Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ಯಾಂಪಸ್ ಸುನ್ನಿ ಸ್ಟೂಡೆಂಟ್ಸ್‌ನಿಂದ...

ಕ್ಯಾಂಪಸ್ ಸುನ್ನಿ ಸ್ಟೂಡೆಂಟ್ಸ್‌ನಿಂದ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ

ವಾರ್ತಾಭಾರತಿವಾರ್ತಾಭಾರತಿ18 Feb 2018 8:19 PM IST
share
ಕ್ಯಾಂಪಸ್ ಸುನ್ನಿ ಸ್ಟೂಡೆಂಟ್ಸ್‌ನಿಂದ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ

ಮಂಗಳೂರು, ಫೆ. 18: ಕ್ಯಾಂಪಸ್ ಸುನ್ನೀ ಸ್ಟೂಡೆಂಟ್ಸ್ ಬಜಾಲ್ ನಂತೂರ್ ಶಾಖೆ ವತಿಯಿಂದ ಮಾದಕ ದ್ರವ್ಯದ ವಿರುದ್ಧ ಪಡೀಲ್ ಜಂಕ್ಷನ್‌ನಿಂದ ಬಜಾಲ್ ನಂತೂರ್ ಜಂಕ್ಷನ್‌ವರೆಗೆ ಕಾಲ್ನಡಿಗೆ ಜಾಥಾ ಹಾಗೂ ಜನಜಾಗೃತಿ ಸಮಾವೇಶ ರವಿವಾರ ನಡೆಯಿತು.

ಬಜಾಲ್ ನಂತೂರ್ ಜಂಕ್ಷನ್‌ನಲ್ಲಿ ನಡೆದ ಜನಜಾಗೃತಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ನಗರದ ನ್ಯಾಷನಲ್ ಟ್ಯುಟೋರಿಯಲ್‌ನ ಪ್ರಾಂಶುಪಾಲ ಯು.ಎಚ್.ಖಾಲಿದ್ ಅವರು, ಯುವಕರು ಹಾಗೂ ವಿದ್ಯಾರ್ಥಿಗಳು ಮಾದಕ ದ್ರವ್ಯಕ್ಕೆ ಬಲಿಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿವರಿಸಿದ ಅವರು, ಇಂತಹ ದುಷ್ಚಟಗಳಿಗೆ ಬಲಿಯಾಗದಂತೆ ಮನವಿ ಮಾಡಿದರು.

ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ಸ್ಥಾಯಿ ಸಮಿತಿಯ ಅಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಮಾದಕ ದ್ರವ್ಯಗಳಿಂದ ದೂರ ಇರುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರಲ್ಲದೆ, ಈ ಬಗ್ಗೆ ಹೆತ್ತರು ಕೂಡ ತಮ್ಮ ಮಕ್ಕಳ ಬಗ್ಗೆ ಜಾಗೃತರಾಗಬೇಕೆಂದರು.

ಖಿದ್ಮತುಲ್ ಇಸ್ಲಾಂ ಖುತ್‌ಬಿಯತ್ ಸಮಿತಿಯ ಅಧ್ಯಕ್ಷ ಕೆ.ಇ.ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯ ಖತೀಬ್ ಇಲ್ಯಾಸ್ ಅಮ್ಜದಿ ಸಮಾವೇಶವನ್ನು ಉದ್ಘಾಟಿಸಿದರು. ಮಸೀದಿಯ ಪ್ರಧಾನ ಕಾರ್ಯದರ್ಶಿ ನಝೀರ್ ಬಜಾಲ್, ಬಜಾಲ್ ನಂತೂರು ಹಯಾತುಲ್ ಇಸ್ಲಾಂ ಮದ್ರಸದ ಸದರ್ ಮುಅಲ್ಲಿಂ ಅಬೂಬಕರ್ ಮುಸ್ಲಿಯಾರ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಹನೀಫ್ ಬೈಕಂಪಾಡಿ, ಎಸೆಸೆಫ್ ಮಂಗಳೂರು ವಲಯ ಪ್ರಧಾನ ಕಾರ್ಯದರ್ಶಿ ನಾಸಿರ್ ಫಾಳಿಲಿ, ಎಸೆಸೆಫ್ ಬಜಾಲ್ ನಂತೂರ್ ಶಾಖೆಯ ಅಧ್ಯಕ್ಷ ಹಾರಿಸ್, ಇಬ್ರಾಹೀಂ ತೋಟ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಪಡೀಲ್‌ನ ಮಸ್ಜಿದುರ್ರಹ್ಮಾನ್ ಸುನ್ನೀ ಜಮಾಅತ್‌ನ ಖತೀಬ್ ಅನಸ್ ಅಹ್ಸನಿ ಅವರು ಪಡೀಲ್ ಜಂಕ್ಷನ್‌ನಲ್ಲಿ ದುವಾ ನೆರವೇರಿಸಿ ಕಾಲ್ನಡಿ ಜಾಥಾಕ್ಕೆ ಚಾಲನೆ ನೀಡಿದರು.

ಎಸ್ಸೆಸ್ಸೆಫ್ ಬಜಾಲ್ ನಂತೂರು ಶಾಖೆಯ ಉಪಾಧ್ಯಕ್ಷ ಶಾಫಿ ಮಿಸ್ಬಾಹಿ ಸ್ವಾಗತಿಸಿದರು. ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಇ.ಅಲ್ಫಾಝ್ ಹಮೀದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X