Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೊರಬ: ಬ್ಲಾಕ್ ಕಾಂಗ್ರೆಸ್ ಬೂತ್...

ಸೊರಬ: ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

ವಾರ್ತಾಭಾರತಿವಾರ್ತಾಭಾರತಿ18 Feb 2018 8:03 PM IST
share
ಸೊರಬ: ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

ಸೊರಬ,ಫೆ.18: ಸಮಾಜವಾದದ ಸಿದ್ದಾಂತ ಹಾಗೂ ಅಹಿಂಸಾವಾದ ಕಾಂಗ್ರೆಸ್ ಪಕ್ಷದ ನಂಬಿಕೆಯಾಗಿದ್ದು, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ತಿಳಿದರು.

ಪಟ್ಟಣದ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ರವಿವಾರ ಹಮ್ಮಿಕೊಂಡಿದ್ದ, ಸೊರಬ ಮತ್ತು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಬೂತ್ ಅಧ್ಯಕ್ಷರ ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. 

ಸಿದ್ದರಾಮಯ್ಯನವರು ಸಮಾಜವಾದಿ ಸಿದ್ದಾಂತದವರಾಗಿದ್ದರಿಂದ ಸಾಮಾನ್ಯ ಜನರ ಬದುಕಿಗೆ ಆಧಾರವಾಗಿರುವ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಾಯಿತು. ಮಾತೃ ಸ್ಥಾನದಲ್ಲಿರುವ ಮಹಿಳೆಯರನ್ನು ಸ್ಥಳೀಯ ಸಂಸ್ಥೆಗಳಲ್ಲಿ ಶೇ. 50% ಮೀಸಲಾತಿ ಕಲ್ಪಿಸುವ ಮೂಲಕ ಪುರುಷರಷ್ಟೇ ಸಮಾನ ಸ್ಥಾನ ಕಲ್ಪಿಸಿದ್ದಾರೆ. ಪ್ರಸ್ತುತ ಕಾಲಕ್ಕೆ ತಕ್ಕಂತೆ ಬದಲಾವಣೆಗಳನ್ನು ತಂದು ಸ್ಥಾನ ಮಾನಗಳನ್ನು ನೀಡಿದ ಕೀರ್ತಿ ಸಿದ್ದರಾಮಯ್ಯನವರದ್ದಾಗಿದ್ದು, ಹಸಿವು ಮುಕ್ತ ರಾಜ್ಯ ಪರಿಕಲ್ಪನೆಯ ಆಧಾರದ ಮೇಲೆ ರಾಜ್ಯದ ನಾಲ್ಕು ಕೋಟಿ ಜನರಿಗೆ ಉಚಿತ ಅಕ್ಕಿ ತಲುಪುತ್ತಿದೆ. ಮಕ್ಕಳು ಶಕ್ತಿಯುತವಾಗಿ ಬೆಳೆಯಬೇಕೆಂದು ಕ್ಷೀರಭಾಗ್ಯ ಜಾರಿಗೆ ತಂದಿದ್ದು, ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಕೊಂಡ ತಕ್ಷಣವೇ ಬಡ ಜನರು ಸಾಲದ ಹೊರೆಯಿಂದ ಮುಕ್ತರಾಗಿ ನೆಮ್ಮದಿಯ ಜೀವನ ನಡೆಸುವಂತರಾಗಬೇಕೆಂದು ವಿವಿಧ ನಿಗಮಗಳಲ್ಲಿ ಪಡೆದಿದ್ದ ಸಾಲವನ್ನು ಮನ್ನಾ ಮಾಡಿದ್ದಾರೆ. ದುಡಿಯುವ ಕೈಗೆ ಸಮಾನ ಅವಕಾಶ ನೀಡಿ ನಿಜವಾದ ಸಮಾಜವಾದ ಸಿದ್ದಾಂತದ ಅಧಿಕಾರವನ್ನು ಕಾಂಗ್ರೆಸ್ ಮಾಡಿ ತೋರಿಸಿದೆ ಎಂದರು. 

