Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಿಂಗಾನುಪಾತ ಅತಿ ಹೆಚ್ಚು ಇಳಿಕೆಯಾಗಿರುವ...

ಲಿಂಗಾನುಪಾತ ಅತಿ ಹೆಚ್ಚು ಇಳಿಕೆಯಾಗಿರುವ ರಾಜ್ಯ ಯಾವುದು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ17 Feb 2018 9:45 PM IST
share
ಲಿಂಗಾನುಪಾತ ಅತಿ ಹೆಚ್ಚು ಇಳಿಕೆಯಾಗಿರುವ ರಾಜ್ಯ ಯಾವುದು ಗೊತ್ತೇ?

ಹೊಸದಿಲ್ಲಿ, ಫೆ. 17: ದೇಶದ 21 ಅತಿ ದೊಡ್ಡ ರಾಜ್ಯಗಳ ಪೈಕಿ 17 ರಾಜ್ಯಗಳಲ್ಲಿ ಲಿಂಗಾನುಪಾತ (ಎಸ್‌ಆರ್‌ಬಿ) ಇಳಿಕೆಯಾಗುತ್ತಿದೆ. ಗುಜರಾತ್‌ನಲ್ಲಿ ಈ ಅನುಪಾತ ದಿಗಿಲು ಹುಟ್ಟಿಸುವಷ್ಟು 53 ಅಂಕ ಇಳಿಕೆಯಾಗಿದೆ ಎಂದು ನೀತಿ ಆಯೋಗ ಬಿಡುಗಡೆ ಮಾಡಿದ ವರದಿ ಹೇಳಿದೆ. ಈ ಹಿನ್ನೆಲೆಯಲ್ಲಿ ಲಿಂಗ ಆಯ್ಕೆ ಮಾಡಿ ಗರ್ಭಪಾತ ಮಾಡುವುದನ್ನು ಪರಿಶೀಲಿಸುವ ಅಗತ್ಯತೆ ಇದೆ ಎಂದು ನೀತಿ ಆಯೋಗ ತಿಳಿಸಿದೆ.

17 ರಾಜ್ಯಗಳಲ್ಲಿ ಗಣನೀಯ 10 ಅಥವಾ ಅದಕ್ಕಿಂತ ಹೆಚ್ಚು ಇಳಿಕೆ ದಾಖಲಾಗಿದೆ. ಈ ಸೂಚ್ಯಂಕದಲ್ಲಿ 2012-14ರಿಂದ 2013-15ರ ವರೆಗೆ ಗುಜರಾತ್‌ನಲ್ಲಿ 1,000 ಪುರುಷರಿಗೆ 907 ಮಹಿಳೆಯರು ಇರಬೇಕಾಗಿತ್ತು. ಆದರೆ, 854 ಮಾತ್ರ ಮಹಿಳೆಯರು ಇದ್ದು, 53 ಅಂಕ ಇಳಿಕೆಯಾಗಿದೆ. ಗುಜರಾತ್‌ನ ನಂತರದ ಸ್ಥಾನವನ್ನು ಹರ್ಯಾಣ ಪಡೆದುಕೊಂಡಿದೆ. ಇಲ್ಲಿ 35 ಅಂಕ ಇಳಿಕೆ ದಾಖಲಾಗಿದೆ. ರಾಜಸ್ತಾನ 32 ಅಂಕ, ಉತ್ತರಾಖಂಡ 27 ಅಂಕ, ಮಹಾರಾಷ್ಟ್ರ 18 ಅಂಕ, ಹಿಮಾಚಲ ಪ್ರದೇಶ 14 ಅಂಕ, ಚತ್ತೀಸ್‌ಗಡ 12 ಅಂಕ, ಕರ್ನಾಟಕ 11 ಅಂಕ ಇಳಿಕೆಯಾಗಿದೆ ಎಂದು ‘ಹೆಲ್ತಿ ಸ್ಟೇಟ್ ಪ್ರೋಗ್ರೆಸಿವ್ ಇಂಡಿಯಾ’ ವರದಿ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯಗಳು ಲಿಂಗ ಪತ್ತೆ ಪರೀಕ್ಷೆ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಹಾಗೂ ಹೆಣ್ಣು ಮಗುವಿನ ಪ್ರಾಮುಖ್ಯತೆ ಪ್ರಚುರಪಡಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯತೆ ಇದೆ ಎಂದು ಕಳೆದ ವಾರ ಬಿಡುಗಡೆಯಾದ ವರದಿ ಹೇಳಿದೆ. ಕೆಲವು ರಾಜ್ಯಗಳಲ್ಲಿ ಜನನ ಲಿಂಗಾನುಪಾತದಲ್ಲಿ ಸುಧಾರಣೆ ಉಂಟಾಗಿದೆ. ಪಂಜಾಬ್ 19 ಅಂಕ, ಉತ್ತರಪ್ರದೇಶ 10 ಅಂಕ ಹಾಗೂ ಬಿಹಾರ್ 9 ಅಂಕ ಏರಿಕೆ ಕಂಡಿದೆ ಎಂದು ವರದಿ ಹೇಳಿದೆ. ಆಯ್ಕೆ ಮಾಡಿ ಗರ್ಭಪಾತ ಮಾಡುವುದರಿಂದ ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಆಗುತ್ತಿರುವ ಇಳಿಕೆಯ ತೀವ್ರತೆಯ ಪ್ರಮುಖ ಸೂಚಕ ಲಿಂಗಾನುಪಾತ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X