Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಎಸ್ಸೆನ್ನೆಲ್ ಗುತ್ತಿಗೆ ನೌಕರರ...

ಬಿಎಸ್ಸೆನ್ನೆಲ್ ಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ19 Feb 2018 8:28 PM IST
share
ಬಿಎಸ್ಸೆನ್ನೆಲ್ ಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

ಮಂಗಳೂರು, ಫೆ. 19: ಕರ್ನಾಟಕ ರಾಜ್ಯ ಬಿಎಸ್ಸೆನ್ನೆಲ್ ನಾನ್ ಪರ್ಮನೆಂಟ್ ವರ್ಕರ್ಸ್ ಯೂನಿಯನ್ (ಸಿಐಟಿಯು) ನೇತೃತ್ವದಲ್ಲಿ ಬಿಎಸ್ಸೆನ್ನೆಲ್ ಪ್ರಧಾನ ಕಚೇರಿ ಮುಂದೆ ಸೋಮವಾರ ಪ್ರತಿಭಟನಾ ಪ್ರದರ್ಶನ ನಡೆಯಿತು.

ಪ್ರತಿಭಟನಾಗಾರರನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಕಾರ್ಮಿಕರ ಜೀವನ ನಿರ್ವಹಣೆ ಮಾಡಲು ಮಾಸಿಕ ರೂ.18,000 ಕನಿಷ್ಠ ವೇತನ ನಿಗದಿಪಡಿಸಬೇಕು, ಇಎಸ್‌ಐ ಮತ್ತು ಪಿಎಫ್ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು. ಕಾರ್ಮಿಕರ ದಿನನಿತ್ಯದ ಬವಣೆಗಳು ಇಂದು ಚರ್ಚೆಯಾಗಬೇಕಿತ್ತು. ಅದು ಆಗುತ್ತಿಲ್ಲ. ಆದುದರಿಂದ ಇಂದು ಕಾರ್ಮಿಕರು ಹಲವಾರು ಸಮಸ್ಯೆಗಳಲ್ಲಿ ಮುಳುಗುವಂತಾಗಿದೆ. ಕಾರ್ಮಿಕರ ಈ ಎಲ್ಲಾ ಬೇಡಿಕೆಗಳನ್ನು ರಾಜಕೀಯವಾಗಿ ವಿಮರ್ಶೆ ಮಾಡಲು ಸಾಧ್ಯವಾಗಬೇಕು ಎಂದು ಅವರು ಹೇಳಿದರು.

ಜಿಲ್ಲಾ ಉಪಾಧ್ಯಕ್ಷರಾದ ವಸಂತ ಆಚಾರಿ ಮಾತನಾಡಿ, ಕನಿಷ್ಠ ಕೂಲಿಯನ್ನು ಏರಿಕೆ ಮಾಡಬೇಕಾದ ಸರಕಾರ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಕಾನೂನು ಪ್ರಕಾರ ನೀಡಬೇಕಾದ ಸೌಲಭ್ಯಗಳನ್ನು ಜಾರಿ ಮಾಡುವಲ್ಲಿ ಕಾರ್ಮಿಕ ಇಲಾಖೆಗಳು ಕೂಡಾ ಮೌನ ವಹಿಸುತ್ತಿವೆ. ಆದುದರಿಂದ ಕಾರ್ಮಿಕರು ಹೋರಾಟದ ದಾರಿ ಹಿಡಿಯುವುದು ಅನಿವಾರ್ಯವಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಿಎಸ್ಸೆನ್ನೆಲ್ ಕಾರ್ಮಿಕರ ಮುಂದಾಳು ಬಾಲಕೃಷ್ಣ, ಗುತ್ತಿಗೆ ಕಾರ್ಮಿಕರ ಬೇಡಿಕೆಗಳನ್ನು ವಿವರಿಸಿದರು. ಬೇಡಿಕೆಗಳ ಮನವಿಯನ್ನು ಬಿಎಸ್ಸೆನ್ನೆಲ್ ಸಂಸ್ಥೆಯ ಜನರಲ್ ಮೆನೇಜರ್ ಪರವಾಗಿ ಬಿ.ಜಿ.ಎಂ. ಸುರೇಶ್ ಸ್ವೀಕರಿಸಿದರು. ಅಲ್ಲಿಂದ ಮೆರವಣಿಗೆ ಹೊರಟು ಕೇಂದ್ರ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಮುಂದುಗಡೆ ಪ್ರತಿಭಟನಾ ಪ್ರದರ್ಶನ ಮಾಡಿ ಮನವಿಯನ್ನು ನೀಡಲಾಯಿತು.

ಪ್ರತಿಭಟನಾ ಪ್ರದರ್ಶನದ ನೇತೃತ್ವವನ್ನು ಯೂನಿಯನ್ ಅಧ್ಯಕ್ಷ ವಸಂತ ಆಚಾರಿ, ಉದಯ ಕುಮಾರ್, ಮೋಹನ್ ಉಡುಪಿ, ನಿತ್ಯಾನಂದ ಸುಳ್ಯ, ದೇಪ್ರಸಾದ್ ಸುಳ್ಯ, ಸೀನಪ್ಪಪುತ್ತೂರು, ದಿನೇಶ್ ಬೆಳ್ತಂಗಡಿ, ಸುನಿಲ್, ಹನೀಫ್ ಬಂಟ್ವಾಳ, ರಮೇಶ್ ಮಂಗಳೂರು ಅವರು ವಹಿಸಿದ್ದರು.
ಉದಯಕುಮಾರ್ ಸ್ವಾಗತಿಸಿದರು. ನಿತ್ಯಾನಂದ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X