Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 180 ಕ್ಕೂ ಅಧಿಕ ರೌಡಿಶೀಟರ್ ಪ್ರಕರಣಗಳು...

180 ಕ್ಕೂ ಅಧಿಕ ರೌಡಿಶೀಟರ್ ಪ್ರಕರಣಗಳು ದಾಖಲು ಮಾಡಿರುವುದು ಅಪಾಯಕಾರಿ ಬೆಳವಣಿಗೆ: ಮನೋಹರ್

ವಾರ್ತಾಭಾರತಿವಾರ್ತಾಭಾರತಿ21 Feb 2018 9:11 PM IST
share
180 ಕ್ಕೂ ಅಧಿಕ ರೌಡಿಶೀಟರ್ ಪ್ರಕರಣಗಳು ದಾಖಲು ಮಾಡಿರುವುದು ಅಪಾಯಕಾರಿ ಬೆಳವಣಿಗೆ: ಮನೋಹರ್

ಬಾಗೇಪಲ್ಲಿ,ಫೆ.21: ಶಾಸಕ ಎಸ್.ಎನ್.ಸುಬ್ಬಾರೆಡ್ಡಿಯ ಅವದಿಯಲ್ಲಿ ತಾಲೂಕಿನಲ್ಲಿ 180 ಕ್ಕೂ ಅಧಿಕ ರೌಡಿಶೀಟರ್ ಪ್ರಕರಣಗಳು ದಾಖಲು ಮಾಡಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ವಿಧಾನ ಪರಿಷತ್ ಸದಸ್ಯ ಡಾ ಸಿ.ಆರ್.ಮನೋಹರ್ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗೇಪಲ್ಲಿ ತಾಲೂಕಿನಲ್ಲಿ ಯಾರೂ ಆಯುಧಗಳನ್ನು ಹಿಡಿದು ಓಡಾಡುತ್ತಿಲ್ಲ, ಅಮಾಯಕರ ಮೇಲೆ, ಶಾಸಕರ ವಿರುದ್ದ ಮಾತನಾಡುವ ಹೋರಾಟಗಾರರ ದಲಿತರ ಮೇಲೆ ಶಾಸಕರು ಪೊಲೀಸರನ್ನು ಬಳಸಿಕೊಂಡು ರೌಡಿಶೀಟರ್ ತೆರೆದಿದ್ದಾರೆ. ಅವರ ಮುಂದಿನ ಭವಿಷ್ಯ ಏನಾಗಬೇಕೆಂದು ಶಾಸಕರು ಇಷ್ಟೊಂದು ಕೀಳು ಮಟ್ಟಕ್ಕೆ ಇಳಿದಿದ್ದಾರೆ. ತಾಲೂಕಿನ ಇತಿಹಾಸದಲ್ಲೇ ಇಷ್ಟೊಂದು ರೌಡಿಶೀಟರ್ ಪ್ರಕರಣ ದಾಖಲು ಮಾಡಿಸಿರುವುದು ಇದೇ ಮೊದಲ ಬಾರಿ. ನಾನು 11 ತಾಲೂಕಿನ ಜನರ ಸೇವಕನಾಗಿದ್ದೇನೆ. ನನಗೆ ಈ ತಾಲೂಕಿನ ಯಾವುದೇ ಸರ್ಕಾರಿ ಕಾರ್ಯಕ್ರಮಕ್ಕೆ ಅಧಿಕಾರಿಗಳು ಮಾಹಿತಿ ನೀಡುವುದಿಲ್ಲ. ಶಾಸಕರು ಅಧಿಕಾರಿಗಳನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡು ಸರ್ವಾಧಿಕಾರಿ ದೋರಣೆ ಅನುಸರಿಸುತ್ತಿದ್ದಾರೆ ಎಂದರು.

