Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಪ್ರಕೃತಿಯಿಂದಲೇ ನೇರ ಪರಿಸರ ಜ್ಞಾನ...

‘ಪ್ರಕೃತಿಯಿಂದಲೇ ನೇರ ಪರಿಸರ ಜ್ಞಾನ ಸಂಪಾದಿಸಿ’

ಕಡಲತೀರ ಅಧ್ಯಯನ ಜಾಥಾಕ್ಕೆ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ16 Feb 2018 10:55 PM IST
share
‘ಪ್ರಕೃತಿಯಿಂದಲೇ ನೇರ ಪರಿಸರ ಜ್ಞಾನ ಸಂಪಾದಿಸಿ’

ಉಡುಪಿ, ಫೆ. 16: ಪಠ್ಯ, ಪುಸ್ತಕಗಳಲ್ಲಿ ಅಚ್ಚಾದ ಪಾಠವನ್ನು ಕಲಿಯುವುದಕ್ಕಿಂತ ಪ್ರಕೃತಿಯಿಂದಲೇ ನೇರವಾಗಿ ಪರಿಸರಕ್ಕೆ ಸಂಬಂಧಿಸಿ ಜ್ಞಾನ, ತಿಳುವಳಿಕೆ ಮತ್ತು ಕಾಳಜಿಯನ್ನು ಪಡೆಯುವುದರಿಂದ ಪರಿಸರದ ಕುರಿತಂತೆ ನೈಜ ಪ್ರೀತಿ ಮೂಡಲು ಸಾಧ್ಯವಿದೆ. ಶಾಲಾ ಹಂತದಿಂದಲೇ ಈ ಕಾರ್ಯ ನಡೆಯಬೇಕಿದೆ ಎಂದು ಪರಿಸರ, ನಿಸರ್ಗ ಸಂರಕ್ಷಣಾ ಸಂಸ್ಥೆಯ ಕಾರ್ಯದರ್ಶಿ  ಈಶ್ವರ್ ಪ್ರಸಾದ್ ಹೇಳಿದ್ದಾರೆ.

ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ಮನನ ಹಾಗೂ ಉಡುಪಿ ಕಡಲತೀರ ಅಧ್ಯಯನ ಜಾಥ- 2018ರ ಕುರಿತು ಪುರಭವನದಲ್ಲಿ ಶುಕ್ರವಾರ ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಶ್ವದ ಅನೇಕ ದೇಶಗಳಲ್ಲಿ ಪರಿಸರದ ಕುರಿತು ವಿವಿಧ ಕಾರ್ಯಕ್ರಮಗಳು ಸಾರ್ವಜನಿಕವಾಗಿ ನಡೆಯುತ್ತವೆ. ಆದರೆ ನಮ್ಮಲ್ಲಿ ಪರಿಸರದ ಕುರಿತಂತೆ ನಿರೀಕ್ಷಿತ ಪ್ರಮಾಣದಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿಲ್ಲ. ಜನರಿಗೆ ಮಾಹಿತಿ ಸಿಕ್ಕಿದರೆ ಎಲ್ಲಿ ಪ್ರತಿಭಟಿಸುತ್ತಾರೋ ಎಂಬ ದುರಾಲೋಚನೆಯಿಂದ ಜಾಗೃತಿ ಕಾರ್ಯದಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಹೀಗಾಗಿ ನಮ್ಮ ದೇಶದಲ್ಲಿ ಪರಿಸರ ನಾಶ ರಾಜಾರೋಷವಾಗಿ ನಡೆಯುತ್ತಿದೆ. ಪರಿಸರದ ಕುರಿತು ವಿಶ್ವಸಂಸ್ಥೆ ನೀಡುತ್ತಿ ರುವ ಎಚ್ಚರಿಕೆ, ಮಾಹಿತಿಗಳನ್ನು ಜನರಿಗೆ ವಿವರಿಸುವ ಕೆಲಸ ನಡೆಯುತ್ತಲೇ ಇಲ್ಲ ಎಂದರು.

ಸಮುದ್ರದಿಂದ ಆಹಾರ: ಹೀಗಾಗಿ ನಮ್ಮನ್ನು ನಾವು ತಿದ್ದಿಕೊಂಡು ಬದಲಾಗದೇ ಇದ್ದರೆ ನಮ್ಮ ನಾಶ ನಮ್ಮಿಂದಲೇ ಆಗಲಿದೆ. ಜಗತ್ತಿನ ಶೇ. 40ರಷ್ಟು ಆಹಾರ ಸಮುದ್ರದಿಂದಲೇ ಮನುಷ್ಯನಿಗೆ ಲಭಿಸುತ್ತಿದೆ. ಔಷಧಿಗಳಿಗೆ ಬೇಕಾದ ಉತ್ಪನ್ನಗಳು ಸಹ ಅಗಾಧ ಪ್ರಮಾಣದಲ್ಲಿ ಸಿಗುತ್ತಿವೆ. ಆದರೆ ಇಂದು ಅದೇ ಸಮುದ್ರ ಮನುಷ್ಯದ ದುರಾಸೆಯಿಂದಾಗಿ ರಾಸಾಯನಿಕಯುಕ್ತವಾಗಿ ಪರಿವರ್ತನೆಯಾಗಿ ಕಲುಷಿತಗೊಳ್ಳುತ್ತಿದೆ ಎಂದರು.

ಸಮುದ್ರದ ಪರಿಭಾಷೆಯನ್ನು ಅರ್ಥೈಸಿಕೊಳ್ಳದೇ ನಾವು ಔಷಧ, ರಾಸಾಯನಿಕ ಗೊಬ್ಬರ, ನ್ಯೂಕ್ಲಿಯರ್ ವೇಸ್ಟ್‌ಗಳನ್ನು ಸಮುದ್ರಕ್ಕೆ ಬೇಕಾಬಿಟ್ಟಿ ಸುರಿಯುತ್ತಿದ್ದೇವೆ. ನಮ್ಮ ಪಾಲಿಗೆ ಸಮುದ್ರ ಒಂದು ಡಂಪಿಂಗ್ ಯಾರ್ಡ್‌ನಂತೆ ಆಗಿಬಿಟ್ಟಿದೆ. ಇದು ಪ್ರಕೃತಿ ನಾಶದ ಪ್ರಮುಖ ಅಂಶವಾಗಿದೆ ಎಂದು ಈಶ್ವರ್ ಪ್ರಸಾದ್ ಹೇಳಿದರು.

ಈ ಸಂದರ್ಭದಲ್ಲಿ ಉಡುಪಿಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಡಾ. ಲಕ್ಷ್ಮೀಕಾಂತ್, ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕ ಪ್ರೊ. ಪ್ರಕಾಶ್ ಕ್ರಮಧಾರಿ ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು.

ಪರಿಸರಕ್ಕೆ ಸಂಬಂಧಿಸಿದಂತೆ 41 ನಿಮಿಷಗಳ ವಿಶ್ವದ ಪ್ರಮುಖ ಸಾಕ್ಷ ಚಿತ್ರ ವೊಂದನ್ನು ವಿದ್ಯಾರ್ಥಿಗಳಿಗೆ ಇದೇ ವೇಳೆ ಪ್ರದರ್ಶಿಸಿ ಪರಿಸರ ನಾಶದ ಪರಿಣಾಮಗಳ ಕುರಿತು ತಿಳಿ ಹೇಳಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X