Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫೆ.23-27: ಚೆರಿಯಪರಂಬು ಮಖಾಂ ಉರೂಸ್‍

ಫೆ.23-27: ಚೆರಿಯಪರಂಬು ಮಖಾಂ ಉರೂಸ್‍

ವಾರ್ತಾಭಾರತಿವಾರ್ತಾಭಾರತಿ22 Feb 2018 5:12 PM IST
share
ಫೆ.23-27: ಚೆರಿಯಪರಂಬು ಮಖಾಂ ಉರೂಸ್‍

ಮಡಿಕೇರಿ,ಫೆ.22:ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಉರೂಸ್ ಫೆ.23 ರಿಂದ 27ವರೆಗೆ ನಡೆಯಲಿದೆ ಎಂದು ಚೆರಿಯಪರಂಬು ಜಮಾಅತ್ ಸಮಿತಿ ಕಾರ್ಯದರ್ಶಿ ಪಿ.ಎಂ.ಅಬ್ದುಲ್ ಕರೀಂ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಫೆ. 23 ರಂದು ಚೆರಿಯಪರಂಬುವಿನ ಖತೀಬ್ ಉಸ್ತಾದ್ ಹನೀಫ್ ಫಾಳಿಲಿ  ಉರೂಸ್‍ನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಚೆರಿಯಪರಂಬು ಜಮಾಅತ್‍ನ ಅಧ್ಯಕ್ಷರಾದ ಬಿ.ಎಂ.ಬಷೀರ್ ಹಾಜಿ ಧ್ವಜಾರೋಹಣ ಮಾಡಲಿದ್ದಾರೆ. ಅಂದು ಸಂಜೆ 6 ಗಂಟೆಗೆ ಖತಂ ದುಆ ಕಾರ್ಯಕ್ರಮವನ್ನು ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದ್ರೂಸಿ ಕಿಲ್ಲೂರ್ ತಂಙಳ್ ನೆರವೇರಿಸಲಿದ್ದಾರೆಂದರು. 

ಫೆ. 23 ಮತ್ತು 24 ರಂದು ರಾತ್ರಿ 8 ಗಂಟೆಗೆ ಪ್ರಖ್ಯಾತ ಝಬೈರ್ ಮಾಸ್ಟರ್ ತೋಟಿಕ್ಕಲ್ ಮತ್ತು ಸಂಗಡಿಗರಿಂದ ಕಥಾ ಪ್ರಸಂಗ ನಡೆಯಲಿದೆ.ಫೆ. 25 ರಂದು ಉಸ್ತಾದ್ ಜಲೀಲ್ ಸಖಾಫಿ ಚೆರುಶೋಲ ಅವರಿಂದ ಹಾಗೂ ಫೆ. 26 ರಂದು ಖ್ಯಾತ ವಾಗ್ಮಿ ಉಸ್ತಾದ್ ಯಹ್ಯ ಬಾಖವಿ ಪುಝಕ್ಕರ ಅವರಿಂದ  ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು.

ಫೆ.26 ರಂದು ಮಧ್ಯಾಹ್ನ 2 ಗಂಟೆಗೆ ನಡೆಯುವ ಸರ್ವ ಧರ್ಮ ಸಮ್ಮೇಳನದ ಅಧ್ಯಕ್ಷತೆಯನ್ನು ಜಮಾಅತ್‍ನ ಅಧ್ಯಕ್ಷರಾದ ಬಿ.ಎಂ. ಬಷೀರ್ ಹಾಜಿ ವಹಿಸಲಿದ್ದು,  ಬಹು ಉಸ್ತಾದ್ ಅಲ್ ಹಾಜ್ ಕೆ.ಎ. ಮಹಮೂದ್ ಮುಸ್ಲಿಯಾರ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೊಡಗು ಜಂಇಯ್ಯತ್ತುಲ್ ಉಲಮದ ಅಧ್ಯಕ್ಷರಾದ ಬಹು ಉಸ್ತಾದ್ ಅಬೂ ಸೂಫಿಯಾನ್ ಇಬ್ರಾಹಿಂ ಮದನಿ ಮುಖ್ಯ ಭಾಷಣ ಮಾಡಲಿದ್ದಾರೆಂದರು.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾದ ಎಂ.ಹೆಚ್. ಅಬ್ದುಲ್ ರಹ್ಮಾನ್, ನಾಪೋಕ್ಲು ಗ್ರಾ.ಪಂ. ಅಧ್ಯಕ್ಷರಾದ ಕೆ.ಎ. ಇಸ್ಮಾಯಿಲ್, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ, ಜಿಪಂ ಸದಸ್ಯರಾದ ಪಾಡಿಯಮ್ಮಂಡ ಕೆ. ಮುರಳಿ, ಕೊಟ್ಟಮುಡಿ ಮರ್ಕಝ್ ಪಬ್ಲಿಕ್ ಸ್ಕೂಲ್‍ನ ಕಾರ್ಯದರ್ಶಿ ಅದವೇಲ್ ಮುಹಮ್ಮದ್ ಹಾಜಿ ಸೇರಿದಂತೆ ಇನ್ನಿತರ ಧಾರ್ಮಿಕ ರಾಜಕೀಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಅನ್ನದಾನ ನಡೆಯಲಿದೆ ಎಂದು ತಿಳಿಸಿದರು.

ಫೆ.27 ರಂದು ರಾತ್ರಿ 7 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಇದನ್ನು  ಉಸ್ತಾದ್ ಅಬ್ದುಲ್ ಹಖೀಂ ಸಖಾಫಿ ಉದ್ಘಾಟಿಸಲಿದ್ದಾರೆ. ಸಯ್ಯಿದ್ ಮುಹಮ್ಮದ್ ಸಾಲಿಂ ಸಖಾಫಿ ಅಲ್ ಬುಖಾರಿ,  ಕಾಸರಗೋಡಿನ ಬಹು ಉಸ್ತಾದ್ ಸ್ವಾಲಿಹ್ ಸಅದಿ ಸೇರಿದಂತೆ ಹಲ  ಗಣ್ಯರು  ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಮಾಅತ್ ಅಧ್ಯಕ್ಷರಾದ ಬಷೀರ್ ಹಾಜಿ, ಸಹ ಕಾರ್ಯದರ್ಶಿ ಸಿ.ಎಂ. ಉಸ್ಮಾನ್, ಸದಸ್ಯರುಗಳಾದ ಪಿ.ಎ. ಹನೀಫ್, ಪಿ.ಹೆಚ್. ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X