Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಹುಟ್ಟುವ ಪ್ರತಿ ಮಗುವೂ...

ಭಾರತದಲ್ಲಿ ಹುಟ್ಟುವ ಪ್ರತಿ ಮಗುವೂ ರಾಜಕಾರಣಿ : ‘ಪರೀಕ್ಷಾ ಪೆ ಚರ್ಚಾ’ದಲ್ಲಿ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ16 Feb 2018 3:57 PM IST
share
ಭಾರತದಲ್ಲಿ ಹುಟ್ಟುವ ಪ್ರತಿ ಮಗುವೂ ರಾಜಕಾರಣಿ : ‘ಪರೀಕ್ಷಾ ಪೆ ಚರ್ಚಾ’ದಲ್ಲಿ ಪ್ರಧಾನಿ ಮೋದಿ

ಹೊಸದಿಲ್ಲಿ,ಫೆ.16 : ಕಳೆದ ಲೋಕಸಭಾ ಚುನಾವಣೆಯ ಮೊದಲು ತಮ್ಮ ಚಾಯ್ ಪೆ ಚರ್ಚಾ ಕಾರ್ಯಕ್ರಮದ ಮೂಲಕ ಮತದಾರರನ್ನು ಪ್ರಧಾನಿ ನರೇಂದ್ರ ಮೋದಿ ಸೆಳೆದಿದ್ದರು, ಈ ಬಾರಿ ಪ್ರಧಾನಿ ತಮ್ಮ ಗಮನವನ್ನು  ಸದ್ಯದಲ್ಲಿಯೇ ತಮ್ಮ ವಾರ್ಷಿಕ ಪರೀಕ್ಷೆ ಎದುರಿಸಲಿರುವ  ವಿದ್ಯಾರ್ಥಿಗಳತ್ತ ಹರಿಸಿ ಅವರೊಂದಿಗೆ  ಪರೀಕ್ಷಾ ಪರ್ ಚರ್ಚಾ ಕಾರ್ಯಕ್ರಮವನ್ನು ಇಂದು ನಡೆಸಿದ್ದಾರೆ.

ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದ ಪ್ರಧಾನಿ ಪರೀಕ್ಷೆಯ ವಿಚಾರದಲ್ಲಿ ಅವರಿಗಿರುವ ಆತಂಕವನ್ನು ದೂರ ಮಾಡುವ ಪ್ರಯತ್ನ  ನಡೆಸಿದ್ದಾರೆ.  ರಾಜಧಾನಿಯ ತಾಲ್‍ಕಟೋರಾ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮವನ್ನು ದೇಶಾದ್ಯಂತ ವಿದ್ಯಾರ್ಥಿಗಳು ವೀಕ್ಷಿಸಿದ್ದಾರೆ.

ವಿದ್ಯಾರ್ಥಿಗಳಿಂದ ಪ್ರಶ್ನೆಗಳನ್ನು ಎದುರಿಸುವ ಮೊದಲು ಮಾತನಾಡಿದ ಪ್ರಧಾನಿ ಇಂದು ತಮಗೆ ಪರೀಕ್ಷೆ ಎಂದರಲ್ಲದೆ ತಮ್ಮ ಶಿಕ್ಷಕರಿಗೆ ಧನ್ಯವಾದ ಹೇಳುತ್ತಾ ಅವರ ಪಾಲಿಗೆ ತಾನೀಗಲೂ ವಿದ್ಯಾರ್ಥಿ ಎಂದರು.

ಆತ್ಮವಿಶ್ವಾಸವನ್ನು ಹೇಗೆ ಕಾಯ್ದುಕೊಳ್ಳುವುದು ಎಂಬ ಪ್ರಶ್ನೆಗೆ “ಅದೇನೂ ಒಂದು ಗುಳಿಗೆ ಅಥವಾ ಔಷಧೀಯ ಸಸ್ಯವಲ್ಲ. ತಕ್ಷಣದ ಆತ್ಮವಿಶ್ವಾಸಕ್ಕೆ ಯಾವುದೇ ಗುಳಿಗೆಯಿಲ್ಲ. ಅದನ್ನು ಪ್ರತಿ ದಿನ ಬೆಳಸಬೇಕು,'' ಎಂದು ಪ್ರಧಾನಿ ಹೇಳಿದರು.

ಇತರರ ಜತೆ ಸ್ಪರ್ಧೆಗಿಳಿಯದಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಪ್ರಧಾನಿ ತಮ್ಮ ಮಕ್ಕಳನ್ನು ಇತರರಿಗೆ ಹೋಲಿಸಿ ಅವರ ಮೇಲೆ ಇತ್ತಡ ಹೇರದಂತೆ ಹೆತ್ತವರಿಗೂ ಕಿವಿ ಮಾತು ಹೇಳಿದರು. “ನಿಮ್ಮ ಕನಸುಗಳನ್ನು ನಿಮ್ಮ ಮಕ್ಕಳ ಮೇಲೆ ಹೇರಬೇಡಿ, ನಿಮ್ಮ ಮಕ್ಕಳಿಗೆ ಸ್ನೇಹಿತರಾಗಿರಿ,” ಎಂದು ಪ್ರಧಾನಿ ಸಲಹೆ ನೀಡಿದರು.

ಮಕ್ಕಳು ಹುಟ್ಟು ರಾಜಕಾರಣಿಗಳು ಎಂದು ಹೇಳಿದ ಪ್ರಧಾನಿ ಅವರಿಗೆ ತಮ್ಮ ಕೆಲಸ ಹೇಗೆ ಮಾಡಬೇಕೆಂದು ತಿಳಿದಿದೆ ಎಂದರು. ಐಕ್ಯು ಹಾಗೂ ಇಕ್ಯು ನಡುವೆ ಸಮತೋಲನ ಸಾಧಿಸಬೇಕು ಎಂದು ಅವರು ಹೇಳಿದರು.

ಪ್ರಧಾನಿ ತಮ್ಮ ಕೃತಿ ಎಕ್ಸಾಮ್ ವಾರಿಯರ್ಸ್  ಬಿಡುಗಡೆಗೊಳಿಸಿದ ಕೆಲವೇ ದಿನಗಳಲ್ಲಿ `ಎಕ್ಸಾಮ್ ಕಿ ಬಾತ್' ಎಂದೇ ಕರೆಯಲ್ಪಟ್ಟ ಇಂದಿನ ಕಾರ್ಯಕ್ರಮ ನಡೆಸಿ ಕೊಟ್ಟಿದ್ದಾರೆ. `ವಾರಿಯರ್ಸ್  ಆಗಿ (ಹೋರಾಟಗಾರರಾಗಿ) ವರಿಯರ್ಸ್ (ಚಿಂತಾಕ್ರಾಂತ) ಆಗಬೇಡಿ,'' ಎಂದು ವಿದ್ಯಾರ್ಥಿಗಳಿಗೆ ಪ್ರಧಾನಿ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X