Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತ ಮುಖಂಡ ಪುಟ್ಟಣ್ಣಯ್ಯ ನೆನಪು...

ರೈತ ಮುಖಂಡ ಪುಟ್ಟಣ್ಣಯ್ಯ ನೆನಪು ಚಿರಸ್ಥಾಯಿಯಾಗಿ ಉಳಿಸಲು ಶಾಸಕರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 Feb 2018 7:48 PM IST
share
ರೈತ ಮುಖಂಡ ಪುಟ್ಟಣ್ಣಯ್ಯ ನೆನಪು ಚಿರಸ್ಥಾಯಿಯಾಗಿ ಉಳಿಸಲು ಶಾಸಕರ ಆಗ್ರಹ

ಬೆಂಗಳೂರು, ಫೆ. 19: ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರದ ಶಾಸಕ ಹಾಗೂ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನೆನಪು ಚಿರಸ್ಥಾಯಿಯಾಗಿ ಉಳಿಸಲು ರಾಜ್ಯ ಸರಕಾರ ಕ್ರಮ ವಹಿಸಬೇಕೆಂದು ಆಡಳಿತ ಮತ್ತು ವಿಪಕ್ಷ ಸದಸ್ಯರು ಪಕ್ಷಭೇದ ಮರೆತು ಆಗ್ರಹಿಸಿದರು.

ಸೋಮವಾರ ವಿಧಾನಸಭೆ ಕಲಾಪ ಸಮಾವೇಶಗೊಳ್ಳುತ್ತಿದ್ದಂತೆ ಸ್ಪೀಕರ್ ಕೆ.ಬಿ. ಕೋಳಿವಾಡ ಸಂತಾಪ ಸೂಚನೆ ನಿರ್ಣಯ ಮಂಡಿಸಿದರು. ನಿರ್ಣಯ ಬೆಂಬಲಿಸಿ ಮಾತನಾಡಿದ ಜೆಡಿಎಸ್ ಉಪನಾಯಕ ವೈ.ಎಸ್.ವಿ.ದತ್ತ, ‘ನನ್ನ ಮತ್ತು ಪುಟ್ಟಣ್ಣಯ್ಯ ಅವರ ಒಡನಾಟ ಸುಮಾರು 35 ವರ್ಷಗಳದ್ದು, 80ರ ದಶಕದಲ್ಲಿ ರೈತ ಚಳವಳಿ, ಗೋಕಾಕ್ ಚಳವಳಿಗಳು ಅತ್ಯಂತ ಸದೃಢವಾಗಿದ್ದವು. ಆಗಿನ ಕಾಲಕ್ಕೆ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಮತ್ತು ಎನ್.ಡಿ.ಸುಂದರೇಶ್ ಒಂದು ಕರೆ ನೀಡಿದರೆ ಲಕ್ಷಾಂತರ ರೈತರು ಚಳವಳಿಯಲ್ಲಿ ಭಾಗವಹಿಸುತ್ತಿದ್ದರು. ‘ರೈತರು ಬಂದರು ದಾರಿ ಬಿಡಿ. ರೈತರ ಕೈಗೆ ರಾಜ್ಯ ಕೊಡಿ’ ಎಂಬ ಘೋಷಣೆಗಳು ಮೊಳಗಿದ್ದವು.

ಒಂದು ಸರಕಾರವನ್ನು ಬದಲಿಸುವ ಶಕ್ತಿ ರೈತ ಚಳವಳಿಗಿತ್ತು. ಪುಟ್ಟಣ್ಣಯ್ಯ ಸಮಸ್ಯೆಗಳ ಆಳಕ್ಕಿಳಿದು ಪರಿಹಾರ ಕಂಡು ಹಿಡಿಯುತ್ತಿದ್ದರು. 1994ರಲ್ಲಿ ಪುಟ್ಟಣ್ಣಯ್ಯ ಮತ್ತು ನಂಜುಂಡಸ್ವಾಮಿ ಹಸಿರು ಶಾಲು ಹೊದ್ದು ಈ ಸದನದ ಕಲಾಪದಲ್ಲಿ ಭಾಗವಹಿಸಿದ್ದನ್ನು ನೋಡಿದ್ದೇನೆ. ಅವರ ಮಾತು ಕೇಳುವಾಗ ಇಡೀ ಸದನ ಗಂಭೀರವಾಗಿ ಆಲಿಸುತ್ತಿತ್ತು ಎಂದು ನೆನಪು ಮಾಡಿಕೊಂಡರು.

ಕಾವೇರಿ ವಿಷಯದಲ್ಲಿ ಪುಟ್ಟಣ್ಣಯ್ಯ ಅವರದುಭಾವನಾತ್ಮಕ ಸಂಬಂಧ. ಅದಕ್ಕಾಗಿ ಅವರು ಕೇರಳ, ಕರ್ನಾಟಕ, ತಮಿಳುನಾಡು ಸೇರಿ ‘ಕಾವೇರಿ ಕುಟುಂಬಂ’ ಎಂಬ ರೈತರ ಸಂಘಟನೆ ಸ್ಥಾಪಿಸಿದರು. ನದಿ ನೀರಿನ ಹಂಚಿಕೆ ವಿಷಯದಲ್ಲಿ ನಾಲ್ಕು ರಾಜ್ಯಗಳ ರೈತರೇ ಸಮಸ್ಯೆಯನ್ನು ಮಾತುಕತೆ ಮೂಲಕ ಇತ್ಯರ್ಥಗೊಳಿಸಿಕೊಳ್ಳಬೇಕೆಂಬ ಇಚ್ಛೆ ಹೊಂದಿದ್ದರು ಎಂದು ಸ್ಮರಿಸಿದರು.

