Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಏಶ್ಯದ ದೇಶಗಳನ್ನು ‘ಸತಾಯಿಸಲು’ ಚೀನಾಕ್ಕೆ...

ಏಶ್ಯದ ದೇಶಗಳನ್ನು ‘ಸತಾಯಿಸಲು’ ಚೀನಾಕ್ಕೆ ಅಮೆರಿಕ ಅವಕಾಶ ನೀಡದು: ಟ್ರಂಪ್ ಆಡಳಿತ

ವಾರ್ತಾಭಾರತಿವಾರ್ತಾಭಾರತಿ16 Feb 2018 10:54 PM IST
share
ಏಶ್ಯದ ದೇಶಗಳನ್ನು ‘ಸತಾಯಿಸಲು’ ಚೀನಾಕ್ಕೆ ಅಮೆರಿಕ ಅವಕಾಶ ನೀಡದು: ಟ್ರಂಪ್ ಆಡಳಿತ

ವಾಶಿಂಗ್ಟನ್, ಫೆ. 16: ಏಶ್ಯದ ದೇಶಗಳನ್ನು ‘ಸತಾಯಿಸಲು’ ಅಥವಾ ‘ಬಲವಂತಪಡಿಸಲು’ ಚೀನಾಕ್ಕೆ ಅಮೆರಿಕ ಅವಕಾಶ ನೀಡುವುದಿಲ್ಲ ಎಂದು ಡೊನಾಲ್ಡ್ ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚೀನಾವು ಈ ವಲಯದಲ್ಲಿ ತನ್ನ ತೋಳ್ಬಲವನ್ನು ಪ್ರದರ್ಶಿಸಲು ಮುಂದಾಗುತ್ತಿರುವ ನಡುವೆಯೇ ಅಮೆರಿಕದಿಂದ ಈ ಎಚ್ಚರಿಕೆ ಹೊರಟಿದೆ.

 ಅದೇ ವೇಳೆ, ಅಮೆರಿಕ ಚೀನಾದೊಂದಿಗೆ ‘ಫಲಪ್ರದ’ ಸಂಬಂಧವನ್ನು ಹೊಂದಲು ಬಯಸುತ್ತದೆ ಹಾಗೂ ಉಭಯ ದೇಶಗಳು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಪ್ರಯತ್ನಗಳನ್ನು ನಡೆಸಬೇಕು ಎನ್ನುವುದು ಟ್ರಂಪ್ ಆಡಳಿತದ ನಿಲುವಾಗಿದೆ ಎಂದು ಪೂರ್ವ ಏಶ್ಯ ಮತ್ತು ಪೆಸಿಫಿಕ್ ವ್ಯವಹಾರಗಳ ಉಸ್ತುವಾರಿ ಸಹಾಯಕ ಕಾರ್ಯದರ್ಶಿ ಸೂಸಾನ್ ತಾರ್ನ್‌ಟನ್ ಹೇಳಿದರು.

ಅವರು ಸೆನೆಟ್ ವಿದೇಶ ಬಾಂಧವ್ಯಗಳ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ವಿವರಣೆ ನೀಡುತ್ತಿದ್ದರು.

‘‘ಆದರೆ, ಏಶ್ಯದಲ್ಲಿ ಅಮೆರಿಕವನ್ನು ಅಸ್ಥಿರಗೊಳಿಸುವ ಚೀನಾ ಪ್ರಯತ್ನಗಳನ್ನೂ ನಾವು ಸಹಿಸುವುದಿಲ್ಲ ಹಾಗೂ ಈ ವಲಯದ ದೇಶಗಳ ವಿರುದ್ಧ ಬಲಪ್ರಯೋಗ ನಡೆಸಲೂ ನಾವು ಬಿಡುವುದಿಲ್ಲ. ಈ ಬಗ್ಗೆಯೂ ನಮ್ಮ ನಿಲುವು ಸ್ಪಷ್ಟವಾಗಿದೆ’’ ಎಂದರು.

‘‘ಚೀನಾದ ಏಳಿಗೆಗೆ ಕಾರಣವಾದ ಅಂತಾರಾಷ್ಟ್ರೀಯ ವ್ಯವಸ್ಥೆ ಮುಂದುವರಿಯಬೇಕಾದರೆ, ಅದರ ನಿಯಮಗಳು ಮತ್ತು ಮಾನದಂಡಗಳನ್ನು ಚೀನಾ ಅನುಸರಿಸಬೇಕು ಹಾಗೂ ದೇಶಗಳನ್ನು ಸತಾಯಿಸಬಾರದು ಹಾಗೂ ಬೆದರಿಸಬಾರದು. ಬದಲಿಗೆ, ಅವುಗಳನ್ನು ಸಮಾನ ಭಾಗೀದಾರರು ಎನ್ನುವಂತೆ ಪರಿಗಣಿಸಬೇಕು’’ ಎಂದು ತಾರ್ನ್‌ಟನ್ ನುಡಿದರು.

ಟ್ರಂಪ್ ಆಡಳಿತವು ಟ್ರಂಪ್ ನಾಯಕತ್ವದಡಿಯಲ್ಲಿ ಭಾರತ-ಪೆಸಿಫಿಕ್ ತಂತ್ರಗಾರಿಕೆಯನ್ವಯ ಈ ವಲಯದಾದ್ಯಂತ ಭಾಗೀದಾರಿಕೆಗಳನ್ನು ವಿಸ್ತರಿಸುವ ಹಾಗೂ ಭದ್ರಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.

ಚೀನಾವು ಸಂಪನ್ಮೂಲ ಸಮೃದ್ಧ ದಕ್ಷಿಣ ಚೀನಾ ಸಮುದ್ರದಲ್ಲಿರುವ ದ್ವೀಪಗಳ ಒಡೆತನಕ್ಕೆ ಸಂಬಂಧಿಸಿದಂತೆ ಹಲವಾರು ಆಗ್ನೇಯ ಏಶ್ಯ ದೇಶಗಳೊಂದಿಗೆ ವಿವಾದ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X