Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ವಿದ್ಯುತ್‌ ಚಾಲಿತ ವಾಹನಗಳಿಗೆ...

ಬೆಂಗಳೂರು: ವಿದ್ಯುತ್‌ ಚಾಲಿತ ವಾಹನಗಳಿಗೆ ಮುಖ್ಯಮಂತ್ರಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Feb 2018 6:41 PM IST
share
ಬೆಂಗಳೂರು: ವಿದ್ಯುತ್‌ ಚಾಲಿತ ವಾಹನಗಳಿಗೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು, ಫೆ.17: ಸದಾ ರಾಜಕೀಯ ಆಸಕ್ತರಿಂದ ತುಂಬಿರುವ ವಿಧಾನಸೌಧದ ಮುಂಭಾಗದಲ್ಲಿ ಶನಿವಾರ ಬೇರೆಯದೇ ವಾತಾವರಣ. ಅಲ್ಲಿ ಸಾಲಾಗಿ ನಿಂತಿದ್ದ ನೀಲಿ ಬಣ್ಣದ ಕಾರುಗಳು, ದ್ವಿಚಕ್ರ ವಾಹನಗಳು, ಮತ್ತು ಆಟೋರಿಕ್ಷಾಗಳ ಸುತ್ತ ಆಸಕ್ತರ ದಂಡು. ಈ ವಾಹನಗಳ ಬಿಡಿಭಾಗಗಳು, ಬ್ಯಾಟರಿ, ಅದರ ಚಾರ್ಜಿಂಗ್ ವಿಧಾನ, ಅದು ಕೊಡುವ ಮೈಲೇಜ್, ಅದರ ಬೆಲೆ... ಇತ್ಯಾದಿಗಳ ಬಗ್ಗೆ ಇವರೆಲ್ಲರ ಪ್ರಶ್ನೆಗಳು. ಅದಕ್ಕೆಲ್ಲ ಉತ್ತರಿಸುತ್ತಿದ್ದ ಇನ್ನೊಂದು ದಂಡು.
ಇದನ್ನೆಲ್ಲ ಕೇಳಿ ಆಶ್ಚರ್ಯವೇ? ನಿಜ, ಬೆಂಗಳೂರಿನ ಮತ್ತು ರಾಜ್ಯದ ವಾಹನೋದ್ಯಮದಲ್ಲಿ ಶನಿವಾರ ಚಾರಿತ್ರಿಕ ದಿನ. ಏಕೆಂದರೆ, ಭವಿಷ್ಯದ ವಾಹನಗಳಾದ ವಿದ್ಯುತ್‌ಚಾಲಿತ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅಧಿಕೃತವಾಗಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಇ-ವೆಹಿಕಲ್ಸ್‌ಗೆ ಸಂಬಂಧಪಟ್ಟ ಹೊಸ ಲಾಂಛನವನ್ನೂ ಬಿಡುಗಡೆ ಮಾಡಲಾಯಿತು. ಈ ಗಣ್ಯರಿಂದ ಹಸಿರು ನಿಶಾನೆ ಪಡೆದ ವಿದ್ಯುತ್‌ಚಾಲಿತ ಸ್ಕೂಟರುಗಳು, ಆಟೊರಿಕ್ಷಾಗಳು ಮತ್ತು ಕಾರುಗಳು ಗಾಂಭೀರ್ಯದಿಂದ ವಿಧಾನಸೌಧದ ಆವರಣದಲ್ಲಿ ಒಂದೆರಡು ಸುತ್ತು ಹಾಕಿದವು. ಬಳಿಕ, ನೆರೆದಿದ್ದ ಕುತೂಹಲಿಗರೂ ಅವುಗಳನ್ನು ಚಲಾಯಿಸಿ ಒಂದು ವಿಶಿಷ್ಟ ಅನುಭವವನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಆರ್.ವಿ.ದೇಶಪಾಂಡೆ, ಇದು ಕರ್ನಾಟಕ ಮತ್ತು ಬೆಂಗಳೂರಿನ ಪಾಲಿಗೆ ಚಾರಿತ್ರಿಕ ದಿನ. ಮಿತಿಮೀರಿದ ವಾಹನಗಳಿಂದಾಗಿ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯದಿಂದ ತತ್ತರಿಸುತ್ತಿರುವ ಆಧುನಿಕ ಜೀವನಶೈಲಿಗೆ ವಿದ್ಯುತ್‌ಚಾಲಿತ ವಾಹನಗಳು ಭವಿಷ್ಯದ ಹೊಂಗಿರಣಗಳಾಗಿವೆ ಎಂದರು. ನಾವು ಹಂತಹಂತವಾಗಿ ವಿದ್ಯುತ್‌ಚಾಲಿತ ವಾಹನಗಳ ಬಳಕೆಯನ್ನು ಹೆಚ್ಚುಗೊಳಿಸುತ್ತಾ ಹೋಗುತ್ತೇವೆ. 2020ರ ಹೊತ್ತಿಗೆ ಎಲ್ಲೆಡೆ ಈ ವಾಹನಗಳು ಬರಬೇಕು ಎನ್ನುವುದು ನಮ್ಮ ಗುರಿಯಾಗಿದೆ ಎಂದು ದೇಶಪಾಂಡೆ ಹೇಳಿದರು.

