Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರೀತಿ-ಪ್ರೇಮದ ಚಳವಳಿ ನಡೆಯಲಿ:...

ಪ್ರೀತಿ-ಪ್ರೇಮದ ಚಳವಳಿ ನಡೆಯಲಿ: ಕೆ.ವೈ.ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 Feb 2018 6:33 PM IST
share

ಬೆಂಗಳೂರು, ಫೆ.17: ಭಾರತದಲ್ಲಿ ಅನ್ಯ ಜಾತಿ, ಧರ್ಮದ ಹುಡುಗ, ಹುಡುಗಿಯನ್ನು ಪ್ರೀತಿಸುವುದೇ ದೊಡ್ಡ ಸವಾಲಿನ ಸಂಗತಿ. ಹೀಗಾಗಿ ಯುವಕ-ಯುವತಿಯರು ಪ್ರೀತಿಸುವುದರ ಮೂಲಕವೆ ಚಳವಳಿಯನ್ನು ಪ್ರಾರಂಭಿಸಲಿ ಎಂದು ಹಿರಿಯ ನಾಟಕಕಾರ ಕೆ.ವೈ.ನಾರಾಯಣಸ್ವಾಮಿ ತಿಳಿಸಿದರು.

ಶನಿವಾರ ಬಯಲು ಬಳಗ, ಪರ್ಯಾಯ ಕಾನೂನು ವೇದಿಕೆ ಹಾಗೂ ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ನಗರದ ಎಸ್‌ಸಿಎಂ ಸಭಾಂಗಣದಲ್ಲಿ ದ್ವೇಷ ರಾಜಕೀಯದ ವಿರುದ್ಧ ಆಯೋಜಿಸಿದ್ದ ಅಡೆತಡೆ ಮುಕ್ತ ಪ್ರೀತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

21ನೆ ಶತಮಾನದಲ್ಲೂ ಪ್ರೀತಿಸಿದ ಒಂದೇ ಕಾರಣಕ್ಕಾಗಿ ಕೊಲೆಗಳು ನಡೆಯುತ್ತಿವೆ. ಒಂದು ಹುಡುಗಿ ಮತ್ತೊಂದು ಜಾತಿಯ ಹುಡುಗನ ಜೊತೆ ತಿರುಗಾಡುತ್ತಿದ್ದಾಳೆ ಎಂಬ ಸುದ್ದಿಯಿಂದಲೇ ಕೋಮು ಗಲಭೆಗಳು ನಡೆಯುತ್ತಿವೆ. ಹೀಗಾಗಿ ಪ್ರೀತಿ, ಪ್ರೇಮ ಎನ್ನುವುದು ಅಷ್ಟು ಸುಲಭದ ವಿಷಯವಲ್ಲ. ಹೀಗಾಗಿ ಪ್ರೀತಿ, ಪ್ರೇಮವೇ ದೊಡ್ಡ ಚಳವಳಿಯ ರೂಪ ಪಡೆಯಲಿ ಎಂದು ಅವರು ಆಶಿಸಿದರು.

ಜಗತ್ತಿನಲ್ಲಿ ಪ್ರೀತಿಯೊಂದೇ ಸಹಜವಾದ ಪ್ರಕ್ರಿಯೆಯಾಗಿದೆ. ಆದರೆ, ಹೆಣ್ಣಿನಲ್ಲಿ ಮೂಡುವಂತಹ ಸಹಜವಾದ ಪ್ರೇಮವನ್ನು ನಿರ್ಬಂಧಿಸುವ ನಿಟ್ಟಿನಲ್ಲಿ ಧಾರ್ಮಿಕತೆಯ ಹೆಸರಿನಲ್ಲಿ ಕಟ್ಟಳೆಗಳನ್ನು ಹಾಕಲಾಗುತ್ತಿದೆ. ಅದನ್ನು ಮೀರುವ ಪ್ರಕ್ರಿಯೆ ಯುವ ಜನತೆಗಿರುವ ದೊಡ್ಡ ಸವಾಲಾಗಿದೆ ಎಂದು ಅವರು ಹೇಳಿದರು.

ನಮ್ಮ ಜನಪದರ ಜೀವನ ಶೈಲಿನಲ್ಲಿ ನೈಜವಾದ ಜೀವನ ಪ್ರೀತಿಯಿತ್ತು. ತಮ್ಮ ಮನಸಿನಲ್ಲಿ ಹುಟ್ಟುತ್ತಿದ್ದ ಪ್ರೀತಿಯನ್ನು ಅಷ್ಟೆ ಸಹಜವಾಗಿ ವ್ಯಕ್ತ ಪಡಿಸುವಂತಹ ಮುಕ್ತ ಅವಕಾಶವಿತ್ತು. ಇಂತಹ ಜೀವನ ಪ್ರೀತಿಯ ಮಾದರಿಗಳು ಇಂದಿನ ಯುವ ತಲೆಮಾರಿಗೆ ಅಗತ್ಯವಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಾವಿದೆ ದು.ಸರಸ್ವತಿಯಿಂದ ‘ಸಣ್ತಿಮ್ಮಿ ಪಿರೂತಿ’ ನಾಟಕ ಪ್ರದರ್ಶನ ಹಾಗೂ ಕವಿಗಳಾದ ಚಾಂದ್‌ಪಾಷಾ, ಮುರಳಿ ಮೋಹನ ಕಾಟಿ, ರೂಮಿ ಹರೀಶ್, ಉಮೇಶ್ ಪ್ರೇಮ ಕವಿತೆಗಳನ್ನು ವಾಚನ ಮಾಡಿದರು. ಈ ವೇಳೆ ವಕೀಲ ಚಿಕ್ಕಹಾಗಡೆ ಪುರುಷೋತ್ತಮ್, ಹುಲಿಕುಂಟೆ ಮೂರ್ತಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X