ಬೆಂಗಳೂರು: ಮೋದಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ನೀರವ್ ಮೋದಿ ಬಗ್ಗೆ ಪ್ರಧಾನಿ ಮೌನಕ್ಕೆ ಆಕ್ರೋಶ
ಬೆಂಗಳೂರು, ಫೆ.20: ಕನ್ನಡ ಭಾಷೆಗೆ ಸಂಬಂಧಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ ಅನಂತ್ ಕುಮಾರ ಹೆಗಡೆ ಹಾಗೂ ದೇಶ ಬಿಟ್ಟು ಪರಾರಿಯಾದ ನೀರವ್ ಮೋದಿ 11,400 ಕೋ.ರೂ. ಹಗರಣದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದನ್ನು ಖಂಡಿಸಿ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಮಾಹಿತಿ ತಂತ್ರಜ್ಞಾನ ವಿಭಾಗದ ವತಿಯಿಂದ ಇಂದು ನಗರದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಕ.ವಿ.ಕಾ. ಅಧ್ಯಕ್ಷ ಎಸ್.ಮನೋಹರ್, ಬೆಂಗಳೂರು ನಗರ ಜಿಲ್ಲಾ ಕೇಂದ್ರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಜನಾರ್ದನ ಮತ್ತು ಕೆಪಿಸಿಸಿ ವಕ್ತಾರ ಸಲೀಂ, ಕೆಪಿಸಿಸಿ ಮಾಹಿತಿ ತಂತ್ರಜ್ಞಾನ ವಿಭಾಗದ ಅಧ್ಯಕ್ಷ ನಿರಂಜನ್ ರಾವ್ ಮತ್ತು ಕಾಂಗ್ರೆಸ್ ಮುಖಂಡರಾದ ಶೇಖರ್, ಹೇಮರಾಜು, ಆದಿತ್ಯ, ಆನಂದ್, ಎಂ.ಬಾಬು, ಸಂಪತ್ ನಾಯಕ್, ಮಹಿಳಾ ಕಾಂಗ್ರೆಸ್ ಪಕ್ಷದ ರಚನಾ, ಆಶಾ ಮತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
Next Story