Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವಕರು ಸಮಾಜದ ಜೊತೆ ಮೌಲ್ಯಗಳನ್ನೂ...

ಯುವಕರು ಸಮಾಜದ ಜೊತೆ ಮೌಲ್ಯಗಳನ್ನೂ ಬದಲಾಯಿಸುವ ಅಗತ್ಯವಿದೆ: ಎಚ್.ಎಸ್.ದೊರೆಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 Feb 2018 7:31 PM IST
share
ಯುವಕರು ಸಮಾಜದ ಜೊತೆ ಮೌಲ್ಯಗಳನ್ನೂ ಬದಲಾಯಿಸುವ ಅಗತ್ಯವಿದೆ: ಎಚ್.ಎಸ್.ದೊರೆಸ್ವಾಮಿ

ಮೈಸೂರು,ಫೆ.17: ಇಂದಿನ ಯುವಕರು ಸಮಾಜವನ್ನು ಬದಯಾಯಿಸುವುದರ ಜೊತೆಗೆ ಮೌಲ್ಯಗಳನ್ನು ಬದಲಾಯಿಸುವ ಅವಶ್ಯಕತೆಯಿದೆ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯಪಟ್ಟರು.

ಮೈಸೂರು ವಿಶ್ವವಿದ್ಯಾನಿಲಯ ಡಾ.ಬಾಬೂ ಜಗಜೀವನರಾಮ್ ಅಧ್ಯಯನ ಮತ್ತು ಸಂಶೋಧನ ಮತ್ತು ವಿಸ್ತರಣ ಕೇಂದ್ರ ಹೆಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆ ಮೈಸೂರು ಮತ್ತು ಗಾಂಧಿಭವನ ಬೆಂಗಳೂರು ಆಶ್ರಯದಲ್ಲಿ ಶನಿವಾರ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಲಾದ “ಆಧುನಿಕ ಕರ್ನಾಟಕದ ರೂಪಿಕೆಯಲ್ಲಿ ಹೆಚ್.ಸಿ.ದಾಸಪ್ಪ ಮತ್ತು ಯಶೋಧರಾ ದಾಸಪ್ಪರವರ ಪಾತ್ರ” ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. 

ಇಂದಿನ ಯುವಕರು ಸಮಾಜಮುಖಿಗಳಾಗಬೇಕು. ಉತ್ತಮ ಸಮಾಜ ಕಟ್ಟಬೇಕು. ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಬಡವ ಬಡವನಾಗಿಯೇ ಇದ್ದಾನೆ. ಭಾರತದ ಆಸ್ತಿಯಲ್ಲಿ ಒಂದು ಪರ್ಸೆಂಟ್ ಮಾತ್ರ ಬಡವರ ಬಳಿಯಿದ್ದು, 99ಪರ್ಸೆಂಟ್ ಶ್ರೀಮಂತರ ಕೈಯಲ್ಲಿದೆ. ಈ ಕುರಿತು ಯುವಕರು ಯೋಚಿಸಬೇಕು. ವಿಚಾರವಂತರಾಗಬೇಕು. ದೇಶದ ಸಮಸ್ಯೆಯನ್ನು ಅರ್ಥಮಾಡಿಕೊಂಡು ಎಲ್ಲರಿಗೂ ನ್ಯಾಯ ದೊರಕಿಸಿಕೊಡಬೇಕು ಎಂದರು.

ಒಬ್ಬನು ಗುಡಿಸಲು ಕಟ್ಟಿ ವಾಸಿಸುತ್ತಾನೆ ಎಂದಾದರೆ ಅಲ್ಲಿ ಪೊಲೀಸರನ್ನು ಕರೆತಂದು ಲಾಠಿಚಾರ್ಜ್ ನಡೆಸಿ ಆತನನ್ನು ಓಡಿಸಲಾಗುತ್ತದೆ. ಅವನು ಕೂಡ ಭಾರತೀಯನಲ್ಲವೇ, ಅವನಿಗೂ ಕೂಡ ವಾಸಿಸುವ ಹಕ್ಕಿಲ್ಲವೇ, ಯಾವುದೇ ಗುಡಿಸಲು ತೆಗೆಸುವ ಮುನ್ನ ಆತನಿಗೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿ ಮತ್ತೆ ಅಲ್ಲಿಂದ ಎಬ್ಬಿಸಬೇಕು. ಹಾಗೆಯೇ ಅವನನ್ನು ಹೊರಡಿಸಲು ಸಾಧ್ಯವಿಲ್ಲ. ಅದು ನಿಯಮ. ಅದಕ್ಕಾಗಿ ಯುವಕರು ಸಂಪೂರ್ಣ ಸಮಾಜವನ್ನು ಬದಲಾಯಿಸಬೇಕು. ಮೌಲ್ಯಗಳನ್ನು ಕೂಡ ಬದಲಾಯಿಸಬೇಕು ಎಂದು ತಿಳಿಸಿದರು. 

ಹೆಚ್.ಸಿ.ದಾಸಪ್ಪ ಮತ್ತು ಯಶೋಧರಾ ದಾಸಪ್ಪ ಇಬ್ಬರೂ ದೇಶಭಕ್ತರು. ಬಹಳ ಅನ್ಯೋನ್ಯವಾಗಿದ್ದವರು. ಕರ್ನಾಟಕದಲ್ಲಿ ಹಾಸುಹೊಕ್ಕಾಗಿ ಕೆಲಸ ಮಾಡಿದವರು. ಸಜ್ಜನರು, ಗೌರವಾನ್ವಿತ ವ್ಯಕ್ತಿಗಳು, ಬಡತನವನ್ನಪ್ಪಿಕೊಂಡು ಕಷ್ಟಕ್ಕೆ ಸಿಲುಕಿದರೂ ಕೂಡ ಧೈರ್ಯಗೆಡದೇ ಸಮಾಜಕ್ಕೆ ಸ್ಫೂರ್ತಿಯಾಗಿ ಕೆಲಸ ಮಾಡಿದರು. ಅಂಥಹವರ ತತ್ವ ಆದರ್ಶಗಳನ್ನು ಯುವ ಜನತೆ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರಲ್ಲದೇ, ಅವರ ಜೀವನ ಹೇಗಿತ್ತೆಂಬುದನ್ನು ಎಳೆಎಳೆಯಾಗಿ ಬಿಡಿಸಿಟ್ಟರು.

ಕಾರ್ಯಕ್ರಮದಲ್ಲಿ ಶಾಸಕ ವಾಸು, ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆ ಡಿ.ಭಾರತಿ, ಡಾ.ಬಾಬೂ ಜಗಜೀವನ್ ರಾಮ್ ಅಧ್ಯಯನ ಕೇಂದ್ರದ ನಿರ್ದೆಶಕ ಪ್ರೊ.ಕೆ.ಸದಾಶಿವ, ಹೆಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆಯ ಅಧ್ಯಕ್ಷೆ ಸರೋಜ ತುಳಸಿದಾಸ್, ಗಾಂಧಿಭವನ ಬೆಂಗಳೂರಿನ ಪ್ರೊ.ಜಿ.ಬಿ.ಶಿವರಾಜು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X