Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಾದಿಯಾ ಮದುವೆ ಅನೂರ್ಜಿತಗೊಳಿಸಿರುವ ಕ್ರಮ...

ಹಾದಿಯಾ ಮದುವೆ ಅನೂರ್ಜಿತಗೊಳಿಸಿರುವ ಕ್ರಮ ಸಮರ್ಥನೀಯವೇ?: ಕೇರಳ ಹೈಕೋರ್ಟ್‌ಗೆ ಸುಪ್ರೀಂ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 Feb 2018 7:42 PM IST
share
ಹಾದಿಯಾ ಮದುವೆ ಅನೂರ್ಜಿತಗೊಳಿಸಿರುವ ಕ್ರಮ ಸಮರ್ಥನೀಯವೇ?: ಕೇರಳ ಹೈಕೋರ್ಟ್‌ಗೆ ಸುಪ್ರೀಂ ಪ್ರಶ್ನೆ

ಹೊಸದಿಲ್ಲಿ, ಫೆ.22: ಇಬ್ಬರು ವಯಸ್ಕ ವ್ಯಕ್ತಿಗಳು ಪರಸ್ಪರ ಒಪ್ಪಿ ವಿವಾಹವಾಗಿರುವಾಗ ಅವರ ಸಮ್ಮತಿಯ ಕುರಿತಂತೆ ತನಿಖೆ ನಡೆಸಲು ಆದೇಶ ನೀಡಬಹುದೇ?, ಲವ್ ಜಿಹಾದ್ ಸಂತ್ರಸ್ತೆ ಎಂದು ಹೇಳಲಾಗುತ್ತಿರುವ ಹಾದಿಯಾಳ ಮದುವೆಯನ್ನು ಅನೂರ್ಜಿತಗೊಳಿಸಿರುವ ಕೇರಳ ಉಚ್ಚ ನ್ಯಾಯಾಲಯದ ಕ್ರಮವು ಸಮರ್ಥನೀಯವೇ? ಎಂದು ಸರ್ವೋಚ್ಚ ನ್ಯಾಯಾಲಯ ಗುರುವಾರದಂದು ಪ್ರಶ್ನಿಸಿದೆ.

ದೇಶಾದ್ಯಂತ ಸುದ್ದಿಯಾಗಿರುವ ಹಾದಿಯಾ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಆಲಿಸುತ್ತಿದ್ದ ವೇಳೆ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಮತ್ತು ನ್ಯಾಯಾಧೀಶ ಎ.ಎಂ ಖಾನ್ವಿಲ್ಕರ್ ಹಾಗೂ ಡಿ.ವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠವು ಈ ಪ್ರಶ್ನೆಯನ್ನು ಕೇಳಿದೆ.

ಮದುವೆ ಮತ್ತು ತನಿಖೆ ಎರಡೂ ಬೇರೆಬೇರೆಯಾಗಿದೆ. ಮದುವೆಯ ಬಗ್ಗೆ ಹೇಳುವುದಾದರೆ ಅದನ್ನು ತನಿಖೆ ನಡೆಸುವ ಅಗತ್ಯವಿಲ್ಲ. ಅದಕ್ಕೂ ತನಿಖೆಗೂ ಸಂಬಂಧವಿಲ್ಲ. ನೀವು ಇತರ ಯಾವುದೇ ವಿಷಯವನ್ನು ತನಿಖೆ ನಡೆಸಬಹುದು ಎಂದು ಪೀಠ ತಿಳಿಸಿದೆ. ಸದ್ಯ ಪ್ರಕರಣದ ಕೇಂದ್ರಬಿಂದುವಾಗಿರುವ 25ರ ಹರೆಯದ ಹಾದಿಯಾ ಮಂಗಳವಾರದಂದು ನ್ಯಾಯಾಲಯದಲ್ಲಿ ಅಫಿದಾವಿತ್ ಹಾಕಿದ್ದು, ತಾನು ಮನಪೂರ್ವಕವಾಗಿ ಇಸ್ಲಾಂಗೆ ಮತಾಂತರಗೊಂಡಿದ್ದು ತನ್ನ ಪತಿ ಶಫಿನ್ ಜಹಾನ್ ಜೊತೆ ಬದುಕಲು ಬಯಸುತ್ತೇನೆ ಎಂದು ತಿಳಿಸಿದ್ದಳು.

ಹಾದಿಯಾಳ ವಿವಾಹವನ್ನು ಅನೂರ್ಜಿತಗೊಳಿಸಿದ ಕೇರಳ ಉಚ್ಚ ನ್ಯಾಯಾಲಯ ಆಕೆಯನ್ನು ಆಕೆಯ ಹೆತ್ತವರ ಜೊತೆ ಕಳುಹಿಸಿತ್ತು. ನ್ಯಾಯಾಲಯದ ಈ ಕ್ರಮದ ವಿರುದ್ಧ ಶಫಿನ್ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಕಳೆದ ವರ್ಷ ನವೆಂಬರ್ 27ರಂದು ಹಾದಿಯಾಳನ್ನು ಆಕೆಯ ಹೆತ್ತವರಿಂದ ಮುಕ್ತಗೊಳಿಸಿದ ಶ್ರೇಷ್ಠ ನ್ಯಾಯಾಲಯ ಆಕೆ ತನ್ನ ವಿದ್ಯಾಭ್ಯಾಸ ಮುಂದುವರಿಸಲು ಕಾಲೇಜ್‌ಗೆ ತೆರಳಲು ಅನುಮತಿ ನೀಡಿತ್ತು. ತಾನು ಪತಿಯ ಮನೆಗೆ ಹೋಗಲು ಬಯಸುವುದಾಗಿ ಹಾದಿಯಾ ನ್ಯಾಯಾಲಯದಲ್ಲಿ ತಿಳಿಸಿದ್ದಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X