Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಪ್ರಿಲ್‌ನಿಂದ ಸರಕಾರಿ ನೌಕರರಿಗೆ...

ಎಪ್ರಿಲ್‌ನಿಂದ ಸರಕಾರಿ ನೌಕರರಿಗೆ ಶೇ.30ರಷ್ಟು ವೇತನ ಹೆಚ್ಚಳ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Feb 2018 9:58 PM IST
share
ಎಪ್ರಿಲ್‌ನಿಂದ ಸರಕಾರಿ ನೌಕರರಿಗೆ ಶೇ.30ರಷ್ಟು ವೇತನ ಹೆಚ್ಚಳ: ಸಿದ್ದರಾಮಯ್ಯ

ಬೆಂಗಳೂರು, ಫೆ.16: 6ನೆ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಸರಕಾರಿ ನೌಕರರಿಗೆ ಮೂಲ ವೇತನದ ಶೇ.30ರಷ್ಟು ಹೆಚ್ಚುವರಿ ವೇತನವನ್ನು ಮುಂದಿನ ಎಪ್ರಿಲ್‌ನಿಂದ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನ್ಯಾ.ಶ್ರೀನಿವಾಸ್ ಮೂರ್ತಿ ನೇತೃತ್ವದ 6ನೆ ವೇತನ ಆಯೋಗದ ಸಮಿತಿ ತನ್ನ ವರದಿಯನ್ನು ಇತ್ತೀಚೆಗಷ್ಟೆ ಸಲ್ಲಿಸಿತ್ತು. ಹೀಗಾಗಿ ಆಯವ್ಯಯದಲ್ಲಿ ಈ ಕುರಿತು ಪ್ರಸ್ತಾಪಿಸಿದ್ದೇನೆ. ಶೀಘ್ರದಲ್ಲೆ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

6ನೆ ವೇತನ ಆಯೋಗದ ಜಾರಿಯಿಂದ 5.93ಲಕ್ಷ ಹಾಲಿ ಸರಕಾರಿ ನೌಕರರು ಹಾಗೂ 5.73ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. ಇದರಿಂದ ಸರಕಾರಕ್ಕೆ 10,508 ಕೋಟಿ ರೂ. ಹೊರೆ ಬೀಳಲಿದೆ. ಆದರೂ ಸರಕಾರದ ಬಹುದಿನದ ಬೇಡಿಕೆ ಈಡೇರಿಸಿದ ತೃಪ್ತಿ ನನಗಿದೆ ಎಂದು ಅವರು ಹೇಳಿದರು.

ಆದ್ಯತಾ ವಲಯಗಳಿಗೆ ಹೆಚ್ಚಿನ ಆದ್ಯತೆ: ಸರಕಾರಿ ನೌಕರರ ವೇತನ ಹೆಚ್ಚಳ, ರೈತರ ಸಾಲ ಮನ್ನಾದಿಂದಾಗಿ ಸರಕಾರಕ್ಕೆ 14,508 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ. ಆದರೂ ಸರಕಾರದ ಆರ್ಥಿಕ ವ್ಯವಸ್ಥೆ ಸುಸ್ಥಿರವಾಗಿರುವುದರಿಂದ ಸಮಸ್ಯೆಯಾಗುವುದಿಲ್ಲ. ಹೀಗಾಗಿ ಕೃಷಿ, ನೀರಾವರಿ, ಶಿಕ್ಷಣ, ಆರೋಗ್ಯ, ಲೋಕೋಪಯೋಗಿ ಇಲಾಖೆ ಸೇರಿದಂತೆ ಆದ್ಯತೆ ವಲಯಕ್ಕೆ ನೀಡುವ ಅನುದಾನದಲ್ಲಿ ಯಾವುದೆ ಕಡಿತ ಮಾಡಿಲ್ಲವೆಂದು ಅವರು ಹೇಳಿದರು.

