Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯೋಧರಿಗಿಂತ ಪೌರಕಾರ್ಮಿಕರ ಸಾವಿನ ಸಂಖ್ಯೆ...

ಯೋಧರಿಗಿಂತ ಪೌರಕಾರ್ಮಿಕರ ಸಾವಿನ ಸಂಖ್ಯೆ ಹೆಚ್ಚಳ: ನಾಗೇಶ್ ಹೆಗಡೆ

ವಾರ್ತಾಭಾರತಿವಾರ್ತಾಭಾರತಿ18 Feb 2018 10:23 PM IST
share

ಬೆಂಗಳೂರು, ಫೆ.18: ಗಡಿಯಲ್ಲಿ ಯೋಧರು ಸಾಯುವುದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪೌರಕಾರ್ಮಿಕರು ನಗರಗಳಲ್ಲಿರುವ ಚರಂಡಿಯಲ್ಲಿ ವಿಷ ಅನಿಲಕ್ಕೆ ಸಿಲುಕಿ ಸಾಯುತ್ತಿದ್ದಾರೆ. ಈ ಸಾವಿಗೆ ಕಾರಣವಾಗುವ ವಿಷ ಅನಿಲವನ್ನು ಪತ್ತೆ ಮಾಡುವಂತಹ ಸಣ್ಣ ಉಪಕರಣವನ್ನು ಪೌರಕಾರ್ಮಿಕರಿಗೆ ಒದಗಿಸಲು ಯಾರು ಮುಂದಾಗುತ್ತಿಲ್ಲವೆಂದು ಹಿರಿಯ ಪತ್ರಕರ್ತ ನಾಗೇಶ್ ಹೆಗಡೆ ವಿಷಾಧಿಸಿದರು.

ರವಿವಾರ ದೇವಗೀತಂ ಚಾರಿಟಬಲ್ ಟ್ರಸ್ಟ್ ನಗರದ ವಾಡಿಯಾ ಸಭಾಂಗಣದಲ್ಲಿ ಆಯೋಜಿಸಿದ್ದ ಹಿರಿಯ ಪತ್ರಕರ್ತ ನಾರಾಯಣ ದತ್ತ ಸ್ಮಾರಕ ಉಪನ್ಯಾಸ ಪ್ರಯುಕ್ತ ‘ವಿಜ್ಞಾನ ದೀಪದರ್ಶನ ಯಾರಿಂದ ಎಷ್ಟೆಷ್ಟು’ ವಿಷಯದ ಕುರಿತು ಅವರು ಮಾತನಾಡಿದರು.

ಭಾರತ ವಿಜ್ಞಾನ- ತಂತ್ರಜ್ಞಾನದಲ್ಲಿ ಮುಂಚೂಣಿಯತ್ತ ದಾಪುಗಾಲಿಡುತ್ತಿದೆ. ವಿಶ್ವವೆ ಬೆರಗಾಗಿ ನೋಡುವಂತೆ ಅತ್ಯಂತ ಕಡಿಮೆ ದರದಲ್ಲಿ ಮಂಗಳಗ್ರಹಕ್ಕೆ ವ್ಯೋಮ ನೌಕೆಯನ್ನು ಹಾರಿಸಿದ್ದೇವೆ.ಆ ನೌಕೆಯಲ್ಲಿ ಅಳವಡಿಸಿರುವ ತಂತ್ರಜ್ಞಾವು ನೌಕೆಯಿಂದ 40ಸಾವಿರ ದೂರದಲ್ಲಿರುವ ಮಂಗಳ ಗ್ರಹದಲ್ಲಿ ಏನೆಲ್ಲ ಇದೆ ಎಂಬುದನ್ನು ಶೋಧಿಸಲಾಗುತ್ತದೆ. ಇಷ್ಟೆಲ್ಲ ತಂತ್ರಜ್ಞಾನ ನಮ್ಮಲ್ಲಿ ಇರುವಾಗ ಪೌರಕಾರ್ಮಿಕರ ಕೆಲಸಕ್ಕೆ ಅನುಕೂಲವಾಗುಂತಹ ತಂತ್ರಜ್ಞಾನ ತಯಾರಿಸಿ ಅವರ ಕೈಗೆ ಇಡುತ್ತಿಲ್ಲವೆಂದು ಅವರು ಬೇಸರ ವ್ಯಕ್ತಪಡಿಸಿದರು.

ಇವತ್ತಿನ ತಂತ್ರಜ್ಞಾನ ಕ್ಷೇತ್ರವನ್ನು ಬಂಡವಾಳಶಾಹಿಗಳು ಆವರಿಸಿಕೊಂಡಿದ್ದಾರೆ. ತಮ್ಮ ಉತ್ಪನ್ನಗಳ ಉತ್ಪಾದನೆ ಹಾಗೂ ಪ್ರಚಾರಕ್ಕೆ ಅನುಕೂಲವಾಗುವಷ್ಟಕ್ಕೆ ಮಾತ್ರ ವಿಜ್ಞಾನ-ತಂತ್ರಜ್ಞಾನ ಸೀಮಿತಗೊಳಿಸಲಾಗಿದೆ. ಇವತ್ತಿನ ಬಹುತೇಕ ಮಂದಿ ವಿಜ್ಞಾನಿಗಳು-ತಂತ್ರಜ್ಞರು ಬಂಡವಾಳಶಾಹಿಗಳ ಚಿಂತನೆಗಳ ಚೌಕಟ್ಟನ್ನು ಮೀರಿ ಚಿಂತಿಸುತ್ತಿಲ್ಲ. ಇಂತಹ ವ್ಯವಸ್ಥೆ ಬದಲಾಗಲೇಬೇಕಾಗಿದೆ ಎಂದು ಅವರು ಆಶಿಸಿದರು.

