Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾನಪದ ಕಲೆ ಎಂದಿಗೂ ನಶಿಸಲಾರದು:...

ಜಾನಪದ ಕಲೆ ಎಂದಿಗೂ ನಶಿಸಲಾರದು: ಪಿ.ಕೆ.ರಾಜಶೇಖರ್

ವಾರ್ತಾಭಾರತಿವಾರ್ತಾಭಾರತಿ21 Feb 2018 10:05 PM IST
share
ಜಾನಪದ ಕಲೆ ಎಂದಿಗೂ ನಶಿಸಲಾರದು: ಪಿ.ಕೆ.ರಾಜಶೇಖರ್

ಮೈಸೂರು,ಫೆ.21: ಜಾನಪದ ಕಲೆ ಎಂಬುದು ಯಾವತ್ತೂ ನಶಿಸಲಾರದು. ಈ ಕಲೆ ವಿನಾಶವಾಗುವುದಿಲ್ಲ. ಒಂದಲ್ಲ ಒಂದು ರೂಪದಲ್ಲಿ ಮತ್ತೆ ಮತ್ತೆ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುತ್ತದೆ ಎಂದು ಹೆಸರಾಂತ ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕನ್ನಡ ಅಧ್ಯಾಪಕ ಡಾ.ಪಿ.ಕೆ.ರಾಜಶೇಖರ್ ಹೇಳಿದರು.

ಹೆಚ್.ಡಿ.ಕೋಟೆ ತಾಲೂಕು ಜಿ.ಬಿ.ಸರಗೂರಿನ ಸರ್ಕಾರಿ ಪ್ರೌಢಶಾಲೆ ಹಾಗೂ ಮೈಸೂರಿನ ಬ್ಲೂಕ್ಯಾನ್ವಾಸ್ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ಸುಚಿತ್ರಾ ಕಲಾ ಗ್ಯಾಲರಿಯಲ್ಲಿ ಶಾಲಾ ಮಕ್ಕಳ ತೊಗಲು ಗೊಂಬೆ ಚಿತ್ರಪ್ರದರ್ಶನ “ಚಿಣ್ಣರ ಕಲಾ ಬಿಂಬ” ನಶಿಸುತ್ತಿರುವ ಕಲೆಗಳಿಗೆ ಮರುಜೀವದ ಭಾವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

ಮಕ್ಕಳು ತುಂಬಾ ಅರ್ಪಣಾ ಮನೋಭಾವದಿಂದ, ಬದ್ಧತೆಯಿಂದ, ಪ್ರೀತಿಯಿಂದ ಬಿಡಿಸಿರುವ ಚಿತ್ರಗಳ ರೀತಿ ಆಶ್ಚರ್ಯ ಹಾಗೂ ಸೋಜಿಗವನ್ನು ಉಂಟುಮಾಡುತ್ತದೆ. ಒಬ್ಬರಿಗಿಂತ ಒಬ್ಬರು ಉತ್ತಮವಾಗಿ ಚಿತ್ರ ಬಿಡಿಸಿದ್ದಾರೆ. ಮಕ್ಕಳಲ್ಲಿ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸುವ ಇಂತಹ ಅಧ್ಯಾಪಕರನ್ನು ರಾಷ್ಟ್ರದ ರೂವಾರಿ ಎನ್ನಬಹುದು ಎಂದರು.