ಶಕ್ತಿಯುತ ಸಂಸ್ಕೃತಿಯನ್ನು ನಮ್ಮ ದೇಶ ಹೊಂದಿದ್ದು, ಕಾಂಗ್ರೇಸ್ ರಾಷ್ಟ್ರದ ಸಂಸ್ಕೃತಿಯನ್ನು ಪಾಲಿಸಿಕೊಂಡು ಬಂದಿದೆ. ರಾಜ್ಯಕ್ಕೆ ಹೊಸತನ ತರುವಲ್ಲಿ ಬಜೆಟ್ ಅತ್ಯಂತ ಪರಿಣಾಮಕಾರಿಯಾಗಿದ್ದು, ಸಿದ್ದರಾಮಯ್ಯನವರು ಮಂಡಿಸಿರುವ ಮುಂಗಡ ಪತ್ರದಲ್ಲಿ ಎಲ್ಲಾ ವರ್ಗದವರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು.

ಸೊರಬದಂತಹ ಹೋರಾಟದ ನೆಲದಿಂದಲೇ ಭೂಮಿ ಹಕ್ಕು ಕೊಡಿಸುವ ಕೆಲಸ ಪ್ರಾರಂಭ ಮಾಡಿದ್ದೇನೆ. ಅಧಿಕಾರಿಗಳನ್ನು ಎಚ್ಚರಿಸಿ ಸಾರ್ವಜನಿಕರ ಬಡವರ ಕೆಲಸ ಕಾರ್ಯಗಳನ್ನು ಮಾಡಿಸಿದ ತೃಪ್ತಿ ನನಗಿದೆ. ಸರ್ಕಾರದ ಸುತ್ತೋಲೆಯಂತೆ ವಾರಕ್ಕೊಮ್ಮೆ ಬಗರ್ ಹುಕುಂ ಸಮಿತಿ ಸಭೆ ಕರೆಯಬೇಕು. ಸಭೆ ನಡೆಸದ ಅಧಿಕಾರಿಗಳ ವಿರುದ್ಧ ಲಿಖಿತ ದೂರುಗಳು ಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ಚುನಾವಣೆ ಮೇಲೆ ನಾನು ನಂಬಿಕೆ ಇಟ್ಟವನಲ್ಲ. ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಟ್ಟವನಾಗಿದ್ದು, ರಾಜ್ಯದಲ್ಲಿ ಸಾವಿರಾರು ಜನರಿಗೆ ಭೂಮಿ ಕೊಡಿಸಲು ಸಾಧ್ಯವಾಯಿತು ಎಂದರು.

ಸಭೆಯಲ್ಲಿ ಜಿಲ್ಲಾಧ್ಯಕ್ಷ ತೀನಾ. ಶ್ರೀನಿವಾಸ್, ಉಪಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ, ಬ್ಲಾಕ್ ಅಧ್ಯಕ್ಷರಾದ ಜೆ. ಶಿವಾನಂದಪ್ಪ, ಚೌಟಿ ಚಂದ್ರಶೇಖರ್ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತ್ ಚಿಮಣೂರು, ತಾಲೂಕು ಮಹಿಳಾ ಅಧ್ಯಕ್ಷೆ ಸುಮಾ ಗಜಾನನ ಪ್ರಮುಖರಾದ ಸಿ.ವಿ. ರಾಜಪ್ಪ, ಯೋಗೇಶ್ವರಿ ವಿಜಯ್, ಕೆ. ಮಂಜುನಾಥ್, ಕಲ್ಲಪ್ಪ ಚಿತ್ರಟ್ಟೆಹಳ್ಳಿ, ಚಂದ್ರಭೂಪಾಲ್, ಬಾಸೂರು ಚಂದ್ರೇಗೌಡ ಮತ್ತಿತರರಿದ್ದರು. 

       

share
ವಾರ್ತಾಭಾರತಿ
ವಾರ್ತಾಭಾರತಿ
Next Story
X