Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಪುಟ್ಟಣ್ಣಯ್ಯಗೆ ಪ್ರಗತಿಪರ,...

ಮಂಡ್ಯ: ಪುಟ್ಟಣ್ಣಯ್ಯಗೆ ಪ್ರಗತಿಪರ, ಕನ್ನಡ ಸಂಘಟನೆಗಳಿಂದ ಶ್ರದ್ಧಾಂಜಲಿ

ವಾರ್ತಾಭಾರತಿವಾರ್ತಾಭಾರತಿ21 Feb 2018 11:27 PM IST
share
ಮಂಡ್ಯ: ಪುಟ್ಟಣ್ಣಯ್ಯಗೆ ಪ್ರಗತಿಪರ, ಕನ್ನಡ ಸಂಘಟನೆಗಳಿಂದ ಶ್ರದ್ಧಾಂಜಲಿ

ಮಂಡ್ಯ, ಫೆ.21: ಜಿಲ್ಲೆಯ ವಿವಿಧ ಪ್ರಗತಿಪರ ಮತ್ತು ಕನ್ನಡ ಸಂಘಟನೆಗಳಿಂದ ನಗರದ ಸಹ್ಯಾದ್ರಿ ಸಂಕೀರ್ಣದಲ್ಲಿ  ರೈತ ನಾಯಕ, ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಶ್ರದ್ಧಾಂಜಲಿ ಸಭೆ ನಡೆಯಿತು. 

ರೈತಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್ ಮಾತನಾಡಿ, ನನ್ನಂತಹ ನೂರಾರು ಕಾರ್ಯಕರ್ತರಿಗೆ ಚಳವಳಿಯ ಶಕ್ತಿ ಮತ್ತು ಉತ್ಸಾಹವನ್ನು ತುಂಬಿದ ಪುಟ್ಟಣ್ಣಯ್ಯ ಅವರ ಅಗಲಿಕೆ ಅನಾಥ ಪ್ರಜ್ಞೆ ಮೂಡಿಸಿದೆ ಎಂದರು. ಚಳವಳಿಯ ಸಂದರ್ಭದಲ್ಲಿ ಪುಟ್ಟಣ್ಣಯ್ಯ ಅವರು ಜೈಲಿನಲ್ಲಿ ಪರಿಚಯವಾದರು. ಅವರ ಹೋರಾಟ ಮತ್ತು ಸಿದ್ಧಾಂತಗಳನ್ನು ಒಪ್ಪಿ ನಾನು ರೈತ ಸಂಘಕ್ಕೆ ಸೇರಿದೆ. ಇಂತಹ ಮತ್ತೊಬ್ಬ ಪುಟ್ಟಣ್ಣಯ್ಯ ಹುಟ್ಟಲು ಸಾಧ್ಯವೇ ಎಂದು ಅವರು ನುಡಿದರು.

ಕಾವೇರಿ ಕಣಿವೆ ರೈತ ಒಕ್ಕೂಟದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಮಾತನಾಡಿ, ಪುಟ್ಟಣ್ಣಯ್ಯ ಅವರು ರೈತಸಂಘ ಮತ್ತು ಕ್ಷೇತ್ರದ ಶಾಸಕತ್ವಕ್ಕೆ ಸೀಮಿತವಾಗದೆ, ಎಲ್ಲಾ ಜನಪರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಎಲ್ಲ ವರ್ಗದವರನ್ನೂ ಒಟ್ಟಿಗೆ ಕೊಂಡೊಯ್ಯುವ ಹೃದಯವಂತಿಕೆ ಅವರಲ್ಲಿತ್ತು ಎಂದು ಸ್ಮರಿಸಿದರು.

ಪುಟ್ಟಣ್ಣಯ್ಯ ಅವರು ಸಾಮಾಜಿಕ, ಸಾಂಸ್ಕೃತಿಕ ಮತ್ತು ರೈತಪರ ನಾಯಕರಾಗಿದ್ದರು. ಅಸಮಾನತೆ, ಜಾತೀಯತೆ, ಧರ್ಮಾಂಧತೆ ಮತ್ತು ಮಹಿಳಾ ಶೋಷಣೆ ವಿರುದ್ಧ ಸರಳ ಮತ್ತು ನವಿರಾದ ಹಾಸ್ಯದ ಮೂಲಕ ಜಾಗೃತಿಯ ಮೂಡಿಸಿ ಪರಿಹಾರವನ್ನೂ ಸೂಚಿಸುತ್ತಿದ್ದರು. ಅವರೊಬ್ಬ ರಾಜಕೀಯ ಸಂತರಾಗಿದ್ದರು ಎಂದು ಡಿ.ದೇವರಾಜ ಅರಸು ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ವಿಶ್ಲೇಷಿಸಿದರು.

ಕರವೇ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ ಮಾತನಾಡಿ, ಪುಟ್ಟಣ್ಣಯ್ಯ ರೈತ ಹೋರಾಟಗಳಿಗೆ ಸೀಮಿತವಾಗದೆ, ಕನ್ನಡ ನಾಡು, ನುಡಿ, ನೆಲ, ಜಲ ಸಂರಕ್ಷಣೆಗಾಗಿ ನಡೆಯುತ್ತಿದ್ದ ಚಳವಳಿಗಳಿಗೆ ಬೆನ್ನೆಲುಬಾಗಿದ್ದರು ಎಂದರು. 

ಜಿಲ್ಲಾ ಕೇಂದ್ರದಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಅವರ ಪ್ರತಿಮೆ ಸ್ಥಾಪಿಸುವಂತೆ ವಿಶ್ವಕರ್ಮ ಜಿಲ್ಲಾ ಸಂಘದ ಅಧ್ಯಕ್ಷ ಎಚ್.ಪಿ. ಸತೀಶ್ ಒತ್ತಾಯಿಸಿದರು.

ಜಿಲ್ಲಾ ಕುಂಬಾರರ ಜಾಗೃತ ವೇದಿಕೆ ಅಧ್ಯಕ್ಷ ಎಂ.ಕೃಷ್ಣ, ಜಿಲ್ಲಾ ಭಜಂತ್ರಿ ಸೇವಾ ಸಮಿತಿ ಅಧ್ಯಕ್ಷ ಎಂ.ಎಸ್.ರಾಜಣ್ಣ, ಮಡಿವಾಳ ಸಮಾಜದ ಮುಖಂಡ ಸಿ.ಸಿದ್ದಶೆಟ್ಟಿ, ಗಾಣಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಅರಸು ವೇದಿಕೆ ಆಟೋ ಘಟಕದ ಅಧ್ಯಕ್ಷ ಆನಂದ್,  ರೈತಸಂಘದ ಲತಾ ಶಂಕರ್, ಕರವೇ ಕಲಾವಿದ ಪ್ರಕಾಶ್, ಶಶಿಧರ್ ಸಿಂಗ್, ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X