ಸದ್ಯಕ್ಕೆ ವಿದ್ಯುತ್‌ಚಾಲಿತ ವಾಹನಗಳಲ್ಲಿ ಬ್ಯಾಟರಿಯ ಬೆಲೆ ದುಬಾರಿಯಾಗಿದೆ. ಇದು ಜನರ ಕೈಗೆಟುಕುವಂತಾದರೆ ಉಪಯೋಗವಾಗುತ್ತದೆ ಎನ್ನುವ ದೃಷ್ಟಿಯಿಂದ ರಾಜ್ಯ ಸರಕಾರದ ನೀತಿಯಲ್ಲಿ ಹಲವು ಉತ್ತೇಜನಾ ಕ್ರಮಗಳನ್ನು ಅಳವಡಿಸಲಾಗಿದೆ. ಉದ್ಯಮಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಉದ್ಯಮ ಕ್ಷೇತ್ರ ಮತ್ತು ಸಾರ್ವಜನಿಕರಿಬ್ಬರಿಗೂ ಲಾಭವಾಗಬೇಕೆಂಬ ದೃಷ್ಟಿಯಿಂದ ರಾಜ್ಯವು ‘ವಿದ್ಯುತ್‌ಚಾಲಿತ ವಾಹನಗಳು ಮತ್ತು ಇಂಧನ ಸಂಗ್ರಹಣೆ ನೀತಿ-2017’ ಅನ್ನು ಜಾರಿಗೆ ತಂದಿದೆ. ಇಂಥದೊಂದು ನೀತಿ ಕೇಂದ್ರ ಸರಕಾರದಲ್ಲಾಗಲಿ, ಉಳಿದ ರಾಜ್ಯಗಳಲ್ಲಾಗಲಿ ಇಲ್ಲ. ಈ ಮೂಲಕ ನಾವು ಹೊಸ ಮೈಲಿಗಲ್ಲನ್ನು ಸ್ಥಾಪಿಸಿದ್ದೇವೆ ಎಂದು ದೇಶಪಾಂಡೆ ವಿವರಿಸಿದರು.

ಅಗಾಧವಾಗಿ ಬೆಳೆಯುತ್ತಿರುವ ಬೆಂಗಳೂರಿನಂಥ ನಗರಗಳಲ್ಲಿ ನೆಮ್ಮದಿ ಮತ್ತು ಶಾಂತಿಯಿಂದ ಕೂಡಿದ ಪ್ರಯಾಣ ಅನಿವಾರ್ಯವಾಗಿದೆ. ಕರ್ಕಶ ಶಬ್ದವಿಲ್ಲದೆ, ಹೊಗೆ ಉಗುಳದೆ ಸಾಗುವ ಇ-ವಾಹನಗಳು ಈಗ ಅತ್ಯಗತ್ಯವಾಗಿವೆ. ಉದ್ಯಮಲೋಕ ಕೂಡ ಇದಕ್ಕೆ ಸಂಬಂಧಿಸಿದ ತಂತ್ರಜ್ಞಾನವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಬೇಕು ಎಂದು ಅವರು ಕರೆ ನೀಡಿದರು.

ಸಮಾರಂಭದಲ್ಲಿ ಸರಕಾರದ ಹೆಚ್ಚುವರಿ ಕಾರ್ಯದರ್ಶಿ ಡಿ.ವಿ.ಪ್ರಸಾದ್, ಕೈಗಾರಿಕಾ ಆಯುಕ್ತ ದರ್ಪಣ್ ಜೈನ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X