ಪುಟ್ಟಣ್ಣಯ್ಯ ಹಳ್ಳಿಗಾಡಿನ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದರು. ‘ಕಬಡ್ಡಿ’ ಎಂದರೆ ಅವರಿಗೆ ಅಚ್ಚುಮೆಚ್ಚು. ನಿನ್ನೆ ಕಬಡ್ಡಿ ಆಟ ನೋಡುತ್ತಿರುವಾಗಲೇ ಹೃದಯಾಘಾತವಾಗಿ ಪ್ರಾಣ ಬಿಟ್ಟಿದ್ದಾರೆಂದರು. ಚಳವಳಿಯನ್ನು ಹೆಸರಿಸುವುದಾದರೆ ಅದರಲ್ಲಿ ನಂಜುಂಡಸ್ವಾಮಿ, ಸುಂದರೇಶ್ ಮತ್ತು ಪುಟ್ಟಣ್ಣಯ್ಯ ಅವರ ಹೆಸರುಗಳು ಚಾರಿತ್ರಿಕ ಎಂದರು.

ಕೇವಲ ಸಂತಾಪ ಸೂಚನೆಗಷ್ಟೇ ಈ ಸದನ ಪುಟ್ಟಣ್ಣಯ್ಯ ಅವರನ್ನು ಸೀಮಿತ ಮಾಡದೆ, ಅವರು ನೆನಪು ರಾಜ್ಯದ ರೈತರಲ್ಲಿ ಶಾಶ್ವತವಾಗಿ ಉಳಿಸಲು ರೈತಪರ ಯೋಜನೆಯೊಂದನ್ನು ರೂಪಿಸಬೇಕು ಎಂದು ವೈಎಸ್‌ವಿ ದತ್ತ ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಇದಕ್ಕೆ ಧ್ವನಿಗೂಡಿಸಿದ ಆಡಳಿತ ಪಕ್ಷದ ಸದಸ್ಯ ಶಿವಮೂರ್ತಿ, ವಿದೇಶಿ ಪ್ರವಾಸ ಮಾಡಿ ಅಲ್ಲಿ ಅಧ್ಯಯನ ನಡೆಸಿ ಅಲ್ಲಿನ ವೈಜ್ಞಾನಿಕ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿಯೂ ಅಳವಡಿಸಿಕೊಳ್ಳಬೇಕೆಂದು ಸರಕಾರಕ್ಕೆ ಸಲಹೆ-ಸೂಚನೆಗಳನ್ನು ನೀಡುತ್ತಿದ್ದರು. ಹೀಗಾಗಿ ಸರಕಾರ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಬೇಕೆಂದು ಕೋರಿದರು.

ಇನ್ನೂ ಇರಬೇಕಿತ್ತು: ಕೃಷಿ-ರೈತರು ಬಿಕ್ಕಟ್ಟಿನಲ್ಲಿರುವ ಸಂದಿಗ್ಧ ಸಂದರ್ಭದಲ್ಲಿ, ಬಂಡವಾಳಶಾಹಿಗಳ ಅಕ್ರಮ ಮತ್ತು ದಲ್ಲಾಳಿಗಳ ಶೋಷಣೆ ಸಂಕಷ್ಟದ ಸ್ಥಿತಿಯಲ್ಲಿ ರೈತ ಧ್ವನಿಯೊಂದು ಇಲ್ಲದಿರುವುದು ರೈತರ ಸಂಕುಲಕ್ಕೆ ಅಪಾರ ನಷ್ಟವಾಗಿದೆ. ಪುಟ್ಟಣ್ಣಯ್ಯ ಸದಾ ರೈತರು ಮತ್ತು ಅಸಂಘಟಿತ ಕಾರ್ಮಿಕರ ಧ್ವನಿಯಾಗಿದ್ದರು ಎಂದು ಕೆಜೆಪಿ ಸದಸ್ಯ ಬಿ.ಆರ್.ಪಾಟೀಲ್ ಸ್ಮರಿಸಿದರು.

ಆಸನ ಖಾಲಿ ಇರಿಸಿ: ‘ನನ್ನ ಗುರುವಾಗಿದ್ದ ರೈತರ ನಾಯಕ ಪುಟ್ಟಣ್ಣಯ್ಯ ನನ್ನ ಮುಂದಿನ ಆಸನದಲ್ಲಿ ಕೂರುತ್ತಿದ್ದರು. ನನ್ನ ಪಕ್ಕದ ಆಸನದಲ್ಲಿ ಜೆಡಿಎಸ್ ಸದಸ್ಯ ಚಿಕ್ಕಮಾದು ಕೂರುತ್ತಿದ್ದರು. ಇಬ್ಬರು ನನ್ನೊಂದಿಗೆ ಇಲ್ಲ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ, ಈ ಎರಡು ಆಸನ ಖಾಲಿ ಇರಿಸಿ’ ಎಂದು ಕನ್ನಡ ಮಕ್ಕಳ ಪಕ್ಷದ ಸದಸ್ಯ ಅಶೋಕ್ ಖೇಣಿ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X