Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರವ್ ಮೋದಿ, ಕುಟುಂಬ ಸದಸ್ಯರ ವಿರುದ್ಧ...

ನೀರವ್ ಮೋದಿ, ಕುಟುಂಬ ಸದಸ್ಯರ ವಿರುದ್ಧ ಇಂಟರ್ ಪೋಲ್ ನೋಟಿಸ್ ಜಾರಿ

ವಾರ್ತಾಭಾರತಿವಾರ್ತಾಭಾರತಿ16 Feb 2018 2:06 PM IST
share
ನೀರವ್ ಮೋದಿ, ಕುಟುಂಬ ಸದಸ್ಯರ ವಿರುದ್ಧ ಇಂಟರ್ ಪೋಲ್ ನೋಟಿಸ್ ಜಾರಿ

ಮುಂಬೈ, ಫೆ. 16: ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ನಡೆದ ರೂ 11,300 ಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನ ದಲ್ಲಿರುವ ವಜ್ರೋದ್ಯಮಿ ನೀರವ್ ಮೋದಿ, ಆತನ ಪತ್ನಿ ಅಮಿ ಮೋದಿ, ಸಹೋದರ ನಿಶಾಲ್ ಮೋದಿ ಹಾಗೂ ಉದ್ಯಮ ಪಾಲುದಾರ ಮತ್ತು ಮಾವ ಮೆಹುಲ್ ಚೊಕ್ಸಿ ವಿರುದ್ಧ ಇಂಟರ್ ಪೋಲ್ ನೋಟಿಸ್ ಜಾರಿಗೊಳಿಸಿದೆ.

ಮುಂಬೈಯ ಕಾಲಾ ಘೋಡ ಪ್ರದೇಶದಲ್ಲಿ ನೀರವ್ ಮೋದಿ ಒಡೆತನದ ಬುಟೀಖ್ ಒಂದರ ಮೇಲೆ ದಾಳಿ ಶುಕ್ರವಾರವೂ ಮುಂದುವರಿದಿದೆ. ಸಿಬಿಐ ಈಗಾಗಲೇ ನೀರವ್ ಮೋದಿ ಹಾಗೂ ಆತನ ಪಾಲುದಾರ ಮೆಹುಲ್ ಚೊಕ್ಸಿಯ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಕೋರಿದೆ. ಈತನ್ಮಧ್ಯೆ ಈ ಭಾರೀ ಅವ್ಯವಹಾರದ ಹಿನ್ನೆಲೆಯಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶುಕ್ರವಾರ 8 ಮಂದಿ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಇಲ್ಲಿಯ ತನಕ ಈ ಅವ್ಯವಹಾರ ಸಂಬಂಧ ವಜಾಗೊಂಡಿರುವ ಉದ್ಯೋಗಿಗಳ ಸಂಖ್ಯೆ 18ಕೇರಿದೆ. ಬ್ಯಾಂಕಿನ ಜನರಲ್ ಮ್ಯಾನೇಜರ್ ಹಂತದ ಅಧಿಕಾರಿಗಳೂ ವಜಾಗೊಂಡವರಲ್ಲಿ ಸೇರಿದ್ದಾರೆ.

ಭಾರತೀಯ ಪಾಸ್ ಪೋರ್ಟ್ ಹೊಂದಿದ ನೀರವ್ ಮೋದಿ ಜನವರಿ 1ರಂದು ಭಾರತ ಬಿಟ್ಟು ತೆರಳಿದ್ದರೆ ಆತನ ಸೋದರ, ಬೆಲ್ಜಿಯಂ ಪೌರತ್ವ ಹೊಂದಿರುವ ನಿಶಾಲ್ ಕೂಡ ಅದೇ ದಿನ ದೇಶ ಬಿಟ್ಟು ತೆರಳಿದ್ದಾರೆ. ಅವರಿಬ್ಬರೂ ಒಟ್ಟಿಗೆ ತೆರಳಿದ್ದರೆಯೇ ಎಂಬುದು ತಿಳಿದು ಬಂದಿಲ್ಲ. ನೀರವ್ ಮೋದಿಯ ಪತ್ನಿ ಅಮಿ ಅಮೆರಿಕನ್ ಪೌರತ್ವ ಹೊಂದಿದ್ದು, ಜನವರಿ 6ರಂದು ತೆರಳಿದ್ದರೆ ಮೆಹುಲ್ ಜನವರಿ 4ರಂದು ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಈ ಅವ್ಯವಹಾರದ ಸಂಬಂಧ ಪಂಜಾಬ್ ನ್ಯಾಷನಲ್ ಬ್ಯಾಂಕ್ ದೂರು ದಾಖಲಿಸಲು ವಿಳಂಬಿಸಿರುವುದರಿಂದ ಆರೋಪಿಗಳು ದೇಶ ಬಿಟ್ಟು ತೆರಳು ವಂತಾಗಿದೆ ಎಂದು ಹೇಳಲಾಗುತ್ತಿದೆ.

ಆದರೆ ಆರೋಪಿಗಳ ಕಂಪೆನಿಗಳಾದ ಡೈಮಂಡ್ ಆರ್ ಯುಎಸ್, ಸೋಲಾರ್ ಎಕ್ಸ್ ಪೋರ್ಟ್ಸ್ ಹಾಗೂ ಸ್ಟೆಲ್ಲಾರ್ ಡೈಮಂಡ್ಸ್ ಇವುಗಳು ಬ್ಯಾಂಕ್ ಅನ್ನು ಸಂಪರ್ಕಿಸಿ ಆಮದು ದಾಖಲೆಗಳನ್ನು ಪ್ರಸ್ತುತ ಪಡಿಸಿ ಲೆಟರ್ಸ್‌ ಆಫ್ ಅಂಡರ್ ಟೇಕಿಂಗ್ ನೀಡಲು ಕೋರಿದಾಗ ತನಗೆ ಸಂಶಯ ಉಂಟಾಗಿತ್ತು ಎಂದು ಬ್ಯಾಂಕ್ ಹೇಳಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X