ಅಮೇರಿಕಾ, ರಶ್ಯಾ, ದಕ್ಷಿಣ ಕೋರಿಯಾ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳು ವಿಜ್ಞಾನ ಕ್ಷೇತ್ರಕ್ಕೆ ಶೇ.3ಕ್ಕಿಂತ ಹೆಚ್ಚು ಅನುದಾನ ನೀಡುತ್ತಿವೆ. ಆದರೆ, ಭಾರತದಲ್ಲಿ ಶೇ.0.8ರಷ್ಟು ಅನುದಾನ ನೀಡಲಾಗುತ್ತಿದೆ. ಈ ಅನುದಾನ ಹೆಚ್ಚಳ ಆಗುವ ನಿಟ್ಟಿನಲ್ಲಿ ಸಾರ್ವಜನಿಕರು ಸರಕಾರದ ಮೇಲೆ ಒತ್ತಡ ತರಬೇಕಾಗಿದೆ ಎಂದು ಅವರು ಹೇಳಿದರು.

ಇವತ್ತಿನ ದಿನನಿತ್ಯದ ಬದುಕಿಗೆ ಅಗತ್ಯವಾದ ಸಾಮಾಗ್ರಿಗಳಿಂದ ಹಿಡಿದು ದೇಶದ ಅಭಿವೃದ್ಧಿಗೆ ಉಪಯುಕ್ತವಾದ ಉಪಕರಣಗಳನ್ನು ತಯಾರಿಸಲು ವಿಜ್ಞಾನದ ಅವಿಷ್ಕಾರಗಳು ಅಗತ್ಯವಾಗಿದೆ. ಆದರೆ, ಅದಕ್ಕೆ ಬೇಕಾದ ಮಾನವ ಸಂಪನ್ಮೂಲ ಕೊರತೆಯಿದೆ. ಹೀಗಾಗಿ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದತ್ತ ಹೆಚ್ಚು ಗಮನ ವಹಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಲೇಖಕ ಡಾ.ಜೆ.ಭಾಸ್ಕರ ಮಯ್ಯ ಅನುವಾದಿಸಿರುವ ‘ಮಾರ್ಗದರ್ಶಕ ಆಚಾರ್ಯ ಸಂಪಾದಕ ಶ್ರೀ ನಾರಾಯಣ ದತ್ತ’ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಪ್ರೊ.ಪಿ.ಶ್ರೀಪತಿ ತಂತ್ರಿ, ಅಭಿನವ ಪ್ರಕಾಶನದ ರವಿಕುಮಾರ್ ಮತ್ತಿತರರಿದ್ದರು.

ಇವತ್ತು ಮಹಾದಾಯಿ ನೀರಿಗಾಗಿ ಅಲ್ಲಿನ ಜನತೆ ವರ್ಷಾನುಗಟ್ಟಲೆ ಹೋರಾಟ ಮಾಡುತ್ತಿದ್ದಾರೆ. ಅಂತಹ ಹೋರಾಟಗಳನ್ನು ನಾನು ಬೆಂಬಲಿಸುತ್ತಲೆ ಹೇಳುವುದಾದರೆ, ಹುಬ್ಬಳಿ ಸಮೀಪವೆ ಪೆಪ್ಸಿ ಕಂಪೆನಿ ಇದ್ದು, ಇದು ಪ್ರತಿ ದಿನಕ್ಕೆ ಬಳಸುವ ನೀರು 16ಸಾವಿರ ಮನೆಗಳಿಗೆ ದಿನನಿತ್ಯ ಉಪಯುಕ್ತ ಬರುತ್ತದೆ. ಇದರತ್ತ ಯಾರು ಗಮನಿಸುವುದಿಲ್ಲ. ಹಾಗೆಯೆ ಅಲ್ಲಿನ ಸುತ್ತಮುತ್ತಲಿನ ಕೆರೆಗಳನ್ನು ಪುನರ್‌ಶ್ಚೇತನಗೊಳಿಸುವುದು ಹಾಗೂ ನಾವು ಬಳಸಿದ ನೀರನ್ನು ಪುನರ್ ಸಂಸ್ಕರಣೆ ಮಾಡಿ ಬಳಸುವಂತಹ ಕಾರ್ಯಕ್ಕೆ ಮುಂದಾಗಬೇಕಾಗಿದೆ.
ನಾಗೇಶ್ ಹೆಗಡೆ, ವಿಜ್ಞಾನ ಬರಹಗಾರರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X