ಮಕ್ಕಳನ್ನು ಕಲಾತ್ಮಕ ಬದುಕಿನೆಡೆಗೆ ಕೊಂಡೊಯ್ಯಬೇಕು. ಅವರ ಬದುಕು ಸುಖ ಶಾಂತಿಯಿಂದ ಇರುವಂತೆ, ಸತ್ಪ್ರಜೆಗಳಾಗಿ ರೂಪಿಸಬೇಕು ಎಂಬ ಆದರ್ಶ ಇಟ್ಟುಕೊಂಡು ಈ ಶಾಲೆಯ ಅಧ್ಯಾಪಕರು ಕೆಲಸ ಮಾಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಹಳ್ಳಿಯ ಮಕ್ಕಳನ್ನು ಹೇಗೆ ತಿದ್ದಿ-ತೀಡಿ ಬೆಳೆಸಬಹುದು ಎಂಬುದಕ್ಕೆ ಜಿ.ಬಿ.ಸರಗೂರಿನ  ಪ್ರೌಢಶಾಲೆ ಮಾದರಿಯಾಗಿದೆ. ಸರ್ಕಾರಿ ಶಾಲೆ ಎಂದರೆ ಇತ್ತೀಚೆಗೆ ಹೆಚ್ಚು ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಆದರೆ ಸರ್ಕಾರಿ ಶಾಲೆಯ ಮಕ್ಕಳನ್ನು ಬಹಳ ಎತ್ತರಕ್ಕೆ ಯಾವುದೇ ಖಾಸಗಿ ಶಾಲೆಗಿಂತ ಉತ್ತಮವಾಗಿ ಬೆಳೆಸಿದ್ದಾರೆ ಎಂದು ಹೇಳಿದರು. ತೊಗಲು ಗೊಂಬೆಯನ್ನು ಜಿಂಕೆಯ ಚರ್ಮದಿಂದ ಮಾಡಿ ಬಿಳಿ ಪರದೆಯ ಮೇಲೆ ಅದರ ಬಿಂಬ ಬೀಳುವಂತೆ ಪ್ರದರ್ಶಿಸಲಾಗುತ್ತಿತ್ತು. ಈಗ ಜಿಂಕೆಯ ಚರ್ಮ ಬಳಸುವುದು ಅಪರಾಧವಾಗುವುದರಿಂದ ಮೇಕೆಯ ಚರ್ಮ ಬಳಸಿ ಬಿಳಿ ಪರದೆಯ ಮೇಲೆ ಅದರ ಬೆಳಕಿನ ಬಿಂಬ ಪ್ರದರ್ಶಿಸಲಾಗುತ್ತದೆ ಎಂದು ಕಲಾನಿಕೇತನ ಸ್ಕೂಲ್ ಆಫ್ ಆರ್ಟ್ಸ್ ನ ಪ್ರಾಂಶುಪಾಲರಾದ ಮಹದೇವಶೆಟ್ಟಿ ಹೇಳಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಆರ್.ರಾಜು, ಜಿ.ಬಿ.ಸರಗೂರು ಸರ್ಕಾರಿ ಪ್ರೌಢಶಾಲೆ ಮುಖ್ಯೋಪಧ್ಯಾಯ ಮಲ್ಲೇಶ್, ಸಂಗೀತ ಶಿಕ್ಷಕರಾದ ಸಂಗೀತಾ ಕೆ. ತಾಲೂಕು ಪಂಚಾಯತಿ ಸದಸ್ಯ ನಟರಾಜ್, ಗ್ರಾಮ ಪಂಚಾಯತ್  ಅಧ್ಯಕ್ಷ ರಾಮಯ್ಯ, ಎಸ್.ಡಿ.ಎಂ.ಸಿ.ಅಧ್ಯಕ್ಷ ಶಿವರಾಮ್, ಊರಿನ ನಾಟಕ ಶಿಕ್ಷಕರಾದ ಕರೀಗೌಡ, ಬ್ಲೂಕ್ಯಾನ್ವಾಸ್‍ನ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.  

ಕಲಾಪ್ರದರ್ಶನದಲ್ಲಿ ವಿದ್ಯಾರ್ಥಿಗಳಾದ ಅರ್ಚನ ಸಿ, ಅಖಿಲ ಎಂ, ಅಶ್ವಿನಿ ಎಸ್, ಅಶ್ವತ್ಥ ಎಂ, ಚರಣ್ ಸಿ, ದರ್ಶನ್ ಆರ್, ದೀಪಕ್ ಗೌಡ, ದೀಪಿಕಾ, ಕೀರ್ತನಾ ಕೆ, ಕಾವ್ಯ ಜಿ. ಮನೋಜ್ ಕುಮಾರ್ ಎಸ್. ನಿಸರ್ಗ ಎಸ್, ನಿಶ್ಚಿತ ಎಸ್, ಪಲ್ಲವಿ ಎಸ್, ಪ್ರೀತಿ ಎಸ್, ಪ್ರೇಮ ಪ, ಪುಷ್ಪಲತಾ ಜೆ, ರಾಧಿಕಾ ಆರ್. ರಂಜನಿ ಎನ್, ರಕ್ಷಿತಾ ಜೆ, ರಕ್ಷಿತಾ ಎಸ್, ರೂಪ ಟಿ, ಸಚಿನ್ ಟಿ, ಸಂದೀಪ್ ಎನ್, ಸಿಂಧೂ ಎಸ್, ಶ್ವೇತಾ ಎಂ, ಸುಚಿತ್ರ ಎಂ, ಸುನಿಲ್ ಕುಮಾರ್ ಬಿ, ಸ್ಪಂದನ ಸಿ, ಸತೀಶ್ ಕೆ, ಸ್ವಾತಿ ಇ, ವೇಣುಗೋಪಾಲ್ ಎನ್ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X