Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 200 ನಕಲಿ ಕಂಪೆನಿಗಳನ್ನು ಪತ್ತೆಹಚ್ಚಿದ...

200 ನಕಲಿ ಕಂಪೆನಿಗಳನ್ನು ಪತ್ತೆಹಚ್ಚಿದ ಇಡಿ, ಐಟಿ ಇಲಾಖೆ!

ಪಿಎನ್‌ಬಿ ವಂಚನೆ

ವಾರ್ತಾಭಾರತಿವಾರ್ತಾಭಾರತಿ18 Feb 2018 8:20 PM IST
share
200 ನಕಲಿ ಕಂಪೆನಿಗಳನ್ನು ಪತ್ತೆಹಚ್ಚಿದ ಇಡಿ, ಐಟಿ ಇಲಾಖೆ!

ಹೊಸದಿಲ್ಲಿ,ಫೆ.18: ವಜ್ರ ವ್ಯಾಪಾರಿ ನೀರವ್ ಮೋದಿ, ಆತನ ಸಂಬಂಧಿಗಳು, ಉದ್ಯಮ ಪಾಲುದಾರ ಮೇಹುಲ್ ಚೋಸ್ಕಿ ಮತ್ತು ಇತರರು ಭಾಗಿಯಾಗಿರುವ 11,400 ಕೋ.ರೂ.ಗಳ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ) ವಂಚನೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮತ್ತು ಆದಾಯ ತೆರಿಗೆ ಇಲಾಖೆ ಕನಿಷ್ಠ 200 ನಕಲಿ ಕಂಪನಿಗಳು ಮತ್ತು ಬೇನಾಮಿ ಆಸ್ತಿಗಳನ್ನು ತೀವ್ರ ಪರಿಶೀಲನೆ ಗೊಳಪಡಿಸಿವೆ.

ನಾಲ್ಕನೆಯ ದಿನವಾದ ರವಿವಾರವೂ ಮೋದಿ, ಚೋಸ್ಕಿ ಮತ್ತು ಅವರ ಕಂಪನಿಗಳ ವಿರುದ್ಧ ತನ್ನ ಶೋಧ ಕಾರ್ಯಾಚರಣೆಗಳನ್ನು ಮುಂದುವರಿಸಿದ ಇಡಿ, ಅಕ್ರಮ ಹಣ ವಹಿವಾಟು ತಡೆ ಕಾಯ್ದೆ(ಪಿಎಂಎಲ್‌ಎ)ಯಡಿ ಕನಿಷ್ಠ ಎರಡು ಡಝನ್ ಸ್ಥಿರಾಸ್ತಿಗಳ ಜಪ್ತಿಗೆ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಇಡಿ ರವಿವಾರ ಚಿನ್ನಾಭರಣ ಮಳಿಗೆಗಳು ಮತ್ತು ಕಾರ್ಯಗಾರಗಳು ಸೇರಿದಂತೆ ದೇಶಾದ್ಯಂತ ಕನಿಷ್ಠ 45 ಸ್ಥಳಗಳಲ್ಲಿ ದಾಳಿಗಳನ್ನು ನಡೆಸಿದೆ.

ಆರೋಪಿಗಳಿಗೆ ಸೇರಿದ 29 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆಯು ತಾತ್ಕಾಲಿಕವಾಗಿ ಸ್ವಾಧೀನಪಡಿಸಿಕೊಂಡಿದ್ದು, ಇಡಿ ಪಿಎಂಎಲ್‌ಎ ಅಡಿ ಅವುಗಳ ಪರಿಶೀಲನೆಯನ್ನು ಕೈಗೊಂಡಿದೆ. ಈ ಕಾಯ್ದೆಯಡಿ ಶೀಘ್ರವೇ ಇನ್ನಷ್ಟು ಆಸ್ತಿಗಳನ್ನು ಜಪ್ತಿ ಮಾಡಲಾಗುವುದು ಎಂದು ತಿಳಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಯೋರ್ವರು, ಈ ಬೃಹತ್ ವಂಚನೆಯ ಭಾಗವಾಗಿ ಹಣವನ್ನು ಸ್ವೀಕರಿಸಲು ಬಳಕೆಯಾಗುತ್ತಿದ್ದ ದೇಶದಲ್ಲಿಯ ಮತ್ತು ವಿದೇಶಗಳಲ್ಲಿಯ ಸುಮಾರು 200 ನಕಲಿ ಕಂಪನಿಗಳನ್ನು ಇಡಿ ಮತ್ತು ಐಟಿ ಇಲಾಖೆ ಪತ್ತೆ ಹಚ್ಚಿವೆ ಎಂದರು.

ಅಕ್ರಮ ಹಣದ ವಹಿವಾಟಿಗಾಗಿ ಮತ್ತು ಭೂಮಿ, ಚಿನ್ನ ಹಾಗೂ ಬೆಲೆಬಾಳುವ ಹರಳುಗಳ ರೂಪದಲ್ಲಿ ಬೇನಾಮಿ ಆಸ್ತಿಗಳನ್ನು ಸೃಷ್ಟಿಸಲು ಈ ನಕಲಿ ಕಂಪನಿಗಳ ಬಳಕೆಯಾಗುತ್ತಿತ್ತು ಎಂದು ಶಂಕಿಸಲಾಗಿದ್ದು, ಅದೀಗ ಆದಾಯ ತೆರಿಗೆ ಇಲಾಖೆಯ ತನಿಖೆಯಲ್ಲಿದೆ.

ಪ್ರಕರಣದ ತನಿಖೆಗಾಗಿ ಇಡಿ ಮತ್ತು ಐಟಿ ಇಲಾಖೆ ವಿಶೇಷ ತಂಡಗಳನ್ನು ರಚಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಈವರೆಗೆ 5,674 ಕೋ.ರೂ.ವೌಲ್ಯದ ವಜ್ರಗಳು, ಚಿನ್ನಾಭರಣಗಳು ಮತ್ತು ಇತರ ಅಮೂಲ್ಯ ಹರಳುಗಳನ್ನು ವಶಪಡಿಸಿಕೊಂಡಿದೆ.

 ಐಟಿ ಇಲಾಖೆಯು ಶನಿವಾರ ತೆರಿಗೆ ವಂಚನೆ ತನಿಖೆಗೆ ಸಂಬಂಧಿಸಿದಂತೆ ಗೀತಾಂಜಲಿ ಜೆಮ್ಸ್, ಅದರ ಪ್ರವರ್ತಕ ಚೋಸ್ಕಿ ಮತ್ತು ಇತರರಿಗೆ ಸೇರಿದ ಒಂಭತ್ತು ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿದೆ. ಮೋದಿ, ಆತನ ಕುಟುಂಬ ಸದಸ್ಯರು ಮತ್ತು ಕಂಪನಿಗಳಿಗೆ ಸೇರಿದ 29 ಆಸ್ತಿಗಳು ಮತ್ತು 105 ಬ್ಯಾಂಕ್ ಖಾತೆಗಳನ್ನೂ ಅದು ಜಪ್ತಿ ಮಾಡಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X