ಮಂಡ್ಯ: ಹಾಡಹಗಲೇ ಮನೆಗೆ ನುಗ್ಗಿ ಕಳವು
![ಮಂಡ್ಯ: ಹಾಡಹಗಲೇ ಮನೆಗೆ ನುಗ್ಗಿ ಕಳವು ಮಂಡ್ಯ: ಹಾಡಹಗಲೇ ಮನೆಗೆ ನುಗ್ಗಿ ಕಳವು](/images/placeholder.jpg)
ಮಂಡ್ಯ, ಫೆ.21: ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಹಾಡುಹಗಲೇ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನಾಭರಣ, ಎರಡು ಲಕ್ಷ ನಗದನ್ನು ದೋಚಿ ದೋಚಿ ಪರಾರಿಯಾಗಿದ್ದಾರೆ.
ಸಿ.ಬಿ.ಜೈಕುಮಾರ್ ಎಂಬುವರ ಮನೆಗೆ ನುಗ್ಗಿ 2.17 ಲಕ್ಷ ರೂ. ಹಾಗೂ 250 ಗ್ರಾಂ ಚಿನ್ನ, 500 ಗ್ರಾಂ ಬೆಳ್ಳಿ ಆಭರಣಗಳನ್ನು ದುಷ್ಕರ್ಮಿಗಳು ದೋಚಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಸಿ.ಬಿ.ಜೈಕುಮಾರ್ ಕುಟುಂಬದವರು ಕಾರ್ಯನಿಮಿತ್ರ ಪಾಂಡವಪುರಕ್ಕೆ ತೆರಳಿದ್ದಾಗ, ದುಷ್ಕರ್ಮಿಗಳು ಬಾಗಿಲು ಮುರಿದು ಒಳನುಗ್ಗಿ ಎರಡು ಬೀರುಗಳನ್ನು ಒಡೆದು ಕಳವು ಮಾಡಿ ಪರಾರಿಯಾಗಿದ್ದಾರೆ.
ಜೈಕುಮಾರ್ ಪತ್ನಿ ಗೌರಮ್ಮ ಮನೆಗೆ ಆಗಮಿಸಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದ್ದು, ಸುದ್ದಿ ತಿಳಿದ ತಕ್ಷಣ ಪೊಲೀಸರು, ಶ್ವಾನದಳ, ಬೆಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜೈಕುಮಾರ್ ನೀಡಿರುವ ದೂರಿನ ಮೇರೆಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story