿಭೆಗಳನ್ನು ಒಡಿಶಾ ನೀಡುತ್ತಿದೆ ಎನ್ನುವುದರಲ್ಲಿ ಯಾವುದೇ ಅಚ್ಚರಿಯಿಲ್ಲ. ಇದೇ ಮೊದಲ ಬಾರಿ ರಾಜ್ಯ ಸರಕಾರ ಇತಿಮಿತಿಯೊಳಗೆ ಕ್ರೀಡೆಯನ್ನು ಉತ್ತೇಜಿಸದೇ ಭಾರತೀಯ ಹಾಕಿಯ ಬೆಳವಣಿಗೆಯಲ್ಲಿ ಕಾಣಿಕೆ ನೀಡಲು ಬಯಸಿದೆ. ಇದು ದೇಶಕ್ಕೆ ಒಡಿಶಾದ ಉಡುಗೊರೆಯಾಗಿದೆ’’ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ. ಒಡಿಶಾ ಹಾಕಿಯ ತೊಟ್ಟಿಲೆಂದು ಪ್ರಸಿದ್ದಿ ಪಡೆದಿದ್ದು, ಈ ರಾಜ್ಯವು ದಿಲಿಪ್ ಟಿರ್ಕಿ, ಇಗ್ನೇಸ್ ಟಿರ್ಕಿ ಹಾಗೂ ಲಝರಸ್ ಬಾರ್ಲಾರಂತಹ ಆಟಗಾರರನ್ನು ದೇಶಕ್ಕೆ ನೀಡಿದೆ.

ಭಾರತದ ಈಗಿನ ಹಾಕಿ ತಂಡದಲ್ಲಿ ಒಡಿಶಾದ ಬೀರೇಂದ್ರ ಲಾಕ್ರಾ, ಅಮಿತ್ ರೋಹಿದಾಸ್, ದೀಪ್ಸನ್ ಟಿರ್ಕಿ ಹಾಗೂ ನಮಿತಾ ಟೊಪ್ಪೊ ಅವರಿದ್ದಾರೆ. ಹಲವು ಉಪಕ್ರಮದ ಮೂಲಕ ಹಾಕಿಗೆ ಉತ್ತೇಜನ ನೀಡುತ್ತಿರುವ ಒಡಿಶಾ ಹಾಕಿ ಇಂಡಿಯಾ ಲೀಗ್‌ನಲ್ಲಿ ಕಳಿಂಗ ಲ್ಯಾನ್ಸರ್ಸ್‌ ತಂಡವನ್ನು ಕಣಕ್ಕಿಳಿಸಿದೆ.

ಒಡಿಶಾ ರಾಜಧಾನಿ ಭುವನೇಶ್ವರ 2014ರ ಚಾಂಪಿಯನ್ಸ್ ಟ್ರೋಫಿ ಹಾಗೂ ಕಳೆದ ವರ್ಷ ಹಾಕಿ ವಿಶ್ವ ಲೀಗ್ ಫೈನಲ್‌ನ ಆತಿಥ್ಯವನ್ನು ವಹಿಸಿಕೊಂಡಿತ್ತು. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್‌ನ ಆತಿಥ್ಯವನ್ನು ವಹಿಸಿಕೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X