ಕಾಂಗ್ರೆಸ್ ಸರಕಾರ ಸಾಲದಲ್ಲಿದೆ ಎಂದು ಕೆಲವು ಪ್ರತಿಪಕ್ಷಗಳ ನಾಯಕರು ಆರೋಪಿಸುತ್ತಿದ್ದಾರೆ. ಇವರ ಆರೋಪ ಕೇವಲ ಜನತೆಯನ್ನು ದಾರಿ ತಪ್ಪಿಸುವುದೇ ಆಗಿದೆ. ನಮ್ಮ ಸರಕಾರ ಕಳೆದ ನಾಲ್ಕು ವರ್ಷಗಳಿಂದ ಖರ್ಚಿಗಿಂತ ಆದಾಯ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರಕಾರ ಯಾವುದೇ ಸಾಲದಲ್ಲಿ ಸಿಲುಕಿಲ್ಲವೆಂದು ಸಮಜಾಯಿಷಿ ನೀಡಿದರು.

ಅಬಕಾರಿ ಇಲಾಖೆಯನ್ನು ಹೊರತು ಪಡಿಸಿ, ಅಂಚೆ, ಮೋಟಾರ್‌ವಾಹನ ಹಾಗೂ ಹಣಕಾಸು ಇಲಾಖೆ ಸೇರಿದಂತೆ ವಿವಿಧ ಇಲಾಖೆ, ಸಂಸ್ಥೆಗಳಿಂದ ರಾಜ್ಯ ಸರಕಾರಕ್ಕೆ ಬರಬೇಕಾದ ತೆರಿಗೆ ಬಂದಿದೆ. ಹೀಗಾಗಿ ಸರಕಾರದ ಆದಾಯದಲ್ಲಿ ಯಾವುದೆ ಕೊರತೆಯಿಲ್ಲವೆಂದು ಅವರು ಹೇಳಿದರು.

-2018-19ನೆ ಸಾಲಿನ ಆಯವ್ಯಯದಲ್ಲಿ ಎಲ್ಲ ವರ್ಗ, ಸಮುದಾಯಕ್ಕೂ ಸಮಾನ ಅವಕಾಶವನ್ನು ನೀಡಲಾಗಿದೆ. ಮುಖ್ಯವಾಗಿ ಎಲ್ಲ ವರ್ಗದ ಜನರಿಗೂ ಉಚಿತ ಆರೋಗ್ಯವನ್ನು ಕಲ್ಪಿಸುವ ಯೂನಿವರ್ಸಲ್ ಹೆಲ್ತ್ ಕಾರ್ಡ್ ಹಾಗೂ ವಿದ್ಯಾರ್ಥಿನಿಯರಿಗೆ ಪಿಯುಸಿಯಿಂದ ಸ್ನಾತಕೋತ್ತರದವರೆಗೆ ಉಚಿತ ಪ್ರವೇಶ ನೀಡಲಾಗಿದೆ. ಹೀಗೆ ಎಲ್ಲ ಇಲಾಖೆಗಳಲ್ಲೂ ಸಮಾನ ಅವಕಾಶ, ಸೌಲಭ್ಯ ನೀಡಿದ್ದೇನೆ ಎಂಬ ತೃಪ್ತಿಯಿದೆ.
-ನಾನು ಯಾವತ್ತು ಚುನಾವಣೆ ದೃಷ್ಟಿಯಿಂದ ಬಜೆಟ್ ರೂಪಿಸುವುದಿಲ್ಲ. ನಮ್ಮ ಹಣಕಾಸು ಸಂಪನ್ಮೂಲಗಳ ಸೌಲಭ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು 2018-19 ಬಜೆಟ್ ಮಂಡಿಸಿದ್ದೇನೆ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುವುದರಿಂದ ವಸ್ತುನಿಷ್ಠವಾಗಿ, ವೈಜ್ಞಾನಿಕವಾಗಿ ಬಜೆಟನ್ನು ರೂಪಿಸಿ ಮಂಡಿಸಿದ್ದೇನೆ.
-ಸಿದ್ದರಾಮಯ್ಯ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X