Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹರೈನ್: ಮಾನವಹಕ್ಕು ಹೋರಾಟಗಾರನಿಗೆ 5...

ಬಹರೈನ್: ಮಾನವಹಕ್ಕು ಹೋರಾಟಗಾರನಿಗೆ 5 ವರ್ಷ ಸಜೆ

ವಾರ್ತಾಭಾರತಿವಾರ್ತಾಭಾರತಿ21 Feb 2018 10:31 PM IST
share
ಬಹರೈನ್: ಮಾನವಹಕ್ಕು ಹೋರಾಟಗಾರನಿಗೆ 5 ವರ್ಷ ಸಜೆ

ದುಬೈ, ಫೆ. 21: ತನ್ನ ದೇಶದ ಜೈಲುಗಳಲ್ಲಿ ಹಿಂಸೆ ನೀಡಲಾಗುತ್ತಿದೆ ಹಾಗೂ ಯಮನ್‌ನಲ್ಲಿ ಸೌದಿ ಅರೇಬಿಯ ನಡೆಸುತ್ತಿರುವ ಯುದ್ಧದಲ್ಲಿ ದುರ್ವರ್ತನೆ ತೋರಿಸಲಾಗುತ್ತಿದೆ ಎಂಬುದಾಗಿ ಟ್ವೀಟ್‌ಗಳನ್ನು ಮಾಡಿದ್ದ ಬಹರೈನ್‌ನ ಖ್ಯಾತ ಮಾನವಹಕ್ಕುಗಳ ಹೋರಾಟಗಾರ ನಬೀಲ್ ರಜಬ್‌ರಿಗೆ ಬುಧವಾರ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಅವರು ಈಗಾಗಲೇ, ಬಹರೈನ್ ಆಡಳಿತವನ್ನು ಟೀಕಿಸಿ ನೀಡಿರುವ ಟಿವಿ ಸಂದರ್ಶನಗಳಿಗಾಗಿ ಎರಡು ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ವರ್ಷದ ಜುಲೈಯಲ್ಲಿ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಅವರ ಜೈಲು ವಾಸದ ಅವಧಿಯಲ್ಲಿ, ಹೃದಯದ ಕಾಯಿಲೆಗಳು ಮತ್ತು ಹೊಟ್ಟೆ ಹುಣ್ಣುಗಳಿಗಾಗಿ ಈಗಾಗಲೇ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

 ರಜಬ್ ‘ಉತ್ಸಾಹಭರಿತ ನಗು’ವಿನೊಂದಿಗೆ ನ್ಯಾಯಾಲಯವನ್ನು ಪ್ರವೇಶಿಸಿದ್ದಾರೆ ಎಂದು ಹೇಳುವ ಸಂದೇಶವೊಂದನ್ನು ಬುಧವಾರ ಅವರ ಟ್ವಿಟರ್ ಪುಟಕ್ಕೆ ಹಾಕಲಾಗಿತ್ತು. ನ್ಯಾಯಾಲಯ ತನ್ನ ತೀರ್ಪು ಘೋಷಿಸಿದ ಬಳಿಕ, ಅವರು ಶಾಂತಿಯ ಸೂಚನೆಯನ್ನು ವ್ಯಕ್ತಪಡಿಸುತ್ತಾ ಕೈಗಳನ್ನು ಮೇಲಕ್ಕೆತ್ತಿದರು ಹಾಗೂ ಮುಗುಳುನಕ್ಕರು.

2011ರ ‘ಅರಬ್ ಬಂಡಾಯ’ ಪ್ರತಿಭಟನೆಗಳನ್ನು ಬಹರೈನ್ ಹತ್ತಿಕ್ಕಿದ ಬಳಿಕ ರಜಬ್‌ರ ಕಷ್ಟದ ದಿನಗಳು ಆರಂಭವಾಗಿದ್ದವು.

ಪೊಲೀಸ್ ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ಹುಟ್ಟುಹಾಕಿದ ಆರೋಪದಲ್ಲಿ 2012 ಆಗಸ್ಟ್‌ನಲ್ಲಿ ರಜಬ್‌ರಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಎರಡು ವರ್ಷಗಳನ್ನು ಜೈಲಿನಲ್ಲಿ ಕಳೆದ ಬಳಿಕ, 2014ರ ಮೇ ತಿಂಗಳಲ್ಲಿ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಯಿತು.

 ಆದರೆ, ಟ್ವಿಟರ್‌ನಲ್ಲಿ ಸರಕಾರ ವಿರೋಧಿ ಹೇಳಿಕೆಗಳನ್ನು ನೀಡಿರುವುದಕ್ಕಾಗಿ ಅವರನ್ನು ಮತ್ತೆ ಬಂಧಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X