ಶಾಸಕರು ಎಲ್ಲಿ ನೋಡಿದರೂ 1200 ಕೋಟಿರೂಗಳ ಅನುದಾನ ತಂದು ಕ್ಷೇತ್ರದ ಅಭಿವೃದ್ದಿ ಮಾಡಿದ್ದೇನೆ ಎಂದು ಕಂಡ ಕಂಡಲ್ಲಿ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಷ್ಟೊಂದು ಕೋಟಿಗಳನ್ನು ತಂದು ಖರ್ಚು ಮಾಡಿದ್ದರೆ ತಾಲೂಕಿನ ಬಹುತೇಕ ರಸ್ತೆಗಳು ಹಳ್ಳ ಗುಣಿಗಳಿಂದ ಇರುತ್ತಿರಲಿಲ್ಲ.  ಡಿ.ಎಂ.ನಂಜುಂಡಪ್ಪ ವರದಿಯಂತೆ ಈ ತಾಲೂಕು ಅತ್ಯಂತ ಹಿಂದುಳಿದ ಪ್ರದೇಶ. ಇದಕ್ಕೆ ತಕ್ಕ ಹಾಗೆ ಅನುದಾನ ತಂದಿಲ್ಲ. ಶಾಶ್ವತವಾದ ಯಾವುದೇ ನದಿ ನಾಲೆಗಳಿಲ್ಲ. ನಿರುದ್ಯೊಗ ಸಮಸ್ಯೆ ನೀಗಿಸಲು ಕಾರ್ಖಾನೆಗಳಿಲ್ಲ.  ಕೂಲಿ ಕಾರ್ಮಿಕರು ಕೆಲಸವಿಲ್ಲದೇ ನಗರ ಪ್ರದೇಶಗಳಿಗೆ ಗುಳೇ ಹೋಗುತ್ತಿದ್ದಾರೆ. ಇವುಗಳೆಲ್ಲವನ್ನು ಬಿಟ್ಟು ಮದುವೆಗಳನ್ನು ಮಾಡಿ ಜನರನ್ನು ಮರಳು ಮಾಡುತ್ತಿದ್ದಾರೆ. ನಾನು ಸ್ಥಳಿಯ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಏಕೆ ವಾಸವಾಗುತ್ತಿದ್ದಾರೆ? ಎಂದು ಶಾಸಕರ ವಿರುದ್ದ ವಾಗ್ದಾಳಿ ನಡೆಸಿದರು.

ನಾನು ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ನಮ್ಮ ಪಕ್ಷದಲ್ಲಿಯೂ ಗುಂಜೂರು ಶ್ರೀನಿವಾಸರೆಡ್ಡಿ, ಡಿ.ಜೆ.ನಾಗರಾಜರೆಡ್ಡಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಅವರ ಮನವೊಲಿಸಿ ಇವರನ್ನು ಜೊತೆಗೆ ಹಾಕಿಕೊಂಡು ತಾಲೂಕಿನಾದ್ಯಂತ ಪ್ರವಾಸ ಕೈಗೊಂಡು ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದು ಮುನ್ನಡೆಯುತ್ತೇನೆ. ಈ ಬಾರಿ ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಯುವ ಜನತಾದಳ ಲಕ್ಷ್ಮಿನಾರಾಯಣ, ಅಲ್ಪ ಸಂಖ್ಯಾತರ ವಿಭಾಗದ ತಾಲೂಕು ಅಧ್ಯಕ್ಷ ಮಹಮದ್ ಎಸ್ ನೂರುಲ್ಲ, ಮುಖಂಡರಾದ ಸಿ.ಡಿ.ಗಂಗುಲಪ್ಪ, ಪ್ರಕಾಶ್, ಜಿನ್ನಿ, ಗೂಳೂರು ಲಕ್ಷ್ಮಿನಾರಾಯಣ, ಬಾನುಪ್ರಕಾಶ್, ಡಿ.ಸಿ.ಶ್ರೀನಿವಾಸ ಲಕ್ಷ್ಮಿನಾರಾಯಣರೆಡ್ಡಿ, ಪುರಸಭೆ ಸದಸ್ಯ ಎಲ್.ಭಾಸ್ಕರ್, ಬಾಲಾಜಿ ಪ್ರದೀಪ್, ಸುನಿಲ್, ವೆಂಕಟರಾಂ, ವಿಜಯ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X