Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರಾವಳಿ ಪ್ರವಾಸಿ ಸ್ಥಳಗಳಲ್ಲಿ...

ಕರಾವಳಿ ಪ್ರವಾಸಿ ಸ್ಥಳಗಳಲ್ಲಿ ಹೌಸ್‌ಬೋಟ್, ತೇಲುವ ಉಪಾಹಾರ ಗೃಹ

ರಾಜ್ಯ ಬಜೆಟ್-2018

ವಾರ್ತಾಭಾರತಿವಾರ್ತಾಭಾರತಿ16 Feb 2018 6:43 PM IST
share
ಕರಾವಳಿ ಪ್ರವಾಸಿ ಸ್ಥಳಗಳಲ್ಲಿ ಹೌಸ್‌ಬೋಟ್, ತೇಲುವ ಉಪಾಹಾರ ಗೃಹ

ಬೆಂಗಳೂರು, ಫೆ. 16: ಕರಾವಳಿ ಪ್ರದೇಶಗಳಲ್ಲಿನ ಆಯ್ದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಹೌಸ್‌ಬೋಟ್‌ಗಳು ಹಾಗೂ ತೇಲುವ ಉಪಾಹಾರ ಗೃಹಗಳ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ 2018-19ನೆ ಸಾಲಿನ ಆಯವ್ಯಯ ಮಂಡಿಸಿದ ಅವರು, ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಪ್ರವಾಸಿತಾಣಗಳನ್ನು ಚಲನಚಿತ್ರದಲ್ಲಿ ಪ್ರದರ್ಶಿಸುವ ಮೂಲಕ ಪ್ರಸಿದ್ಧಿಗೊಳಿಸುವ ನಿಟ್ಟಿನಲ್ಲಿ ಮೊಟ್ಟ ಮೊದಲ ಬಾರಿಗೆ ಚಲನಚಿತ್ರ ಪ್ರವಾಸೋದ್ಯಮ ನೀತಿಯನ್ನು ಜಾರಿಗೊಳಿಸಲಾಗುವುದು.

ಕಲಬುರಗಿಯಲ್ಲಿ ಉತ್ತರ ಕರ್ನಾಟಕದ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಕಲಬುರಗಿ ಕಲಾಭವನ ನಿರ್ಮಿಸಲು ಉದ್ದೇಶಿಸಲಾಗಿದೆ. ಇಪ್ಪತ್ತು ಪರಂಪರಾ ಪ್ರವಾಸಿ ತಾಣಗಳಲ್ಲಿ ಸಮಗ್ರ ಪ್ರವಾಸಿ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ.
ಇವುಗಳಲ್ಲಿ ಪ್ರಮುಖವಾಗಿ ವಿಶ್ವ ಪಾರಂಪರಿಕ ಪ್ರವಾಸಿ ತಾಣವಾದ ಹಂಪಿ, ಬೇಲೂರು-ಹಳೇಬೀಡು, ಶ್ರವಣಬೆಳಗೊಳ, ನಂದಿಬೆಟ್ಟ, ಸನ್ನತಿ ಹಾಗೂ ಕಲಬುರಗಿ ಕೋಟೆಗಳಲ್ಲಿ ಅಭಿವದ್ಧಿ ಕಾರ್ಯಗಳನ್ನು ಪ್ರಾರಂಭಿಸಲಾಗುವುದು. ಹೊಸದಿಲ್ಲಿಯಲ್ಲಿರುವ ದೆಹಲಿ ಹಾಟ್ ಮಾದರಿಯಲ್ಲಿಯೇ ಮೈಸೂರಿನಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಸೇರಿದ ಜಮೀನಿನಲ್ಲಿ ಮೈಸೂರು ಹಾಟ್‌ನ್ನು ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ.

ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ವಿದೇಶಿ ಹಾಗೂ ದೇಶೀ ಪ್ರವಾಸಿಗರ ಅಂಕಿಅಂಶಗಳನ್ನು ನಿಖರವಾಗಿ ಸಂಗ್ರಹಿಸುವ ಬಗ್ಗೆ ಮಾದರಿ ಸಮೀಕ್ಷೆ ನಡೆಸಲಾಗುವುದು. ಪ್ರಾಚ್ಯವಸ್ತು ಸಂಗ್ರಹಾಲಯ, ಪರಂಪರಾ ಇಲಾಖೆಯು ಹಮ್ಮಿಕೊಳ್ಳುವ ಸ್ಮಾರಕಗಳ ಸಂರಕ್ಷಣಾ ಕೆಲಸವು ಪ್ರವಾಸಿ ತಾಣಗಳಲ್ಲಿರುವ ಸ್ಮಾರಕಗಳ ಸಂರಕ್ಷಣೆಗೆ ಸಂಬಂಧಿಸಿರುವುದರಿಂದ ಸದರಿ ಇಲಾಖೆಯನ್ನು ಪ್ರವಾಸೋದ್ಯಮ ಇಲಾಖೆಯ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ.
2018-19ನೆ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಗೆ ಒಟ್ಟಾರೆಯಾಗಿ 459 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X